ವಿಧಾನ ಪರಿಷತ್‌ ಸ್ಥಾನ ಅನಿರೀಕ್ಷಿತ: ಹರೀಶ್‌ ಕುಮಾರ್‌


Team Udayavani, Jun 6, 2018, 4:45 PM IST

h.jpg

ಮಂಗಳೂರು: “ವಿಧಾನ ಪರಿಷತ್‌ ಸ್ಥಾನ ನನಗೆ ಅನಿರೀಕ್ಷಿತ. ಪಕ್ಷ ಗುರುತಿಸಿ ನನಗೆ ಈ ಅವಕಾಶವನ್ನು ನೀಡಿದೆ’ ಎಂದು ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಕಾಂಗ್ರೆಸ್‌ನಿಂದ ಆಯ್ಕೆಯಾಗಿರುವ ಕೆ. ಹರೀಶ್‌ ಕುಮಾರ್‌ ಅವರು ಹರ್ಷ ವ್ಯಕ್ತಪಡಿಸಿದ್ದಾರೆ.

ವಿಧಾನ ಪರಿಷತ್‌ ಸ್ಥಾನಕ್ಕೆ ಕಾಂಗ್ರೆಸ್‌ ಪಕ್ಷದೊಳಗೆ ಘಟಾನುಘಟಿ ನಾಯಕರಿಂದ ಪ್ರಬಲ ಪೈಪೋಟಿಯಿದ್ದರೂ ಟಿಕೆಟ್‌ ಆಕಾಂಕ್ಷಿಗಳ ರೇಸ್‌ನಲ್ಲಿ ಹೆಚ್ಚು ಸುದ್ದಿಯಲ್ಲಿಲ್ಲದ ಹರೀಶ್‌ ಕುಮಾರ್‌ ಪಕ್ಷದ ಅಭ್ಯರ್ಥಿಯಾಗಿ ಅನಿರೀಕ್ಷಿತವಾಗಿ ಆಯ್ಕೆಯಾಗಿದ್ದಾರೆ. ವಿಧಾನ ಪರಿಷತ್‌ ಸದಸ್ಯನಾಗಿ ಆಯ್ಕೆಯಾದ ಬಳಿಕ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್‌ ಕಚೇರಿಗೆ ಮಂಗಳವಾರ ಪ್ರಥಮ ಭೇಟಿಯ ಸಂದರ್ಭದಲ್ಲಿ ಉದಯವಾಣಿ ಜತೆ ಅವರು ಮಾತನಾಡಿದರು.

ವಿಧಾನ ಪರಿಷತ್‌ ಸ್ಥಾನಕ್ಕೆ ಅನಿರೀಕ್ಷಿತವಾಗಿತ್ತು. ಪಕ್ಷ ನಿಷ್ಠೆ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷನಾಗಿ ಕಳೆದ 10 ತಿಂಗಳಿನಿಂದ ನನ್ನ ಕಾರ್ಯ ನಿರ್ವಹಣೆಯನ್ನು ಗುರುತಿಸಿ ಈ ಸ್ಥಾನ ನೀಡಿದೆ ಎಂದರು.

ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿಯವರು ಚುನಾವಣಾ ಪೂರ್ವದಲ್ಲಿ ಜಿಲ್ಲೆಗೆ ಆಗಮಿಸಿದ ಸಂದರ್ಭದಲ್ಲಿ ಮಂಗಳೂರಿನಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಎಲ್ಲ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷರು, ಪ್ರಮುಖ ನಾಯಕರು, ಪದಾಧಿಕಾರಿಗಳ ಜತೆ ಸಂವಾದ ನಡೆಸಿದ್ದರು. ಈ ಸಂದರ್ಭ ಪಕ್ಷಕ್ಕಾಗಿ ನಿಷ್ಠಾವಂತ ಕಾರ್ಯಕರ್ತರನ್ನು ಗುರುತಿಸಿ ಸೂಕ್ತ ಸ್ಥಾನಮಾನ ನೀಡಬೇಕು ಎಂದು ಆಗ್ರಹಿಸಲಾಗಿತ್ತು. ಇದನ್ನು ಗಮನದಲ್ಲಿಟ್ಟುಕೊಂಡು ರಾಹುಲ್‌ ವಿಧಾನಪರಿಷತ್‌ನಲ್ಲಿ ಒಂದು ಸ್ಥಾನವನ್ನು ಜಿಲ್ಲಾಧ್ಯಕ್ಷರಿಗೆ ನೀಡಬೇಕು ಎಂಬ ಸೂಚನೆಯನ್ನು ಪಕ್ಷದ ರಾಜ್ಯ ಉಸ್ತುವಾರಿ ಕೆ.ಸಿ. ವೇಣುಗೋಪಾಲ್‌ಗೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಪಕ್ಷ ನನಗೆ ಈ ಸ್ಥಾನವನ್ನು ನೀಡಿದೆ ಎಂದು ನಾನು ಭಾವಿಸುತ್ತೇನೆ ಎಂದರು.

