ಪ್ಲಾಸ್ಟಿಕ್‌ ಸಂಗ್ರಹಣೆ ಕೇಂದ್ರ ಸ್ಥಾಪನೆಗೆ ಪ್ರಸ್ತಾವ


Team Udayavani, Nov 24, 2020, 1:59 PM IST

ಪ್ಲಾಸ್ಟಿಕ್‌ ಸಂಗ್ರಹಣೆ ಕೇಂದ್ರ ಸ್ಥಾಪನೆಗೆ ಪ್ರಸ್ತಾವ

ಸಾಂದರ್ಭಿಕ ಚಿತ್ರ

ಮಹಾನಗರ, ನ. 23: ಪಾಲಿಕೆ ವ್ಯಾಪ್ತಿಯಲ್ಲಿ ಈ ಹಿಂದೆ ಇದ್ದ ಪ್ಲಾಸ್ಟಿಕ್‌ ಸಂಗ್ರಹ ಕೇಂದ್ರದ ಮಾದರಿಯಲ್ಲಿ ವ್ಯವಸ್ಥಿತ ವಾದ ಪ್ಲಾಸ್ಟಿಕ್‌ ಸಂಗ್ರಹಣೆ ಕೇಂದ್ರಕ್ಕೆ (ಪ್ಲಾಸ್ಟಿಕ್‌ ಕಲೆಕ್ಷನ್‌ ಸೆಂಟರ್‌) ಅವಕಾಶ ಮಾಡಿಕೊಡಲು ಪಾಲಿಕೆ ಮುಂದಾಗಿದೆ.

ನಗರದಲ್ಲಿ ಕ್ಯಾರಿ ಬ್ಯಾಗ್‌ಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಅಲ್ಲದೆ 50 ಮೈಕ್ರಾನ್‌ಗಿಂತ ಕಡಿಮೆ ದಪ್ಪದ ಪ್ಲಾಸ್ಟಿಕ್‌ ಉತ್ಪಾದನೆ, ಬಳಕೆಗೆ ಕೂಡ ನಿಷೇಧವಿದೆ. ಆದರೂ ಪ್ಲಾಸ್ಟಿಕ್‌ ಹಾವಳಿ ಹೆಚ್ಚಾಗಿದೆ. ಕೋವಿಡ್ ಸಂದರ್ಭ ಹೊಟೇಲ್‌ಗ‌ಳಿಂದ ಊಟ, ತಿಂಡಿ ಪಾರ್ಸೆಲ್‌ ಪ್ರಮಾಣ ಹೆಚ್ಚಳ, ಪ್ಲಾಸ್ಟಿಕ್‌ ವಿರುದ್ಧ ಅಧಿಕಾರಿಗಳ ಕಾರ್ಯಾಚರಣೆ ಸ್ಥಗಿತ ಮೊದಲಾದವುಗಳು ಇದಕ್ಕೆ ಕಾರಣ.

ದಿನಕ್ಕೆ 60 ಟನ್‌  :

ಪಾಲಿಕೆ ವ್ಯಾಪ್ತಿಯಲ್ಲಿ ಪ್ರಸ್ತುತ ದಿನಕ್ಕೆ ಸುಮಾರು 60 ಟನ್‌ ಪ್ಲಾಸ್ಟಿಕ್‌ ತ್ಯಾಜ್ಯ ಉತ್ಪಾದನೆಯಾಗುತ್ತದೆ. ಇದರಲ್ಲಿ ಕ್ಯಾರಿ ಬ್ಯಾಗ್‌, ಪೊಟ್ಟಣಗಳ ಪ್ಲಾಸ್ಟಿಕ್‌ ಪಾಲು ದೊಡ್ಡದು. ಪಚ್ಚನಾಡಿಯಲ್ಲಿ ಪ್ಲಾಸ್ಟಿಕ್‌ ಸಂಸ್ಕರಣೆ ಘಟಕವಿದೆ. ಇದಲ್ಲದೆ ಬೈಕಂಪಾಡಿಯಲ್ಲಿಯೂ ಪ್ಲಾಸ್ಟಿಕ್‌ ರಿಸೈಕಲಿಂಗ್‌ ಘಟಕಗಳಿವೆ. ಆದರೂ ಪ್ಲಾಸ್ಟಿಕ್‌ ತ್ಯಾಜ್ಯ ನಿರ್ವಹಣೆ ಸವಾಲಾಗಿದೆ.

