ಅಭ್ಯರ್ಥಿಗಳ ಪ್ರಚಾರ; ಮತದಾರರಿಗೆ ಅಭಿವೃದ್ಧಿಯೇ ಮೂಲ ಮಂತ್ರ


Team Udayavani, Nov 7, 2019, 4:41 AM IST

qq-30

ಮಹಾನಗರ: ಮಹಾನಗರ ಪಾಲಿಕೆ ಚುನಾವಣೆ ಮತದಾನಕ್ಕೆ ಇನ್ನು ಕೇವಲ ಐದು ದಿನವಷ್ಟೇ ಬಾಕಿ ಉಳಿದಿದ್ದು, ಅಭ್ಯರ್ಥಿಗಳ ಚುನಾವಣ ಪ್ರಚಾರದ ಭರಾಟೆ ಕೂಡ ಜೋರಾಗಿದೆ.

ಇನ್ನೇನು ನಾಲ್ಕು ದಿನದಲ್ಲಿ ಬಹಿರಂಗ ಚುನಾವಣ ಪ್ರಚಾರಕ್ಕೂ ತರೆಬೀಳುತ್ತದೆ. ಅತ್ತ ಚುನಾವಣ ಕಣದಲ್ಲಿರುವ ಸ್ಪರ್ಧಾಳುಗಳ ಸ್ಪಷ್ಟ ಚಿತ್ರಣ ದೊರೆಯುತ್ತಿದ್ದಂತೆ, ಪ್ರತಿಯೊಂದು ಪಕ್ಷದ ಅಭ್ಯರ್ಥಿಯು ತಮ್ಮ ವಾರ್ಡ್‌ ಮಟ್ಟದಲ್ಲಿ ಮತ ಬೇಟೆಯ ಕಸರತ್ತು ಚುರುಕುಗೊಳಿಸಿದ್ದಾರೆ. ಪ್ರತೀ ಬೂತ್‌, ವಾರ್ಡ್‌ ಮಟ್ಟದಲ್ಲಿ ಪ್ರಚಾರದ ಕಾರ್ಯ ಗರಿಗೆದರಿದೆ. ಪಾಲಿಕೆ ಚುನಾವಣೆಯಲ್ಲಿ ಈ ಬಾರಿ ವಾರ್ಡ್‌ಗಳಲ್ಲಿ ಅಭ್ಯರ್ಥಿಗಳ ಪ್ರಚಾರದ ಕಾವು, ನಗರಾಡಳಿತ ಚುನಾವಣೆ ಬಗ್ಗೆ ಮತದಾರರ ನಾಡಿಮಿಡಿತ ಹೇಗಿದೆ ಎಂದು ತಿಳಿಯುವ ಪ್ರಯತ್ನವನ್ನು ಬುಧವಾರದಿಂದ ನಗರದ ವಾರ್ಡ್‌ಗಳಲ್ಲಿ “ಸುದಿನ’ ತಂಡವು ಸುತ್ತಾಟದ ಮೂಲಕ ಮಾಡಿದೆ.

ನಮ್ಮ ತಂಡ ಮೊದಲು ಭೇಟಿ ಮಾಡಿದ್ದು, ಶಿವಬಾಗ್‌ ವಾರ್ಡ್‌ಗೆ. ಈ ವಾರ್ಡ್‌ನಲ್ಲಿ ಬಿಜೆಪಿ, ಕಾಂಗ್ರೆಸ್‌ ಅಭ್ಯರ್ಥಿಗಳು ನೇರ ಸ್ಪರ್ಧೆಯಲ್ಲಿದ್ದಾರೆ. ವಿಶೇಷ ಎಂಬಂತೆ ಈ ಎರಡೂ ಪಕ್ಷದ ಕಾರ್ಯಕರ್ತರು ಇದೇ ವಾರ್ಡ್‌ನ ಅಕ್ಕ ಪಕ್ಕದ ಮನೆಗಳಲ್ಲಿ ಬಿರುಸಿನ ಪ್ರಚಾರದಲ್ಲಿ ತೊಡಗಿದ್ದರು. ವಾರ್ಡ್‌ 5ನೇ ಕ್ರಾಸ್‌ ಬಳಿ ಬಿಜೆಪಿ ಅಭ್ಯರ್ಥಿ ಪರ ಶಾಸಕ ವೇದವ್ಯಾಸ ಕಾಮತ್‌ ಸಹಿತ ಪಕ್ಷದ ಕಾರ್ಯಕರ್ತರು ಭರದಿಂದ ಪ್ರಚಾರದಲ್ಲಿ ತೊಡಗಿದ್ದರು. ಮನೆ ಮನೆ ಭೇಟಿ ಮಾಡಿ, ತಮ್ಮ ಪಕ್ಷದ ಪರವಾಗಿ ಮತ ಚಲಾಯಿಸುವಂತೆ ಮನವೊಲಿಸುತ್ತಿದ್ದ ದೃಶ್ಯ ಕಂಡುಬಂತು.

