ಕಡಬ ಪ.ಪಂ. ಆಗಿಸಲು ಪ್ರಸ್ತಾವನೆ


Team Udayavani, Jul 6, 2018, 2:35 AM IST

kadab-5-7.jpg

ಕಡಬ: ಗ್ರಾಮ ಪಂಚಾಯತ್‌ ಆಗಿರುವ ಕಡಬವನ್ನು ಪಟ್ಟಣ ಪಂಚಾಯತ್‌ ಆಗಿ ಮೇಲ್ದರ್ಜೆಗೇರಿಸಬೇಕೆಂಬ ಬೇಡಿಕೆಗೆ ಬಲ ಬಂದಿದೆ. ಹೊಸ ತಾಲೂಕುಗಳ ಕೇಂದ್ರ ಸ್ಥಾನದಲ್ಲಿರುವ ಗ್ರಾ.ಪಂ.ಗಳನ್ನು ಪ.ಪಂ. ಆಗಿ ಉನ್ನತೀಕರಿಸಲು ಸರಕಾರ ಮುಂದಾಗಿದೆ. ರಾಜ್ಯ ಪೌರಾಡಳಿತ ನಿರ್ದೇಶನಾಲಯದ ಸೂಚನೆಯಂತೆ ಈ ಕುರಿತು ಪ್ರಸ್ತಾವನೆ ಸಲ್ಲಿಸಲಾಗಿದೆ. ಸರಕಾರದ ಗ್ರೀನ್‌ ಸಿಗ್ನಲ್‌ ಸಿಕ್ಕರೆ ಕಡಬಕ್ಕೆ ಪಟ್ಟಣ ಪಂಚಾಯತ್‌ ಪಟ್ಟ ಸಿಗಲಿದೆ. ಪಟ್ಟಣ ಪಂಚಾಯತ್‌ ಸ್ಥಾನಮಾನ ಲಭಿಸಿದರೆ ಅಭಿವೃದ್ಧಿ ಕಾಮಗಾರಿಗಳು ಹಾಗೂ ಮೂಲ ಸೌಕರ್ಯಗಳ ಒದಗಣೆಗೆ ಹೆಚ್ಚಿನ ಅನುದಾನಗಳು ಲಭಿಸಲಿವೆ.

ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ
ಕಡಬ ಮತ್ತು ಕೋಡಿಂಬಾಳ ಗ್ರಾಮಗಳ ವ್ಯಾಪ್ತಿಯನ್ನು ಹೊಂದಿರುವ 18.70 ಚದರ ಕಿ.ಮೀ. (5629.67 ಎಕರೆ) ಭೌಗೋಳಿಕ ವಿಸ್ತೀರ್ಣ, 2011ರ ಜನಗಣತಿಯಲ್ಲಿ 9546 ಜನಸಂಖ್ಯೆ ಹೊಂದಿರುವ ಕಡಬ ಗ್ರಾಮ ಪಂಚಾಯತ್‌ ನ್ನು ಪ.ಪಂ. ಆಗಿ ಮೇಲ್ದರ್ಜೆಗೇರಿಸಬೇಕೆಂದು ವಿನಯ ಕುಮಾರ್‌ ಸೊರಕೆ ನಗರಾಭಿವೃದ್ಧಿ ಸಚಿವರಾಗಿದ್ದಾಗ ಸ್ಥಳೀಯ ಕಾಂಗ್ರೆಸ್‌ ಮುಖಂಡರ ನಿಯೋಗ ಮನವಿ ಸಲ್ಲಿಸಿತ್ತು. ಸರಕಾರವೇ ಕಡಬ ಗ್ರಾ.ಪಂ. ಅನ್ನು ಪಟ್ಟಣ ಪಂಚಾಯತ್‌ ಆಗಿ ಮೇಲ್ದರ್ಜೆಗೇರಿಸಲು ಪೂರಕ ಅಂಶಗಳ ವರದಿ ಕೇಳಿದೆ. ಗ್ರಾ.ಪಂ. ವ್ಯವಸ್ಥೆಯಿಂದ ಪಟ್ಟಣ ಪಂಚಾಯತ್‌ ಆಗಿ ಮೇಲ್ದರ್ಜೆಗೇರಲು 10 ಸಾವಿರಕ್ಕಿಂತ ಹೆಚ್ಚು ಜನಸಂಖ್ಯೆ ಅಗತ್ಯ.

