ಪ್ರಾಪರ್ಟಿ ಕಾರ್ಡ್‌: ಆಸ್ತಿ ನೋಂದಣಿ ಸರ್ವರ್‌ಗೆ ಜೋಡಿಸಲು ಕ್ರಮ

ಮೇ 15ರ ಅನಂತರ ನಗರದಲ್ಲಿ ಮತ್ತೆ ಕಡ್ಡಾಯಗೊಳ್ಳುವ ಸಾಧ್ಯತೆ

Team Udayavani, Apr 28, 2019, 6:04 AM IST

aaaaD

ವಿಶೇಷ ವರದಿ- ಮಹಾನಗರ: ಆಸ್ತಿ ನೊಂದಣಿಗೆ ಪ್ರಾಪರ್ಟಿ ಕಾರ್ಡ್‌ ಕಡ್ಡಾಯ ಮೇ 15ರ ಬಳಿಕ ಮತ್ತೆ ಅನುಷ್ಟಾನಕ್ಕೆ ಬರುವ ಸಾಧ್ಯತೆಯ ಹಿನ್ನೆಲೆಯಲ್ಲಿ ಪ್ರಾಪರ್ಟಿಕಾರ್ಡ್‌ ಸರ್ವರ್‌ನ್ನು ಮಂಗಳೂರು ತಾಲೂಕಿನ ಆಸ್ತಿ ನೋಂದಣಿ ಕಚೇರಿಗಳ ( ಸಬ್‌ ರಿಜಿಸ್ಟ್ರಾರ್‌) ಸರ್ವರ್‌ಗಳಿಗೆ ಲಿಂಕ್‌ ಮಾಡಲು ಇಲಾಖೆ ಸಿದ್ಧತೆ ನಡೆಸಿದೆ.

ಪ್ರಾಯೋಗಿಕವಾಗಿ ಮೂಲ್ಕಿ ಉಪ ನೋಂದಣಿ ಕಚೇರಿಗೆ ಸರ್ವರ್‌ ಲಿಂಕ್‌ ಮಾಡಿ ವ್ಯವಸ್ಥೆಯ ಕಾರ್ಯನಿರ್ವಹಣೆಯನ್ನು ಪರಿಶೀಲಿಸಲು ನಿರ್ಧರಿಸಲಾಗಿದ್ದು, ಪ್ರಾಯೋಗಿಕ ಅಳವಡಿಕೆಗೆ ಅನುಮತಿ ಕೋರಿ ರಾಜ್ಯ ಭೂಮಾಪನ, ಭೂದಾಖಲೆಗಳು ಮತ್ತು ಸೆಟ್ಲಮೆಂಟ್‌ ಇಲಾಖಾ ಆಯುಕ್ತರಿಗೆ ಜಿಲ್ಲಾಡಳಿತ ಹಾಗೂ ಭೂಮಾಪನ ಇಲಾಖೆಯು ಪತ್ರ ಬರೆದಿದೆ.

ಫೆ. 1ರಿಂದ ಆಸ್ತಿ ನೋಂದಣಿ, ಮಾರಾಟಕ್ಕೆ ಪ್ರಾಪರ್ಟಿ ಕಾರ್ಡ್‌ ಅನ್ನು ಕಡ್ಡಾಯಗೊಳಿಸಲಾಗಿತ್ತು. ಆದರೆ ಪ್ರಾಪರ್ಟಿ ಕಾರ್ಡ್‌ ವಿತರಣೆ ವ್ಯವಸ್ಥೆಯಲ್ಲಿ ಕೆಲವು ಗೊಂದಲಗಳಿಂದಾಗಿ ರಾಜ್ಯ ಭೂಮಾಪನ, ಭೂದಾಖಲೆಗಳು, ಸೆಟ್ಲಮೆಂಟ್‌ ಇಲಾಖಾ ಆಯುಕ್ತ ಮನೀಶ್‌ ಮುದ್ಗೀಲ್‌ ಅವರು ಕಾರ್ಡ್‌ ಕಡ್ಡಾಯವನ್ನು ಮೇ 15ರ ವರೆಗೆ ಮುಂದೂಡಿದ್ದರು. ಈ ಹಿನ್ನೆಲೆಯಲ್ಲಿ ಈ ಹಿಂದಿನಂತೆ ಆವಶ್ಯ ದಾಖಲೆಗಳ ಆಧಾರದಲ್ಲಿ ಆಸ್ತಿ ನೋಂದಣಿ ಕಾರ್ಯ ಮುಂದುವರಿದಿದೆ. ಪ್ರಾಪರ್ಟಿ ಕಾರ್ಡ್‌ ವಿತರಣೆಯಲ್ಲಿ ಇರುವ ಲೋಪಗಳನ್ನು ಪರಿಹರಿಸಿಕೊಂಡು ಮೇ 15ರ ಅನಂತರ ಮತ್ತೆ ಕಡ್ಡಾಯವಾಗುವ ನಿರೀಕ್ಷೆ ಇದೆ.