ಇದೇ ವಾರ್ಡ್‌ನ 2ನೇ ಕ್ರಾಸ್‌ನಲ್ಲಿ ಕಾಂಗ್ರೆಸ್‌ ಪರವಾಗಿ ಜಿಲ್ಲಾ ಯುವ ಘಟದ ಅಧ್ಯಕ್ಷ ಮಿಥುನ್‌ ರೈ ನೇತೃತ್ವದಲ್ಲಿ ಕಾರ್ಯಕರ್ತರು ಮನೆ-ಮನೆ ಭೇಟಿ ಪ್ರಚಾರದಲ್ಲಿ ತೊಡಗಿದ್ದರು. ಪಾಲಿಕೆಯ ಈ ಹಿಂದಿನ ಆಡಳಿತಾವಧಿಯ ಸಾಧನೆ, ಅಭಿವೃದ್ಧಿ ಕಾರ್ಯಗಳು, ಕಾಂಗ್ರೆಸ್‌ ಸಾಧನೆಗಳನ್ನು ಮನೆ ಮಂದಿಯಲ್ಲಿ ಹಂಚಿಕೊಳ್ಳುತ್ತಾ ಮತದಾನ ಮಾಡುವಂತೆ ಪ್ರೇರೇಪಿಸುತ್ತಿದ್ದರು.

ಬಳಿಕ 40ನೇ ಕೋರ್ಟ್‌ ವಾರ್ಡ್‌ನತ್ತ ನಮ್ಮ ತಂಡ ತೆರಳಿದ್ದು, ಈ ವಾರ್ಡ್‌ನಲ್ಲಿ ಸಿಪಿಎಂ ಪಕ್ಷದ ಅಭ್ಯರ್ಥಿ ಸುನಿಲ್‌ ಕುಮಾರ್‌ ಬಜಾಲ್‌ ಅವರು ಮನೆ-ಮನೆ ಭೇಟಿ ಮತ ಪ್ರಚಾರದಲ್ಲಿ ತೊಡಗಿ ರುವುದು ಕಂಡುಬಂತು. ಈ ವಾರ್ಡ್‌ನಲ್ಲಿ ಕಾಂಗ್ರೆಸ್‌, ಬಿಜೆಪಿ, ಜೆಡಿಎಸ್‌ ಪಕ್ಷದ ಅಭ್ಯರ್ಥಿಗಳು ನೇರ ಸ್ಪರ್ಧಿ ಸುತ್ತಿದ್ದು, ಜೆಡಿಎಸ್‌ ಅಭ್ಯರ್ಥಿಗಳು ಇನ್ನೂ ಮತ ಪ್ರಚಾರಕ್ಕೆ ಬರಲಿಲ್ಲ ಎನ್ನುತ್ತಾರೆ ಸ್ಥಳೀಯರು. ಈ ಬಾರಿ ಕೋರ್ಟ್‌ ವಾರ್ಡ್‌ನಿಂದ ಕೆಲವು ಭಾಗಗಳು ಪಕ್ಕದ ಸೆಂಟ್ರಲ್‌ ವಾರ್ಡ್‌ಗೆ ಸೇರ್ಪಡೆಯಾಗಿವೆ. ಅಲ್ಲದೆ ಕಳೆದ ಬಾರಿಯ ಚುನಾವಣೆಯಲ್ಲಿ ಈ ವಾರ್ಡ್‌ನಲ್ಲಿ ಅತೀ ಕಡಿಮೆ (ಶೇ.47.88) ಮತದಾನವಾಗಿತ್ತು. ಇದೇ ಕಾರಣಕ್ಕೆ ಅಭ್ಯರ್ಥಿಗಳು ಪ್ರತಿಯೊಂದು ಮನೆಮನಗೆ ತೆರಳಿ, ಫ್ಲ್ಯಾಟ್‌ಗಳಿಗೆ ತೆರಳಿ ಸಾರ್ವಜನಿಕರಲ್ಲಿ ಮತದಾನಕ್ಕೆ ಬರುವಂತೆ ಪ್ರೇರೇಪಿಸುತ್ತಿರುವುದು ಕಂಡು ಬಂತು.

