ಮೂಡಬಿದಿರೆ: ‘ಹಿಂದೂ ವಿರೋಧಿ ಶಾಸಕರ’ ವಿರುದ್ಧ  ಪ್ರತಿಭಟನೆ


Team Udayavani, Mar 20, 2018, 8:05 AM IST

Swamiji-Strike-19-3.jpg

ಮೂಡಬಿದಿರೆ: ಕರಿಂಜೆ ಶ್ರೀ ಮುಕ್ತಾನಂದ ಸ್ವಾಮೀಜಿ ಅವರನ್ನು ನಿಂದಿಸಿ ಮಾತನಾಡಿದರೆನ್ನಲಾದ ಮೂಡಬಿದಿರೆ ಶಾಸಕ ಕೆ. ಅಭಯಚಂದ್ರ ವಿರುದ್ಧ ಮೂಡಬಿದಿರೆಯಲ್ಲಿ ವಿಶ್ವಹಿಂದೂ ಪರಿಷತ್‌ ಮೂಡಬಿದಿರೆ ಪ್ರಖಂಡ ವತಿಯಿಂದ ಸೋಮವಾರ ಸಂಜೆ ಪ್ರತಿಭಟನ ಮೆರವಣಿಗೆ ಹಾಗೂ ಸ್ವರಾಜ್ಯ ಮೈದಾನದಲ್ಲಿ ಬಹಿರಂಗ ಪ್ರತಿಭಟನ ಸಭೆ ಜರಗಿತು.

ಗುರುಪುರ ವಜ್ರದೇಹಿ ಮಠಾಧೀಶ ಶ್ರೀ ರಾಜಶೇಖರಾನಂದ ಸ್ವಾಮೀಜಿ ಮಾತನಾಡಿ, ‘ಅಹಿಂಸೆಯನ್ನು ಪ್ರತಿಪಾದಿಸುವ ಹಿನ್ನೆಲೆಯ ಮತದವರಾದ ಮೂಡಬಿದಿರೆ ಶಾಸಕರು ಹಿಂಸಾತ್ಮಕ ನಡೆನುಡಿಯ ಮೂಲಕ ಕರಿಂಜೆ ಸ್ವಾಮೀಜಿಯವರನ್ನು ಅವಮಾನಿಸಿರುವುದು ಸರಿಯಲ್ಲ. ತಾಕತ್ತಿದ್ದರೆ ಅವರು ವಜ್ರದೇಹಿಯ ಸುದ್ದಿಗೆ ಬರಲಿ. ನೇರ ವಿಧಾನಸೌಧಕ್ಕೂ ಬಂದು ಜರೆಯುವೆ’ ಎಂದರು. ‘ಸಂತರು ತೊಟ್ಟಿರುವುದು ‘ ಅಗ್ನಿ ವಸ್ತ್ರ’. ಬೇಕಾದರೆ ನೀವು ರಾಜಕೀಯ ಸಂತರಾಗಿ’ ಎಂದು ಅವರು ಪ್ರತಿ ಸವಾಲು ಹಾಕಿದರು.

ಕರಿಂಜೆ ಶ್ರೀ ಮುಕ್ತಾನಂದ ಸ್ವಾಮೀಜಿ ಮಾತನಾಡಿ, ‘ಶಾಸಕರು ಜೇನುಗೂಡಿಗೆ ಕಲ್ಲು ಎಸೆದು ಸಮಸ್ಯೆಯನ್ನು ಎದುರು ಹಾಕಿಕೊಂಡಂತಾಗಿದೆ; ಹಿಂದುತ್ವದ ವಿಚಾರದಲ್ಲಿ ವಜ್ರದೇಹಿ ಸ್ವಾಮೀಜಿ ತಮಗೆ ಸ್ಫೂರ್ತಿ’ ಎಂದರು.