ಪ್ರಸ್ತುತ ಜನಗಣತಿಯಾಗಿ 7 ವರ್ಷಗಳು ಕಳೆದಿರುವುದರಿಂದ ಜನಸಂಖ್ಯೆಯು ಶೇ. 11ರಷ್ಟು ಹೆಚ್ಚಿರಬಹುದೆಂದು ಅಂದಾಜಿಸಿ, 1050 ಹೆಚ್ಚುವರಿ ಜನಸಾಂದ್ರತೆಯನ್ನು ನಮೂದಿಸಿ ಈಗಿನ ಜನಸಂಖ್ಯೆ 10,596 ಎಂದು ಪ್ರಸ್ತಾವನೆಯಲ್ಲಿ ಸೇರಿಸಲಾಗಿದೆ. ಈ ಮಧ್ಯೆ ಜನಸಂಖ್ಯೆ ಕಡಿಮೆ ಇರುವುದು ತೊಡಕಾದರೆ ಹತ್ತಿರದ ಬಂಟ್ರ ಗ್ರಾಮವನ್ನು ಸೇರಿಸಿಕೊಂಡು ಹೊಸ ಪ್ರಸ್ತಾವನೆ ಸಲ್ಲಿಸುವಂತೆ ಪುತ್ತೂರು ಎಸಿ ಪಂಚಾಯತ್‌ ಗೆ ಸೂಚಿಸಿದ್ದಾರೆ.

ಇತರ ಪೂರಕ ಅಂಶಗಳು
ಸರಕಾರ ತಾಲೂಕು ಕೇಂದ್ರವಾಗಿ ಗುರುತಿಸಿರುವ ಪ್ರಸ್ತಾವಿತ ಪಟ್ಟಣ ಪಂಚಾಯತ್‌ ವ್ಯಾಪ್ತಿಯ ಭೌಗೋಳಿಕ ವಿಸ್ತೀರ್ಣದ ಶೇ. 55 (3060.57 ಎಕರೆ) ಭಾಗ ಕೃಷಿಯೇತರ ಚಟುವಟಿಕೆಯ ಭೂಮಿಯಾಗಿದ್ದು, ಶೇ. 45 (2569.10 ಎಕರೆ) ಭಾಗ ಕೃಷಿ ಚಟುವಟಿಕೆಯ ಭೂಮಿಯಾಗಿದೆ. ಪಂಚಾಯತ್‌ ಸ್ವಾಮ್ಯದ ವಾಣಿಜ್ಯ ಸಂಕೀರ್ಣಗಳು, ಖಾಸಗಿ ಸ್ವಾಮ್ಯದ ವಾಣಿಜ್ಯ ಸಂಕೀರ್ಣಗಳು, 5 ರಾಷ್ಟ್ರೀಕೃತ ಬ್ಯಾಂಕ್‌ ಶಾಖೆಗಳು, ವಾರದ ಸಂತೆ, 2 ಪೆಟ್ರೋಲ್‌ ಪಂಪ್‌ ಗಳು, ಸಭಾಭವನಗಳು, ಸಹಕಾರಿ ಸಂಘಗಳು, ಕೃಷಿ ಪತ್ತಿನ ಸಹಕಾರಿ ಸಂಘ, ಭೂ ಅಭಿವೃದ್ಧಿ ಬ್ಯಾಂಕ್‌ ಶಾಖೆ, ಸರಕಾರಿ ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳು, ರೈಲು ನಿಲ್ದಾಣ, ಮೊಬೈಲ್‌ ಟವರ್‌ ಗಳು, ಸಮುದಾಯ ಆರೋಗ್ಯ ಕೇಂದ್ರ, ತಹಶೀಲ್ದಾರ್‌ ಕಚೇರಿ, ಸುಸಜ್ಜಿತ ರಸ್ತೆ ಸಂಪರ್ಕ ಇತ್ಯಾದಿಗಳನ್ನು ಪಟ್ಟಣ ಪಂಚಾಯತ್‌ ಗೆ ಪೂರಕ ಅಂಶಗಳಾಗಿ ಪ್ರಸ್ತಾವನೆಯಲ್ಲಿ ಉಲ್ಲೇಖೀಸಲಾಗಿದೆ.

