ಹಳೆಯಂಗಡಿ ಗ್ರಾಮ ಪಂಚಾಯತ್ ನ ಆಡಳಿತದ ವಿರುದ್ಧ ಪ್ರತಿಭಟನೆ
Team Udayavani, Aug 2, 2019, 1:15 PM IST
ಹಳೆಯಂಗಡಿ: ಗ್ರಾಮ ಪಂಚಾಯತ್ ನ ಆಡಳಿತದ ವಿರುದ್ಧ ಸಾರ್ವಜನಿಕರು ಹಾಗೂ ಬಿಜೆಪಿಯ ಸ್ಥಾನೀಯ ಸಮಿತಿಯ ನೇತೃತ್ವದಲ್ಲಿ ಶುಕ್ರವಾರ ಗ್ರಾಮ ಪಂಚಾಯತ್ ಭಾಗದಲ್ಲಿ ಪ್ರತಿಭಟನೆ ನಡೆಯಿತು.
ಗ್ರಾಮ ಪಂಚಾಯತ್ ನ ಆಡಳಿತದಲ್ಲಿ ಗ್ರಾಮ ಸಭೆ ವಾರ್ಡ್ ಸಭೆ ಸಾಮಾನ್ಯ ಸಭೆ ಕಳೆದ 10 ತಿಂಗಳಿಂದ ನಡೆಯುತ್ತಿಲ್ಲ. ಗ್ರಾಮಸ್ಥರಿಗೆ ಯಾವೊಂದು ಸೌಲಭ್ಯ ಸಿಗುತ್ತಿಲ್ಲ. ತ್ಯಾಜ್ಯ ವಿಲೇವಾರಿ ಸರಿಯಾಗಿ ನಡೆಯುತ್ತಿಲ್ಲ. ಗ್ರಾಮಸ್ಥರ ಸಮಸ್ಯೆಗೆ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿ ಪ್ರತಿಭಟನೆ ನಡೆದಿದೆ.
ಮಂಗಳೂರು ತಾಲೂಕು ಪಂಚಾಯತ್ ನ ಕಾರ್ಯನಿರ್ವಾಹಣ ಅಧಿಕಾರಿ ಸದಾನಂದ ಅವರು ಸ್ಥಳಕ್ಕೆ ಬಂದು ಪ್ರತಿಭಟನಾಕಾರರ ಮನವಿಯನ್ನು ಸ್ವೀಕರಿಸಿದರು.
ಪ್ರತಿಭಟನೆಯಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯ ವಿನೋದ್ ತಾಲೂಕು ಪಂಚಾಯತ್ ಸದಸ್ಯ ಜೀವನ್ ಪ್ರಕಾಶ್, ಹಳೆಯಂಗಡಿ ಗ್ರಾಮ ಪಂಚಾಯತ್ ನ ಬಿಜೆಪಿ ಬೆಂಬಲಿತ ಸದಸ್ಯರು., ನ್ಯಾಯವಾದಿ ಡೇನಿಯಲ್ ಡಿಸೋಜ, ಬಿಜೆಪಿಯ ಈಶ್ವರ್ ಕಟೀಲು, ನರೇಂದ್ರ ಪ್ರಭು, ಮನೋಜ್ ಕುಮಾರ್, ಶೂಗೇಂದ್ರ ಸಸಿಹಿತ್ಲು, ಸತೀಶ್ ಭಟ್, ರಾಮಚಂದ್ರ ಮತ್ತಿತರರು ಭಾಗವಹಿಸಿದ್ದರು
ಪಣಂಬೂರು ಎಸಿಪಿ ಶ್ರೀನಿವಾಸಗೌಡ ಹಾಗೂ ಮುಲ್ಕಿ ಇನ್ಸ್ಪೆಕ್ಟರ್ ಅನಂತಪದ್ಮನಾಭ ಇವರ ನೇತೃತ್ವದಲ್ಲಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!