ಗೋಹಂತಕರಿಗೆ ಮಹತ್ವ ನೀಡಿದ ರಾಜ್ಯ ಸರಕಾರ
ವಿಹಿಂಪ ಕ್ಷೇತ್ರೀಯ ಸಂಘಟನ ಕಾರ್ಯದರ್ಶಿ ಗೋಪಾಲ್‌ಜೀ ಮುಖ್ಯ ಭಾಷಣ ಮಾಡಿದರು. ಟಿಪ್ಪು ಜಯಂತಿ ಆಚರಿಸಿದ ಹಿಂದೂ ವಿರೋಧಿ ಸರಕಾರ ಕರ್ನಾಟಕದಲ್ಲಿದೆ. ಈಗಿರುವುದು ಗೋಹಂತಕರನ್ನು ಬೆಂಬಲಿಸುವ ರಾವಣ ರಾಜ್ಯ ಎಂದವರು ಹೇಳಿದರು. ಹಿಂದೂ ಸ್ವಾಮೀಜಿಯವರನ್ನು ನಿಂದಿಸಿದ ಶಾಸಕರಿಗೆ ಶಿಕ್ಷೆ ಖಂಡಿತ. ಹಾಗೆಂದು ನಮಗೆ ಅವರ ರಾಜೀನಾಮೆ ಬೇಡ. ಜನರೇ ಅವರ ರಾಜೀನಾಮೆ ಕೊಡಿಸ್ತಾರೆ. ಇಷ್ಟೆಲ್ಲ ಹತ್ಯೆಗಳಾದ ಈ ರಾಜ್ಯ ರಾವಣ ರಾಜ್ಯವಲ್ಲದೇ ಇನ್ನೇನು? ಎಂದು ಅವರು ಪ್ರಶ್ನಿಸಿದರು.

ವಿಹಿಂಪ ಪ್ರಾಂತ ಅಧ್ಯಕ್ಷ ಪ್ರೊ| ಎಂ.ಬಿ. ಪುರಾಣಿಕ್‌ ಮಾತನಾಡಿ, ‘ಶಾಸಕರು ಸ್ವಾಮೀಜಿಯವರ ಕ್ಷಮೆ ಕೇಳಬೇಕು’ ಎಂದು ಆಗ್ರಹಿಸಿದರು. ಮಾಜಿ ವಿಧಾನಪರಿಷತ್‌ ಸದಸ್ಯ ಮೋನಪ್ಪ ಭಂಡಾರಿ ಅವರು, ‘ಕರಿಂಜೆ ಸ್ವಾಮೀಜಿ ಭೂ ಅತಿಕ್ರಮಿಸಿದ್ದಾರೆ ಎಂಬುದು ಸುಳ್ಳು ಮಾತು ಆಡಿರುವ ಶಾಸಕರು ತಮ್ಮ ಬೆಂಬಲಿಗರು ಮಾಡಿರುವ ಅಕ್ರಮಗಳ ಬಗ್ಗೆ ಏಕೆ ಮಾತನಾಡುತ್ತಿಲ್ಲ? ಎಂದು ಪ್ರಶ್ನಿಸಿದರು. ಶಾಸಕರ ಓಲೈಕೆಯ ರಾಜಕಾರಣದಿಂದ ಹಿಂದೂಗಳಿಗೆ ಇಲ್ಲಿ ಅವಮಾನವಾಗಿದೆ ಎಂದು ಅವರು ಆರೋಪಿಸಿದರು.

ಬಜರಂಗದಳ ತಾಲೂಕು ಸಂಚಾಲಕ ಸುಚೇತನ್‌ ಜೈನ್‌ ಸ್ವಾಗತಿಸಿದರು. ವಿಹಿಂಪ ಪ್ರಖಂಡ ಉಪಾಧ್ಯಕ್ಷ ಸೋಮನಾಥ ಕೋಟ್ಯಾನ್‌ ಪ್ರಸ್ತಾವನೆಗೈದರು. ವಿಹಿಂಪ ಪ್ರಾಂತ ಕಾರ್ಯಾಧ್ಯಕ್ಷ ಪ್ರೊ| ಎಂ.ಬಿ. ಪುರಾಣಿಕ್‌, ವಿಹಿಂಪ ಜಿಲ್ಲಾಧ್ಯಕ್ಷ ಜಗದೀಶ ಶೇಣವ, ಬಜರಂಗದಳ ಪ್ರಾಂತ ಸಂಯೋಜಕ ಸುನೀಲ್‌ ಕೆ.ಆರ್‌. ಉಪಸ್ಥಿತರಿದ್ದರು. ವಿಹಿಂಪ ಪ್ರಖಂಡ ಕಾರ್ಯಾಧ್ಯಕ್ಷ ಶ್ಯಾಮ ಹೆಗ್ಡೆ ನಿರೂಪಿಸಿ ವಂದಿಸಿದರು. ಸಭೆಗೆ ಮುನ್ನ ಶ್ರೀ ವೆಂಕಟರಮಣ ದೇವಸ್ಥಾನದ ಬಳಿಯಿಂದ ಹೊರಟ ಪ್ರತಿಭಟನಾ ಮೆರವಣಿಗೆ ಪೇಟೆಯನ್ನು ಹಾದು ಸ್ವರಾಜ್ಯ ಮೈದಾನ ತಲುಪಿತು.

ಟಾಪ್ ನ್ಯೂಸ್

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.