ಹೊಸ ಪ್ರಸ್ತಾವನೆ
ಕಡಬವನ್ನು ಪಟ್ಟಣ ಪಂಚಾಯತ್‌ ಆಗಿ ಮೇಲ್ದರ್ಜೆಗೇರಿಸಲು ಪೂರಕವಾಗಿರುವ ಅಂಶಗಳನ್ನು ದಾಖಲಿಸಿ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಿಗೆ ಪ್ರಸ್ತಾವನೆಯನ್ನು ಕಳುಹಿಸಿಕೊಡಲಾಗಿದೆ. ಮುಂದಿನ ಪ್ರಕ್ರಿಯೆಗಳು ಸರಕಾರದ ಮಟ್ಟದಲ್ಲಿ ನಡೆಯಬೇಕಿವೆ. ಜನಸಂಖ್ಯೆ ಕಡಿಮೆ ಇರುವುದು ತೊಡಕಾಗುವುದಾದರೆ ಹತ್ತಿರದ ಬಂಟ್ರ ಗ್ರಾಮವನ್ನು ಸೇರಿಸಿಕೊಂಡು ಹೊಸ ಪ್ರಸ್ತಾವನೆ ಸಲ್ಲಿಸಲಾಗುವುದು. 
– ಚೆನ್ನಪ್ಪ ಗೌಡ ಕಜೆಮೂಲೆ, ಪಿಡಿಒ, ಕಡಬ ಗ್ರಾ.ಪಂ.

— ನಾಗರಾಜ್‌ ಎನ್‌.ಕೆ.

ಟಾಪ್ ನ್ಯೂಸ್

Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!

Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap ಶಂಭೂರು: ಕಾರು-ಬೈಕ್‌ ಢಿಕ್ಕಿ; ಸವಾರ ಗಾಯ

Road Mishap ಶಂಭೂರು: ಕಾರು-ಬೈಕ್‌ ಢಿಕ್ಕಿ; ಸವಾರ ಗಾಯ

Bantwal ರಸ್ತೆ ದಾಟಲು ನಿಂತಿದ್ದ ಮಹಿಳೆಗೆ ರಿಕ್ಷಾ ಢಿಕ್ಕಿ; ಗಾಯ

Bantwal ರಸ್ತೆ ದಾಟಲು ನಿಂತಿದ್ದ ಮಹಿಳೆಗೆ ರಿಕ್ಷಾ ಢಿಕ್ಕಿ; ಗಾಯ

udAgricultural ಪಂಪ್‌ಸೆಟ್‌ ಕಳವು: ಕಳ್ಳರ ಚಹರೆ ಕೆಮರಾದಲ್ಲಿ ಸೆರೆ

Agricultural ಪಂಪ್‌ಸೆಟ್‌ ಕಳವು: ಕಳ್ಳರ ಚಹರೆ ಕೆಮರಾದಲ್ಲಿ ಸೆರೆ

Bantwal ಸಂಬಂಧಿ ಯುವತಿಯ ಮೇಲೆ ಅತ್ಯಾಚಾರ: ಆರೋಪಿ ಬಂಧನ

Bantwal ಸಂಬಂಧಿ ಯುವತಿಯ ಮೇಲೆ ಅತ್ಯಾಚಾರ: ಆರೋಪಿ ಬಂಧನ

Sullia: ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣಕ್ಕೆ 2ವರ್ಷ: ಈವರೆಗೂ 7ಮಂದಿಯ ಪತ್ತೆಯೇ ಆಗಿಲ್ಲ!

Sullia: ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣಕ್ಕೆ 2ವರ್ಷ: ಈವರೆಗೂ 7ಮಂದಿಯ ಪತ್ತೆಯೇ ಆಗಿಲ್ಲ!

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

3-hunsur

Hunsur: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಯುವಕ ಸಾವು

Screenshot (2)

Mangaluru: ಸೈನಿಕರನ್ನು ಗೌರವದಿಂದ ನಡೆಸಿಕೊಳ್ಳಿ: ಬ್ರಿ| ಐ.ಎನ್‌. ರೈ

Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!

Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.