ಬಳಕೆದಾರರ ಬೇಡಿಕೆಗೆ ಮಣಿದ ಮೆಸ್ಕಾಂ 


Team Udayavani, May 4, 2018, 11:59 AM IST

4-May-6.jpg

ಬೆಳ್ಳಾರೆ: ಬೆಳ್ಳಾರೆಗೆ ಪ್ರತ್ಯೇಕ ಫೀಡರ್‌ ಅಳವಡಿಸಿ, ಭೂಗತ (ಅಂಡರ್‌ ಗ್ರೌಂಡ್‌) ಕೇಬಲ್‌ ಮೂಲಕ ವಿದ್ಯುತ್‌ ಪೂರೈಕೆ ಮಾಡುವಾಗ ಅಗತ್ಯ ಸುರಕ್ಷತಾ ಕ್ರಮ ಕೈಗೊಳ್ಳುವುದಾಗಿ ಮೆಸ್ಕಾಂ ಅಧಿಕಾರಿ ಗಳು ಬೆಳ್ಳಾರೆಯ ವರ್ತಕ ಸಂಘ ಹಾಗೂ ಬಳಕೆದಾರರಿಗೆ ಭರವಸೆ ನೀಡಿದ್ದಾರೆ. ವರ್ತಕರು, ಬಳಕೆದಾರರೊಂದಿಗೆ ಸ್ಥಳೀಯ ಗ್ರಾಮ ಪಂಚಾಯತ್‌
ಸಭಾಭವನದದಲ್ಲಿ ನಡೆದ ಮುಖಾಮುಖಿ  ಕಾರ್ಯಕ್ರಮದಲ್ಲಿ ಅಧಿಕಾರಿಗಳು ಈ ಭರವಸೆ ನೀಡಿದ್ದಾರೆ.

ಇತ್ತೀಚೆಗೆ ಬೆಳ್ಳಾರೆಯ ಮುಖ್ಯ ರಸ್ತೆಯ ಬದಿಯಲ್ಲಿ ಚರಂಡಿಯನ್ನು ತೋಡಿ ಭೂಗತ ಕೇಬಲ್‌ ಮುಖಾಂತರ 33 ಕೆ.ವಿ. ವಿದ್ಯುತ್‌ ಸರಬರಾಜು ಮಾಡುವುದಕ್ಕಾಗಿ ಚರಂಡಿ ತೋಡುವ ಕಾಮಗಾರಿಯನ್ನು ಮೆಸ್ಕಾಂ ಪ್ರಾರಂಭಿಸಿತ್ತು. ಯಾವ ಕಾಮಗಾರಿಗೆ ಚರಂಡಿ ತೋಡುತ್ತಿದ್ದಾರೆ ಎಂಬುದೇ ವರ್ತಕ ಸಂಘ ಹಾಗೂ ಬಳಕೆದಾರರಿಗೆ ಮೊದಲಿಗೆ ತಿಳಿಯಲಿಲ್ಲ. ಬಳಿಕ, ಇದು ಮೆಸ್ಕಾಂ ಕಾಮಗಾರಿಯಾಗಿದ್ದು, ಭೂಗತ ಕೇಬಲ್‌ ಮೂಲಕ ವಿದ್ಯುತ್‌ ಸಂಪರ್ಕ ನೀಡಲು ಸಿದ್ಧತೆ ಎಂದು ತಿಳಿದು ಬಂತು.

ಸ್ಥಗಿತಗೊಳಿಸಿದ್ದರು
ಎಚ್ಚೆತ್ತುಕೊಂಡ ವರ್ತಕ ಸಂಘ ಹಾಗೂ ಬಳಕೆದಾರರು, ನೆಲದ ಅಡಿಯಲ್ಲಿ ಕೇಬಲ್‌ ಅಳವಡಿಸಿ ವಿದ್ಯುತ್‌ ಸರಬರಾಜು ಮಾಡುವುದು ತುಂಬಾ ಅಪಾಯಕಾರಿ. ಬೆಳ್ಳಾರೆ ಪೇಟೆಯವರಿಗೆ ಅಸಮರ್ಪಕ ವಿದ್ಯುತ್‌ ಪೂರೈಕೆ ಆಗುತ್ತಿದ್ದು, ಬೆಳ್ಳಾರೆ ಪೇಟೆಗೆ ಪ್ರತ್ಯೇಕ ಸಿಟಿ ಫೀಡರ್‌ ನಿರ್ಮಾಣ ಮಾಡಿಕೊಡುತ್ತೇವೆ ಎಂದು ಮೆಸ್ಕಾಂ ಈ ಹಿಂದೆ ನೀಡಿರುವ ಭರವಸೆಯನ್ನು ಈಡೇರಿಸಬೇಕು. ಅಲ್ಲಿಯ ತನಕ ಕಾಮಗಾರಿ ಮುಂದುವರಿಸಲು ಬಿಡಬಾರದು. ಮುಂದುವರಿಸಿದರೆ ಉಗ್ರವಾಗಿ ಪ್ರತಿಭಟಿಸಲಾಗುವುದು ಎಂದು ಬಳಕೆದಾರರು ಜಿಲ್ಲಾಧಿಕಾರಿಗೆ ಹಾಗೂ ಸ್ಥಳೀಯ ಗ್ರಾ.ಪಂ.ಗೆ ದೂರು ನೀಡಿದ್ದರು.