ಪ್ರಾಯೋಗಿಕ ಪರೀಕ್ಷೆಗೆ ಮನವಿ
ಆಸ್ತಿ ನೋಂದಣಿ ಕಚೇರಿಗಳ ಸರ್ವರ್‌ಗಳಿಗೆ ಪ್ರಾಪರ್ಟಿ ಕಾರ್ಡ್‌ ಸರ್ವರ್‌ ಜೋಡಣೆಯಾದ ಬಳಿಕ ಮಾರಾಟ /ಖರೀದಿ ಜಾಗದ ಪ್ರಾಪರ್ಟಿಕಾರ್ಡ್‌ ನಂಬರ್‌ನ್ನು ನೋಂದಣಿ ಕಚೇರಿಯ ಸರ್ವರ್‌ನಲ್ಲಿ ನಮೂದಿಸಿದರೆ ಅದಕ್ಕೆ ಸಂಬಂಧಪಟ್ಟ ಎಲ್ಲ ದಾಖಲೆಗಳು, ವಿವರಗಳು ಲಭ್ಯವಾಗುತ್ತದೆ. ವಿನಾಯತಿ ಗಡುವು ಮುಕ್ತಾಯಗೊಳ್ಳುವ 15 ದಿನಗಳ ಮೊದಲೇ ಪ್ರಾಯೋಗಿಕ ಪರೀಕ್ಷೆಗಳನ್ನು ನಡೆಸಿದರೆ ಅದರಲ್ಲಿರುವ ಲೋಪಗಳನ್ನು ಮುಂಚಿತವಾಗಿ ಸರಿಪಡಿಸಲು ಸಾಧ್ಯವಾಗುತ್ತದೆ. ಜಿಲ್ಲಾಡಳಿತ ಪ್ರಾಯೋಗಿಕ ಪರೀಕ್ಷೆಗೆ ಅನುಮತಿ ಕೋರಿದೆ.

ಹೊಸ ಸರ್ವರ್‌ಗಳ ಅಳವಡಿಕೆ
ಪ್ರಾಪರ್ಟಿ ಕಾರ್ಡ್‌ ವಿತರಣ ಪ್ರಕ್ರಿಯೆಯನ್ನು ಬೆಂಗಳೂರಿನಲ್ಲಿ ಇಲಾಖೆಯ ಹೊಸ ಸರ್ವರ್‌ಗೆ ಜೋಡಿಸಲಾಗಿದೆ. ಮಂಗಳೂರು ಕಚೇರಿಯಲ್ಲಿ ಕರಡು ಪ್ರಾಪರ್ಟಿ ಕಾರ್ಡ್‌ನ್ನು ಮಾತ್ರ ಮುದ್ರಿಸಿ ಆಸ್ತಿ ಮಾಲಕರಿಗೆ ನೀಡಲು ಅವಕಾಶವಿದೆ. ಆದರೆ ಅಂತಿಮ ಕಾರ್ಡ್‌ ಬೆಂಗಳೂರಿನ ಕೇಂದ್ರ ಸರ್ವರ್‌ನಿಂದಲೇ ಬರಬೇಕು. ಕೇಂದ್ರ ಸರ್ವರ್‌ನಲ್ಲಿ ಸಮಸ್ಯೆಯಿಂದಾಗಿ ಪ್ರಕ್ರಿಯೆಯಲ್ಲಿ ವಿಳಂಬವಾಗುತ್ತಿತ್ತು. ಹೊಸ ಸರ್ವರ್‌ಗೆ ಜೋಡಣೆ ಮಾಡಿರುವುದರಿಂದ ಈ ಸಮಸ್ಯೆ ನಿವಾರಣೆಯಾಗಿದೆ. ಇದೇ ರೀತಿಯಲ್ಲಿ ಮಂಗಳೂರಿನ ಕಚೇರಿಯಲ್ಲೂ ಹೊಸ ಸರ್ವರ್‌ ಅಳವಡಿಸಲಾಗುತ್ತಿದೆ.
ಕಂಪ್ಯೂಟರ್‌ಗಳ ಸಂಖ್ಯೆಯನ್ನು 45ಕ್ಕೇರಿಸಲಾಗಿದೆ. 1 ಹೆಚ್ಚು ಸಾಮರ್ಥ್ಯದ, 3 ಮಧ್ಯಮ ಸಾಮಾರ್ಥ್ಯದ ಸ್ಕಾ ನರ್‌ಗಳು, 5 ಪ್ರಿಂಟರ್‌ಗಳನ್ನು ಅಳವಡಿಸಲಾಗಿದೆ. ಇದಲ್ಲದೆ ಬಹುಮಹಡಿ ವಸತಿ ಸಮುಚ್ಚಯಗಳ ಆಸ್ತಿ ನೋಂದಣಿಯಲ್ಲಿ ಇದ್ದ ಬಹುತೇಕ ಸಮಸ್ಯೆಗಳು ಪರಿಹಾರಗೊಂಡಿವೆ.

