ಗುದ್ದಲಿ ಪೂಜೆ ನಡೆದ ಸ್ಥಳ ಗೆದ್ದಲು ಹಿಡಿದಿದೆ..!


Team Udayavani, May 29, 2018, 4:40 AM IST

guddali-pooje-28-5.jpg

 ವಿಶೇಷ ವರದಿ
ಸುಳ್ಯ: ಚೆನ್ನಾವರ ಗೌರಿ ಹೊಳೆಗೆ 20 ಲಕ್ಷ ರೂ. ವೆಚ್ಚದಲ್ಲಿ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆಂದು ಗುದ್ದಲಿಪೂಜೆ ನಡೆಸಿ, ಒಂದು ವರ್ಷ ಕಳೆದಿದೆ. ಆದಾಗ್ಯೂ ಕಾಮಗಾರಿ ಆರಂಭವೇ ಆಗಿಲ್ಲ. ಸಣ್ಣ ನೀರಾವರಿ ಇಲಾಖೆ ವತಿಯಿಂದ ನಿರ್ಮಿಸಲು ಉದ್ದೇಶಿಸಿದ ಈ ಅಣೆಕಟ್ಟಿಗೆ ಕಳೆದ ವರ್ಷ ಮೇ ತಿಂಗಳಿನಲ್ಲಿ ಶಾಸಕ ಅಂಗಾರ ಅವರು ಗುದ್ದಲಿ ಪೂಜೆ ನೆರವೇರಿಸಿದರು. ಒಂದು ತಿಂಗಳೊಳಗೆ ಕಾಮಗಾರಿ ಆರಂಭಿಸುವುದಾಗಿ ಎಂಜಿನಿಯರ್‌ ಭರವಸೆ ನೀಡಿದ್ದರು. ಒಂದು ವರ್ಷ ಸಂದರೂ, ಅಲ್ಲಿ ಕಾಮಗಾರಿ ಆರಂಭದ ಲಕ್ಷಣವೂ ಕಂಡಿಲ್ಲ.

ಹಳತು, ಹೊಸತು ಇಲ್ಲ
ಇದೇ ಹೊಳೆಯ ಕೆಳಭಾಗದ ಅಡ್ಯತ ಕಂಡದ ಬಳಿ ನಿರ್ಮಿಸಿದ್ದ ಕಿಂಡಿ ಅಣೆಕಟ್ಟು 10 ವರ್ಷಗಳ ಹಿಂದೆ ಕುಸಿದು ಬಿದ್ದಿತ್ತು. ಆ ಕಟ್ಟು ವ್ಯವಸ್ಥಿತವಾಗಿದ್ದ ಸಂದರ್ಭದಲ್ಲಿ ಸಂಗ್ರಹಗೊಳ್ಳುತ್ತಿದ್ದ ನೀರು, ಚೆನ್ನಾವರ ತನಕ ಪ್ರಯೋಜನಕ್ಕೆ ಸಿಗುತಿತ್ತು. ಕುಸಿದ ಅನಂತರ ಅದರ ದುರಸ್ತಿಗೆ ನೂರಾರು ಬಾರಿ ಮನವಿ ಸಲ್ಲಿಸಿದ್ದರೂ ಅನುದಾನದ ಕೊರತೆ ಕಾಡಿತ್ತು. ಹಾಗಾಗಿ ಹಳೆ ಅಣೆಕಟ್ಟು ಬದಲಿಯಾಗಿ, ಚೆನ್ನಾವರ ಪರಿಸರದ ಜನರ ಅನುಕೂಲಕ್ಕಾಗಿ ಹೊಸ ಕಿಂಡಿ ಅಣೆಕಟ್ಟು ನಿರ್ಮಿಸಲು ಗುದ್ದಲಿ ಪೂಜೆ ನಡೆಯಿತು. ಈಗ, ಇತ್ತ ಹಳೆ ಕಿಂಡಿ ಅಣೆಕಟ್ಟು ದುರಸ್ತಿಯೂ ಇಲ್ಲ, ಇತ್ತ ಹೊಸ ಅಣೆಕಟ್ಟು ನಿರ್ಮಾಣವು ಇಲ್ಲದ ತ್ರಿಶಂಕು ಸ್ಥಿತಿ ನಿರ್ಮಾಣವಾಗಿದೆ.