ಈ ಸಮಸ್ಯೆಯ ಬಗ್ಗೆ ಉದಯವಾಣಿಯ ‘ಸುದಿನ’ದಲ್ಲಿ ವಿವರವಾದ ವರದಿ ಪ್ರಕಟವಾಗಿತ್ತು. ಈ ಹಿನ್ನೆಲೆಯಲ್ಲಿ ತಾ.ಪಂ. ಇಒ ಮಧು ಕುಮಾರ್‌ ಸ್ಥಳಕ್ಕೆ ಬಂದು, ಕಾಮಗಾರಿ ನಿಲ್ಲಿಸಿದ್ದರು. ಬಳಿಕ ವರ್ತಕರ ಸಂಘ ಮತ್ತು ಬಳಕೆದಾರರೊಂದಿಗೆ ಮಾತುಕತೆ ನಡೆಸುವುದಾಗಿ ಮೆಸ್ಕಾಂ ಹೇಳಿತ್ತು.

ಸಭೆಯಲ್ಲಿ ಬಳಕೆದಾರರ ವೇದಿಕೆ ಸಂಚಾಲಕ ಜಯಪ್ರಸಾದ್‌ ಜೋಶಿ, ಗ್ರಾ.ಪಂ. ಪಿಡಿಒ ಸುನಂದಾ ರೈ, ಸಂಘದ ಕಾರ್ಯದರ್ಶಿ ವಿನಯಕುಮಾರ್‌, ಗುತ್ತಿಗಾರಿನ ಮೆಸ್ಕಾಂ ಎಂಜಿನಿಯರ್‌ ಬೋರಯ್ಯ, ಬೆಳ್ಳಾರೆ ಎಂಜಿನಿಯರ್‌
ಸತ್ಯನಾರಾಯಣ, ಸುಳ್ಯದ ಎಂಜಿನಿಯರ್‌ ಪ್ರಸಾದ್‌ ಕೆ.ವಿ., ಬಳಕೆದಾರು ಉಪಸ್ಥಿತರಿದ್ದರು. ವರ್ತಕ ಸಂಘದ ಗೌರವಾಧ್ಯಕ್ಷ ಬಿ. ಸುಬ್ರಹ್ಮಣ್ಯ ಜೋಶಿ ಪ್ರಸ್ತಾವಿಸಿ, ಸ್ವಾಗತಿಸಿದರು.

ಪ್ರತ್ಯೇಕ ಫೀಡರ್‌
ಸಭೆಯಲ್ಲಿ ವರ್ತಕರು ತಮ್ಮ ಬೇಡಿಕೆ ಈಡೇರಿಸುವುದಾಗಿ ಲಿಖಿತವಾಗಿ ಬರೆದು ಕೊಡಬೇಕೆಂದು ಮೆಸ್ಕಾಂ ಅಧಿಕಾರಿಗಳಿಗೆ ಮನವಿ ಸಲ್ಲಿಸಿತು. ವರ್ತಕರು, ಬಳಕೆದಾರರೊಂದಿಗೆ ಚರ್ಚಿಸಿದ ಮೆಸ್ಕಾಂ, ಭೂಗತ
ಕೇಬಲ್‌ ಅಳವಡಿಸಿ ವಿದ್ಯುತ್‌ ಪೂರೈಕೆಗೆ ಸುರಕ್ಷತಾ ಕ್ರಮ ಕೈಗೊಳ್ಳುವುದಾಗಿ ಮತ್ತು ಬೆಳ್ಳಾರೆಗೆ ಪ್ರತ್ಯೇಕ ಸಿಟಿ ಫೀಡರ್‌ ಅನ್ನು ಮೇ 31ರೊಳಗೆ ಸ್ಥಾಪಿಸುವುದಾಗಿ ಮೆಸ್ಕಾಂ ಎಂಜಿನಿಯರ್‌ ಹರೀಶ್‌ ಲಿಖಿತ ಭರವಸೆ ನೀಡಿದರು.

ಟಾಪ್ ನ್ಯೂಸ್

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.