Mulki: ವಿಜಾಪುರದ ರಸ್ತೆ ಸಮಸ್ಯೆಗೆ ಮೂಲ್ಕಿಯಲ್ಲಿ ಟವರ್ ಏರಿ ಪ್ರತಿಭಟನೆ!
Team Udayavani, Oct 1, 2023, 1:59 AM IST
ಮೂಲ್ಕಿ: ಇಲ್ಲಿಯ ಕೈಗಾರಿಕಾ ಪ್ರದೇಶದ ಶ್ರೀ ಕೊರಗಜ್ಜ ಕ್ಷೇತ್ರ ಬಳಿಯಲ್ಲಿರುವ ಮೊಬೈಲ್ ಟವರ್ ಮೇಲೇರಿದ ವ್ಯಕ್ತಿಯೋರ್ವ ನೆರೆದ ಜನರಿಗೆ, ಪೊಲೀಸರಿಗೆ ಹಾಗೂ ಅಗ್ನಿಶಾಮಕ ದಳದ ಸಿಬಂದಿ ಆತಂಕಗೊಳ್ಳುವಂತೆ ಮಾಡಿದ ಘಟನೆ ಶನಿವಾರ ಸಂಭವಿಸಿದೆ. ಸುಮಾರು ನಾಲ್ಕು ತಾಸುಗಳ ಬಳಿಕ ಆತ ತಾನಾಗಿಯೇ ಇಳಿಯುತ್ತಲೇ ಆತಂಕ ದೂರವಾಯಿತು.
ಸತೀಶ (24) ಎಂಬ ಬಿಜಾಪುರ ಜೇವರ್ಗಿ ಮೂಲದ ಯುವಕನೋರ್ವ ಬೆಳಗ್ಗೆ 9ಕ್ಕೆ ಟವರ್ ಮೇಲೇರುತ್ತಿರುವುದನ್ನು ನೋಡಿದ ಜನ ಪೊಲೀಸ್ ಮತ್ತು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದರು. ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೈಕ್ ಮೂಲಕ ಆತನನ್ನು ಸಮಾಧಾನ ಪಡಿಸಿ ಹಲವು ಭರವಸೆ ಕೊಟ್ಟರೂ ಇಳಿಯುವ ಬಗ್ಗೆ ಸ್ಪಂದಿಸಲೇ ಇಲ್ಲ.
ಸುಮಾರು ನಾಲ್ಕು ತಾಸಿನ ಬಳಿಕ ಕೆಳಗಿಳಿದ ಆತ ನಮ್ಮ ಬಿಜಾಪುರ ಬಾಗಲಕೋಟೆಯಲ್ಲಿ ರಸ್ತೆ ಮತ್ತು ಇತರ ಸಮಸ್ಯೆಗಳು ಬಹಳಷ್ಟು ಇರುವುದರಿಂದ ನಾನು ಇಲ್ಲಿ ಈ ರೀತಿ ಪ್ರತಿಭಟನೆ ಮಾಡುತ್ತಿದ್ದೇನೆ ಎಂದು ಹೇಳಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