ದಲಿತ ಕುಟುಂಬಗಳಿಗೆ ನೀರಿಲ್ಲ
ಹಳೆ ಅಣೆಕಟ್ಟು ಸಮರ್ಪಕವಾಗಿದ್ದ ಸಂದರ್ಭದಲ್ಲಿ ಪರಿಸರದ ಕೆಲವು ದಲಿತ ಕುಟುಂಬಗಳಿಗೆ ಕುಡಿಯುವ ನೀರಿಗೆ ಅನುಕೂಲವಾಗಿತ್ತು. ಕೆಲವು ವರ್ಷಗಳಿಂದ ಕೆರೆ, ಬಾವಿ ಬತ್ತಿದ್ದು, ಅಣೆಕಟ್ಟು ನೀರು ಪಾಲಾದ ಅನಂತರ ಚೆನ್ನಾವರದ ದಲಿತ ಕುಟುಂಬಗಳಿಗೆ ಕುಡಿಯಲು ನೀರಿಲ್ಲದ ಪರಿಸ್ಥಿತಿ ಉಂಟಾಗಿದೆ. ಅದು ಈಗಲೂ ಮುಂದುವರಿದಿದೆ. ಇಲ್ಲಿ ಹೊಸ ಅಣೆಕಟ್ಟ ನಿರ್ಮಾಣ ಅಥವಾ ಹಳೆ ಅಣೆಕಟ್ಟು ದುರಸ್ತಿ ನಡೆದಿದ್ದಲ್ಲಿ, ಅಂತರ್ಜಲದ ಪ್ರಮಾಣ ಏರಿಕೆಯಾಗಿ ಕುಡಿಯುವ ನೀರಿಗಾದರೂ ಅನುಕೂಲವಾಗುತ್ತಿತ್ತು ಅನ್ನುತ್ತಾರೆ ಸ್ಥಳೀಯ ನಿವಾಸಿ ರಾಮಚಂದ್ರ.

ಗುದ್ದಲಿಗೆ ಗೆದ್ದಲು
ಪಾಲ್ತಾಡು – ಚೆನ್ನಾವರ – ಕುಂಡಡ್ಕ ರಸ್ತೆಯಲ್ಲಿ ಚೆನ್ನಾವರದಲ್ಲಿನ ಕಿರು ಸೇತುವೆಯ ಮೇಲ್ಭಾಗದಿಂದ ಅನತಿ ದೂರದಲ್ಲಿ ಅಣೆಕಟ್ಟು ನಿರ್ಮಾಣದ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿತ್ತು. ಬೇಸಗೆ ಕಾಲದಲ್ಲಿ ನೂರಾರು ಮನೆ ಮಂದಿಯ, ಕೃಷಿ ಭೂಮಿಯ ನೀರಿನ ಬವಣೆಗೆ ಪರಿಹಾರ ಸಿಗಬಹುದು ಎಂಬ ನಿರೀಕ್ಷೆ ಮೂಡಿತ್ತು. ಆದರೆ ತತ್‌ಕ್ಷಣ ಕಾಮಗಾರಿ ಆರಂಭಿಸುತ್ತೇವೆ ಎಂದು ಭರವಸೆ ನೀಡಿದ್ದ ಇಲಾಖೆ ಅಧಿಕಾರಿಗಳು ಮತ್ತೆ ಸ್ಥಳಕ್ಕೆ ಬಂದಿಲ್ಲ. ಹಾಗಾಗಿ ಕಿಂಡಿ ಅಣೆಕಟ್ಟು ನಿರ್ಮಾಣ ಪೂರ್ಣ ಗೊಳ್ಳುವ ಭರವಸೆ ಉಳಿದಿಲ್ಲ.

ವಿಳಂಬ ಏಕೆ?
ಗುದ್ದಲಿ ಪೂಜೆ ನಡೆದ ವರ್ಷ ಸಂದರೂ ಕಾಮಗಾರಿ ಆರಂಭಗೊಂಡಿಲ್ಲ ಅಂದರೆ ಏನರ್ಥ? ಇಲ್ಲಿ ಅನುದಾನ ಇದೆಯೋ ಇಲ್ಲವೂ ಅನ್ನುವ ಬಗ್ಗೆ ಸ್ಪಷ್ಟ ನಿಲುವು ಪ್ರಕಟಿಸಬೇಕು. ಇಲ್ಲಿ ಸ್ಥಳೀಯರಿಂದ ಮಣ್ಣಿನ ಕಟ್ಟ ಹಾಕಿ ನೀರು ನಿಲ್ಲಿಸುವ ಪ್ರಯತ್ನ ನಡೆದಿತ್ತು. ಹೊಸ ಅಣೆಕಟ್ಟು ನಿರ್ಮಿಸುವ ಇಲಾಖಾಧಿಕಾರಿಗಳ ಭರವಸೆ ಹುಸಿಯಾಗಿದೆ.
– ಕಾರ್ತಿಕ್‌ ರೈ ಕನ್ನೆಜಾಲು, ಸ್ಥಳೀಯ ನಿವಾಸಿ

ಬೆಲೆ ಇಲ್ಲವೇ?
ಟೆಂಡರ್‌ ಪೂರ್ಣಗೊಂಡ ಅನಂತರ ಕಾಮಗಾರಿಗೆ ಗುದ್ದಲಿಪೂಜೆ ನಡೆಸಲಾಗುತ್ತದೆ. ಹಣ ಇಲ್ಲದೆ ಟೆಂಡರ್‌ ಕರೆಯುವುದಿಲ್ಲ. ಒಂದು ವರ್ಷ ಆದರೂ ಕಾಮಗಾರಿ ಆರಂಭವಾಗಿಲ್ಲ ಅಂದರೆ, ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ಬಿಡುಗಡೆಗೊಂಡ ಅನುದಾನ ಏನಾಯಿತು? ಶಂಕುಸ್ಥಾಪನೆಗೆ ಬೆಲೆ ಇಲ್ಲವೇ?
– ವೆಂಕಟರಮಣ ಕುಂಡಡ್ಕ, ಸ್ಥಳೀಯ ನಿವಾಸಿ

ಟಾಪ್ ನ್ಯೂಸ್

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

8-

Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.