ಸ್ಥಳಾವಕಾಶಕ್ಕೆ ಬೇಡಿಕೆ :

ಈ ಹಿಂದೆ ಕದ್ರಿ ಮಾರ್ಕೆಟ್‌ ಕಟ್ಟಡದಲ್ಲಿ “ಪ್ಲಾಸ್ಟಿಕ್‌ ಕಲೆಕ್ಷನ್‌ ಸೆಂಟರ್‌’ ಇತ್ತು. ಅಲ್ಲಿ ಸಾರ್ವಜನಿಕರಿಂದ ಕ್ಯಾರಿಬ್ಯಾಗ್‌ ಸಹಿತ ಎಲ್ಲ ರೀತಿಯ ಪ್ಲಾಸ್ಟಿಕ್‌ಗಳನ್ನು ಖರೀದಿಸಲಾಗುತ್ತಿತು. ಆದರೆ ಕಟ್ಟಡವನ್ನು ಕೆಡವಿದ ಅನಂತರ ಈಗ ಸ್ಥಳಾವಕಾಶವಿಲ್ಲ. ಅದೇ ರೀತಿಯ ಕಲೆಕ್ಷನ್‌ ಸೆಂಟರ್‌ ಮಾಡಲು ಪಾಲಿಕೆ ವ್ಯಾಪ್ತಿಯಲ್ಲಿ ಅವಕಾಶ ನೀಡಬೇಕು ಎಂದು ಪ್ಲಾಸ್ಟಿಕ್‌ ಉತ್ಪಾದನ ಸಂಸ್ಥೆಯವರು ಪಾಲಿಕೆಗೆ ಮನವಿ ಸಲ್ಲಿಸಿದ್ದು, ಇದಕ್ಕೆ ಪಾಲಿಕೆ ಅಧಿಕಾರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.

ಕಾರ್ಯಾಚರಣೆ ಚುರುಕು :

ಪ್ಲಾಸ್ಟಿಕ್‌ ನಿರ್ವಹಣೆ ಬಗ್ಗೆ ಎನ್‌ಜಿಟಿ ಕೂಡ ಮಾಹಿತಿ ಕೇಳಿದೆ. ಹಸಿ, ಒಣಕಸವನ್ನು ವಿಂಗಡಿಸಿ ನೀಡುವಂತೆ ಸಾರ್ವಜನಿಕರಿಗೆ ಸೂಚಿಸಲಾಗಿದೆ. ಪ್ಲಾಸ್ಟಿಕ್‌ನ ವಿಂಗಡಣೆ, ರಿಸೈಕಲಿಂಗ್‌ ಪಚ್ಚನಾಡಿ ಯಲ್ಲಿಯೂ ನಡೆಯುತ್ತದೆ. ನಿಷೇಧಿತ ಪ್ಲಾಸ್ಟಿಕ್‌ ಮಾರಾಟ, ಬಳಕೆ ಕಂಡು ಬಂದರೆ ದಂಡ ವಿಧಿಸುವ ಪ್ರಕ್ರಿಯೆಯನ್ನು ಇನ್ನಷ್ಟು ಹೆಚ್ಚಿಲಾಗುವುದು ಎಂದು ಮನಪಾ ಪರಿಸರ ಎಂಜಿನಿಯರ್‌ ಮಧು ಮನೋಹರ್‌ ತಿಳಿಸಿದ್ದಾರೆ.

ಪ್ಲಾಸ್ಟಿಕ್‌ ಬರುವುದು ಎಲ್ಲಿಂದ? :

