ಕಡಬ: ಮರವೇರಿ ಕುಳಿತಿರುವ ಚಿರತೆಯನ್ನು ಸೆರೆ ಹಿಡಿಯಲು ಭರದ ಸಿದ್ಧತೆ
Team Udayavani, Feb 12, 2021, 11:34 AM IST
ಕಲ್ಲುಗುಡ್ಡೆ (ಕಡಬ): ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮ ಪಂಚಾಯತಿ ವ್ಯಾಪ್ತಿಯ ರೆಂಜಿಲಾಡಿ ಗ್ರಾಮದ ಹೇರ ಎಂಬಲ್ಲಿ ನಸುಕಿನ ಜಾವ ಇಬ್ಬರ ಮೇಲೆ ದಾಳಿ ನಡೆಸಿರುವ ಚಿರತೆಯನ್ನು ಸೆರೆ ಹಿಡಿಯಲು ಭರದ ಸಿದ್ಧತೆ ನಡೆಯುತ್ತಿದೆ.
ಸದ್ಯ ಮಾಹಿತಿ ಪ್ರಕಾರ ಚಿರತೆ ತೋಟದೊಳಗಿನಿಂದ ಮರವನ್ನೇರಿ ಕುಳಿತಿದೆ ಎನ್ನಲಾಗಿದೆ. ಚಿರತೆ ಸೆರೆ ಹಿಡಿಯಲು ವಿವಿಧ ತಯಾರಿಗಳನ್ನು ಸಿದ್ಧಪಡಿಸಲಾಗಿದೆ.
ಇದನ್ನೂ ಓದಿ:ಕಡಬ ತಾಲೂಕಿನ ರೆಂಜಿಲಾಡಿ: ತೋಟದಲ್ಲಿ ಚಿರತೆ ದಾಳಿ, ಇಬ್ಬರು ಆಸ್ಪತ್ರೆಗೆ ದಾಖಲು
ಸ್ಥಳಕ್ಕೆ ಎಸಿಎಫ್ ಆಸ್ಟೀನ್ ಪಿ. ಸೋನ್ಸ್, ರೇಂಜರ್ ರಾಘವೇಂದ್ರ, ಮಂಜುನಾಥ್, ಅಧಿಕಾರಿಗಳು, ಸಿಬ್ಬಂದಿಗಳು ಆಗಮಿಸಿ ಸೂಕ್ತ ಕ್ರಮ ಕೈಗೊಂಡಿದ್ದಾರೆ.
ಘಟನೆ: ಫೆ.12ರಂದು ನಸುಕಿನ ರೆಂಜಿಲಾಡಿ ಗ್ರಾಮದ ಹೇರ ನಿವಾಸಿ ಕೃಷಿಕರಾದ ಚಂದ್ರಶೇಖರ ಹಾಗೂ ಸೌಮ್ಯ ಕಾಮತ್ ಅವರು ಅಡಿಕೆ ತೋಟದಲ್ಲಿ ಸ್ಪಿಂಕ್ಲೇರ್ (ಜಟ್) ಬದಲಾಯಿಸುವಲ್ಲಿ ನಿರತರಾಗಿರುವ ವೇಳೆ ಚಿರತೆ ದಾಳಿ ನಡೆಸಿದೆ. ಗಾಯಗೊಂಡಿರುವ ಇವರನ್ನು ಕಡಬ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿ, ಹೆಚ್ಚಿನ ಚಿಕಿತ್ಸೆಗೆ ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