ವಿತರಣೆ ಪ್ರಕ್ರಿಯೆ ಇಳಿಕೆಯಾಗಿಲ್ಲ
ಪ್ರಾಪರ್ಟಿ ಕಾರ್ಡ್‌ನ್ನು ಆಸ್ತಿ ನೋಂದಣಿಗೆ ಕಡ್ಡಾಯಗೊಳಿಸಿರುವುದನ್ನು ತಾತ್ಕಾಲಿಕವಾಗಿ ಮುಂದೂಡಿಕೆ ಮಾಡಿದ್ದರೂ ವಿತರಣೆಯಲ್ಲಿ ಇಳಿಕೆ ಆಗಿಲ್ಲ. ದಿನಂಪ್ರತಿ ಸರಾಸರಿ 60 ಪಕ್ಕಾ ಕಾರ್ಡ್‌ಗಳು ಹಾಗೂ ಸುಮಾರು 70ರಷ್ಟು ಕರಡು ಕಾರ್ಡ್‌ಗಳನ್ನು ವಿತರಿಸಲಾಗುತ್ತಿದೆ. ಆದರೆ ಆಸ್ತಿ ದಾಖಲೆಗಳ ಸಂಗ್ರಹದಲ್ಲಿ ಸ್ವಲ್ಪ ಇಳಿಕೆಯಾಗಿದೆ ಎಂದು ಇಲಾಖಾ ಮೂಲಗಳು ತಿಳಿಸಿವೆ. ಎ. 26ರ ವರೆಗೆ ಒಟ್ಟು 26,428 ಪಕ್ಕಾ ಕಾರ್ಡ್‌ಗಳನ್ನು ಹಾಗೂ 39,321 ಕರಡು ಕಾರ್ಡ್‌ಗಳನ್ನು ವಿತರಿಸಲಾಗಿದೆ. 86,333 ಆಸ್ತಿ ದಾಖಲೆಗಳನ್ನು ಸಂಗ್ರಹಿಸಲಾಗಿದ್ದು 86,316 ಆಸ್ತಿ ದಾಖಲೆಗಳನು ಸ್ಕ್ಯಾನ್ ಮಾಡಲಾಗಿದೆ. ನಗರದಲ್ಲಿ ಪ್ರಸ್ತುತ ಒಟ್ಟು 1,53,081 ಆಸ್ತಿಗಳಿವೆ. ಆಸ್ತಿಗಳು ವಿಭಜನೆಗೊಂಡು ಪ್ರತ್ಯೇಕವಾದಂತೆ ಆಸ್ತಿ ಸಂಖ್ಯೆಗಳು ಹೆಚ್ಚುತ್ತಾ ಹೋಗುತ್ತವೆ.

ಪ್ರಾಪರ್ಟಿ ಕಾರ್ಡ್‌ ವಿತರಣೆ ನಿಂತಿಲ್ಲ
ಆಸ್ತಿ ನೊಂದಣಿಗೆ ಪ್ರಾಪರ್ಟಿ ಕಾರ್ಡ್‌ ಕಡ್ಡಾಯ ಗೊಳಿಸಿರುವುದನ್ನು ತಾತ್ಕಾಲಿ ಕವಾಗಿ ಮುಂದೂಡಿದರೂ ವಿತರಣೆ ಕಾರ್ಯದಲ್ಲಿ ಯಾವುದೇ ಪರಿಣಾಮವಾಗಿಲ್ಲ. ಪ್ರಾಪರ್ಟಿ ಕಾರ್ಡ್‌ ಸರ್ವರ್‌ ಅನ್ನು ನೋಂದಣಿ ಕಚೇರಿ ಸರ್ವರ್‌ಗೆ ಲಿಂಕ್‌ ಮಾಡುವ ಕಾರ್ಯ ಆಗಬೇಕಾಗಿದೆ. ಈ ನಿಟ್ಟಿನಲ್ಲಿ ಪ್ರಕ್ರಿಯೆಗಳು ಸಾಗಿದೆ.
 - ಪ್ರಸಾದಿನಿ,
ಭೂಮಾಪನ ಇಲಾಖೆ ಸಹಾಯಕ ನಿರ್ದೇಶಕಿ

ಟಾಪ್ ನ್ಯೂಸ್

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

18

Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್‌

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.