ಪ್ರಾಮಾಣಿಕತೆಗೆ ಸಂದ ಗೌರವ
ನನಗೆ ದೊರೆತಿರುವ ವಿಧಾನಪರಿಷತ್‌ ಸ್ಥಾನ ಪಕ್ಷದ ನಿಷ್ಠಾವಂತ, ಪ್ರಾಮಾಣಿಕ ಕಾರ್ಯಕರ್ತರಿಗೆ ಸಂದ ಗೌರವ ಎಂದು ಭಾವಿಸುತ್ತೇನೆ. ಪಕ್ಷಕ್ಕೆ ನಿಷ್ಠರಾಗಿ ಪ್ರಾಮಾಣಿಕತೆಯಿಂದ ದುಡಿದರೆ ಪಕ್ಷ ಒಂದಲ್ಲ ಒಂದು ದಿನ ಅವರ ಸೇವೆಯನ್ನು ಗುರುತಿಸುತ್ತದೆ ಎಂಬುದಕ್ಕೆ ಇದೊಂದು ನಿದರ್ಶನ. ಅವಕಾಶಕ್ಕಾಗಿ ತಾಳ್ಮೆ, ಸಹನೆಯಿಂದ ಕಾಯಬೇಕು ಎಂದು ಹರೀಶ್‌ ಕುಮಾರ್‌ ತಿಳಿಸಿದರು.

ಜವಾಬ್ದಾರಿ ಹೆಚ್ಚಿದೆ
“ದ.ಕ. ಜಿಲ್ಲೆಯಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಈ ರೀತಿಯ ಹಿನ್ನಡೆ ಅನಿರೀಕ್ಷಿತವಾಗಿತ್ತು.  ಈ ಕಾಲ ಘಟ್ಟದಲ್ಲಿ ಪಕ್ಷ ನನಗೆ ವಿಧಾನ ಪರಿಷತ್‌ ಸ್ಥಾನದ ಜವಾಬ್ದಾರಿ ನೀಡಿದೆ.

ಜಿಲ್ಲಾಧ್ಯಕ್ಷತೆಯ ಜತೆಗೆ ನನ್ನ ಹೊಣೆಗಾರಿಕೆ ಇನ್ನಷ್ಟು ಹೆಚ್ಚಾಗಿದೆ. ಇನ್ನು ಕೆಲವೇ ತಿಂಗಳುಗಳಲ್ಲಿ ಲೋಕಸಭಾ ಚುನಾವಣೆ ಬರಲಿದ್ದು ಸಿದ್ಧಗೊಳ್ಳಬೇಕಾಗಿದೆ. ಪಕ್ಷದ ಶಾಸಕರು, ಹಿರಿಯ ನಾಯಕರು, ಪದಾಧಿಕಾರಿಗಳ ಜತೆ
ಚರ್ಚಿಸಿ ಈ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ರೂಪಿಸಿ ಕೆಲಸ ಪ್ರಾರಂಭಿಸುತ್ತೇವೆ ಎಂದು ಹೇಳಿದರು.

ನಾನು ದಕ್ಷಿಣ ಕನ್ನಡ ಜಿಲ್ಲೆಗೆ ಸೇರಿದವನಾದುದರಿಂದ ಈ ಜಿಲ್ಲೆಯ ಸಮಸ್ಯೆಗಳ ಬಗ್ಗೆ ವಿಧಾನ ಪರಿಷತ್‌ನಲ್ಲಿ ಸರಕಾರದ ಗಮನ ಸೆಳೆದು ಪರಿಹಾರ ಕಂಡುಕೊಳ್ಳಲು, ಜಿಲ್ಲೆಯ ಅಭಿವೃದ್ಧಿಗೆ ಪ್ರಯತ್ನಿಸುತ್ತೇನೆ. ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷನಾಗಿ ಕಾರ್ಯನಿರ್ವಹಿಸಲು ವಿಧಾನಪರಿಷತ್‌ ಸದಸ್ಯ ಸ್ಥಾನ ಇನ್ನಷ್ಟು ಶಕ್ತಿ ನೀಡಿದೆ. ಪಕ್ಷ ಸಂಘಟನೆಗೆ ಇದೊಂದು ಅವಕಾಶ. ಜಿಲ್ಲೆಯಲ್ಲಿ ಪಕ್ಷವನ್ನು ಇನ್ನಷ್ಟು ಸದೃಢವಾಗಿ ಕಟ್ಟುವಲ್ಲಿ ಶ್ರಮಿಸುತ್ತೇನೆ ಎಂದು ಹರೀಶ್‌ ಕುಮಾರ್‌ ತಿಳಿಸಿದರು.

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.