ನಿಷೇಧಿತ ಪ್ಲಾಸ್ಟಿಕ್‌ಗಳ ಉತ್ಪಾದನೆ ದ.ಕ. ಜಿಲ್ಲೆಯಲ್ಲಿ ನಡೆಯುತ್ತಿಲ್ಲ. ಆದರೆ ಮುಂಬಯಿ, ಬೆಂಗಳೂರು ಕಡೆಯಿಂದ ಯಥೇಚ್ಛವಾಗಿ ಜಿಲ್ಲೆಗೆ ಪ್ಲಾಸ್ಟಿಕ್‌ ಪೂರೈಕೆಯಾಗುತ್ತಿದೆ. ಪ್ಲಾಸ್ಟಿಕ್‌ ನಿಷೇಧ ಪರಿಣಾಮಕಾರಿಯಾಗಿ ಅನುಷ್ಠಾನವಾಗಬೇಕಾದರೆ ಈ ರೀತಿ ಬೇರೆ ರಾಜ್ಯ, ಜಿಲ್ಲೆಗಳಿಂದ ಬರುವ ಪ್ಲಾಸ್ಟಿಕ್‌ ಅನ್ನು ನಿರ್ಬಂಧಿಸಬೇಕು. ಪ್ಲಾಸ್ಟಿಕ್‌ ಬಳಕೆ ನಿಷೇಧ ಶೇ. 100ರಷ್ಟು ಕಷ್ಟಸಾಧ್ಯವಾದ್ದರಿಂದ ಅದರ ವಿಲೇವಾರಿಗೂ ಅಗತ್ಯ ಕ್ರಮ ಕೈಗೊಳ್ಳಬೇಕು. ಕಲೆಕ್ಷನ್‌ ಸೆಂಟರ್‌ ಮಾಡಿದರೆ ಜನರೇ ಸ್ವಯಂ ಆಗಿ ತಂದುಕೊಡಲು ಆಸಕ್ತಿ ತೋರಿಸಬಹುದು ಎನ್ನುವುದು ಪ್ಲಾಸ್ಟಿಕ್‌ ಉತ್ಪಾದಕರ ಅಭಿಪ್ರಾಯ.

ಬೇಡಿಕೆ ಪರಿಗಣನೆ  : ಪ್ಲಾಸ್ಟಿಕ್‌ ಕಲೆಕ್ಷನ್‌ ಸೆಂಟರ್‌ಗೆ ಸ್ಥಳಾವಕಾಶ ನೀಡಲು ಬೇಡಿಕೆ ಬಂದಿದೆ. ಇದನ್ನು ಪರಿಗಣಿಸಿ ಪಾಲಿಕೆಗೆ ಸಂಬಂಧಿಸಿದ ಕಟ್ಟಡದಲ್ಲಿ ಸೂಕ್ತ ಸ್ಥಳಾವಕಾಶ ಒದಗಿಸಿಕೊಡುತ್ತೇವೆ.  -ಅಕ್ಷಯ್‌ ಶ್ರೀಧರ್‌,   ಆಯುಕ್ತರು, ಮನಪಾ

ನಿರ್ವಹಣೆಗೆ ಸಿದ್ಧ :  ನಿಷೇಧಿತ ಪ್ಲಾಸ್ಟಿಕ್‌ಗಳು ಜಿಲ್ಲೆಗೆ ಪೂರೈಕೆಯಾಗದಂತೆ ನೋಡಿಕೊಳ್ಳಬೇಕು. ಪ್ಲಾಸ್ಟಿಕ್‌ನಿಂದ ಮಾಡುವ ಪ್ರಮುಖ ಕಂಪೆನಿಗಳ ತಿಂಡಿಪೊಟ್ಟಣಗಳನ್ನು ನಿಷೇಧಿಸಬೇಕು. ಪ್ಲಾಸ್ಟಿಕ್‌ ಬಳಕೆ ತಡೆಯುವ ಜತೆಗೆ ಬಳಕೆಯಾದ ಪ್ಲಾಸ್ಟಿಕ್‌ನ ಸಮರ್ಪಕ ವಿಲೇವಾರಿಯೂ ಅಗತ್ಯ. ಇದಕ್ಕೆ ಕಲೆಕ್ಷನ್‌ ಸೆಂಟರ್‌ ಪೂರಕ. ಇಂತಹ ಸೆಂಟರ್‌ನ್ನು ನಿರ್ವಹಿಸಲು ಅಸೋಸಿಯೇಶ‌ನ್‌ ಸಿದ್ಧವಿದೆ. ಈ ಬಗ್ಗೆ ಈಗಾಗಲೇ ಪಾಲಿಕೆಗೆ ಪ್ರಸ್ತಾವ ಸಲ್ಲಿಸಿದ್ದೇವೆ.    -ಬಿ.ಎ. ನಝೀರ್‌,   ಅಧ್ಯಕ್ಷರು, ಕೆನರಾ ಪ್ಲಾಸ್ಟಿಕ್‌ ಉತ್ಪಾದಕರ ಸಂಘ, ಮಂಗಳೂರು

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.