ಕೊಂಬೆಟ್ಟು ಶಾಲಾ ವಿದ್ಯಾರ್ಥಿಗಳಿಂದ ಪ್ರತಿಭಟನೆ
6 ಶಿಕ್ಷಕರ ವರ್ಗಾವಣೆಗೆ ಆಕ್ರೋಶ, ರದ್ದುಪಡಿಸಲು ಆಗ್ರಹ
Team Udayavani, Jul 12, 2019, 5:01 AM IST
ಪುತ್ತೂರು: ಕೊಂಬೆಟ್ಟು ಸರಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಆರು ಶಿಕ್ಷಕರನ್ನು ಹೆಚ್ಚುವರಿ ಶಿಕ್ಷಕರೆಂದು ಪರಿಗಣಿಸಿ ಒಂದೇ ಬಾರಿಗೆ ವರ್ಗಾವಣೆ ಮಾಡಿರುವುದನ್ನು ವಿರೋಧಿಸಿ ಮತ್ತು ಈ ವರ್ಗಾವಣೆಯನ್ನು ರದ್ದುಪಡಿಸುವಂತೆ ಆಗ್ರಹಿಸಿ ಗುರುವಾರ ಶಾಲಾ ವಿದ್ಯಾರ್ಥಿಗಳು ಮತ್ತು ಹೆತ್ತವರು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ತನಕ ಪ್ರತಿಭಟನ ಮೆರವಣಿಗೆ ನಡೆಸಿ ಮನವಿ ಸಲ್ಲಿಸಿದರು.
ಶಾಲೆಯಲ್ಲಿ ನಡೆದ ಪ್ರತಿಭಟನ ಸಭೆ ಯಲ್ಲಿ ಎಸ್ಡಿಎಂಸಿ ಕಾರ್ಯಾಧ್ಯಕ್ಷ, ಕೊಂಬೆಟ್ಟು ವಾರ್ಡ್ ನಗರಸಭಾ ಸದಸ್ಯ ಪಿ.ಜಿ. ಜಗನ್ನಿವಾಸ ರಾವ್ ಮಾತನಾಡಿ, ಕೊಂಬೆಟ್ಟು ಶಾಲೆಗೆ ವಿದ್ಯಾರ್ಥಿಗಳನ್ನು ಸೇರಿಸಲು ಅಧ್ಯಾಪಕರು ವಿಶೇಷ ಅಭಿಯಾನ ನಡೆಸಿ ಮಕ್ಕಳ ಸಂಖ್ಯೆ ಮತ್ತಷ್ಟು ಜಾಸ್ತಿಯಾಯಿತು. ಆದರೆ ಈಗ ಶಿಕ್ಷಕರ ಕೊರತೆಯಾಗಿದೆ. ಶಾಸಕರ ನೇತೃತ್ವ ದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ನಿರ್ದೇಶಕರನ್ನು ಭೇಟಿ ಮಾಡಿ ಈ ಕುರಿತು ಮನವರಿಕೆ ಮಾಡಲಾಗಿತ್ತು.
ನ್ಯಾಯ ದೊರೆಯಬೇಕು