ಅಭಿವೃದ್ಧಿಗೆ ನಮ್ಮ ಪ್ರಾಶಸ್ತ್ಯ
ಕೋರ್ಟ್‌ ವಾರ್ಡ್‌ನ ಮತದಾರ ಗಣೇಶ್‌ ಅವರು “ಸುದಿನ’ಕ್ಕೆ ಪ್ರತಿಕ್ರಿಯಿಸಿ “ಈ ವಾರ್ಡ್‌ ನಲ್ಲಿ ಮೂರು ಮಂದಿ ಪ್ರಮುಖ ಪಕ್ಷದ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಬಿಜೆಪಿ, ಕಾಂಗ್ರೆಸ್‌, ಸಿಪಿಎಂ ಅಭ್ಯರ್ಥಿಗಳು ಮತಯಾಚನೆಗೆ ಮನೆಗೆ ಬಂದಿದ್ದಾರೆ. ನಾವು ಕಾರ್ಯಕರ್ತರ ಮುಖ ನೋಡಿ ಮತ ಹಾಕುವುದಿಲ್ಲ. ಬದಲಾಗಿ, ಅಭಿವೃದ್ಧಿಗೆ ನಮ್ಮ ಪ್ರಾಶಸ್ತ್ಯ’ ಎನ್ನುತ್ತಾರೆ.

ಕೊಡಿಯಾಲಬೈಲ್‌ ವಾರ್ಡ್‌ನಲ್ಲಿಯೂ ಮತ ಬೇಟೆ ಜೋರಾಗಿದೆ. ಈ ವಾರ್ಡ್‌ನಲ್ಲಿ ಕಾಂಗ್ರೆಸ್‌, ಬಿಜೆಪಿ ಮತ್ತು ಪಕ್ಷೇತರರು ಕಣದಲ್ಲಿದ್ದು, ಕಾಂಗ್ರೆಸ್‌ನ ಪ್ರಕಾಶ್‌ ಬಿ. ಸಾಲ್ಯಾನ್‌ ಬೆಂಬಲಿಗರು ಬಾಳಿಗಾ ಸ್ಟೋರ್‌ ಬಳಿ ಮತಯಾಚನೆಯಲ್ಲಿ ತೊಡಗಿದ್ದರು. ಇನ್ನು ಬಿಜೆಪಿ ಪಕ್ಷದ ಅಭ್ಯರ್ಥಿಗಳು ಈ ವಾರ್ಡ್‌ ನ ಇತರೇ ಭಾಗಗಳಲ್ಲಿ ಮತ ಯಾಚನೆಯಲ್ಲಿ ತೊಡಗಿದ್ದರು.

“ರಡ್ಡ್ ಪಕ್ಷದಕ್‌ಲ್‌ ಇಲ್ಲಡೆ ಬತ್ತ್ದ್‌ ಓಟ್‌ ಕೇಂಡೆರ್‌. ಯಾನ್‌ ವಾ ಪಕ್ಷದ ಪರಲಾ ಇಜ್ಜಿ. ಏರೆ ಅಭಿವೃದ್ಧಿ ಮಲ್ಪೇರ್‌ ಆಕ್ಲೆಗ್‌ ಎನ್ನ ಓಟ್‌.’ (ಎರಡು ಪಕ್ಷದ ಮಂದಿ ಮನೆ ಬಂದು ಮತ ಕೇಳಿದ್ದಾರೆ. ನಾನು ಯಾವ ಪಕ್ಷದ ಪರವೂ ಇಲ್ಲ. ಯಾರು ಅಭಿವೃದ್ಧಿ ಪರವಾಗಿದ್ದಾರೋ ಅವರಿಗೆ ನನ್ನ ಓಟು) ಎಂದು “ಸುದಿನ’ಕ್ಕೆ ಪ್ರತಿಕ್ರಿಯಿಸಿದ್ದು ಕೊಡಿಯಾಲಬೈಲ್‌ ವಾರ್ಡ್‌ನ ಮತದಾರೊಬ್ಬರು.

ಭರವಸೆ ಮಹಾಪೂರ
ಮನೆ ಮನೆಗೆ ಮತಯಾಚನೆಗೆ ಬರುವಂತಹ ಎಲ್ಲ ಪಕ್ಷಗಳ ಮುಖಂಡರಿಂದ ವಾರ್ಡ್‌ ನ ಮಂದಿಗೆ ಭರವಸೆಯ ಮಹಾಪೂರವನ್ನೇ ಹರಿಸುತ್ತಿದ್ದಾರೆ. ಮನೆ ಮಂದಿ ಮೂಲ ಸಮಸ್ಯೆಗಳ ಬಗ್ಗೆ ಹೇಳಿದರೆ, ಗೆದ್ದರೆ ಖಂಡಿತವಾಗಿಯೂ ಪ್ರಾಶಸ್ತ್ಯ ನೀಡುತ್ತೇವೆ ಎಂಬ ಭರವಸೆ ನೀಡುತ್ತಿದ್ದಾರೆ.

 ನವೀನ್‌ ಭಟ್‌ ಇಳಂತಿಲ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.