ಕೊಂಬೆಟ್ಟು ಶಾಲಾ ವಿದ್ಯಾರ್ಥಿಗಳಿಂದ ಪ್ರತಿಭಟನೆ

6 ಶಿಕ್ಷಕರ ವರ್ಗಾವಣೆಗೆ ಆಕ್ರೋಶ, ರದ್ದುಪಡಿಸಲು ಆಗ್ರಹ

Team Udayavani, Jul 12, 2019, 5:01 AM IST

kombettu

ಪುತ್ತೂರು: ಕೊಂಬೆಟ್ಟು ಸರಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಆರು ಶಿಕ್ಷಕರನ್ನು ಹೆಚ್ಚುವರಿ ಶಿಕ್ಷಕರೆಂದು ಪರಿಗಣಿಸಿ ಒಂದೇ ಬಾರಿಗೆ ವರ್ಗಾವಣೆ ಮಾಡಿರುವುದನ್ನು ವಿರೋಧಿಸಿ ಮತ್ತು ಈ ವರ್ಗಾವಣೆಯನ್ನು ರದ್ದುಪಡಿಸುವಂತೆ ಆಗ್ರಹಿಸಿ ಗುರುವಾರ ಶಾಲಾ ವಿದ್ಯಾರ್ಥಿಗಳು ಮತ್ತು ಹೆತ್ತವರು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ತನಕ ಪ್ರತಿಭಟನ ಮೆರವಣಿಗೆ ನಡೆಸಿ ಮನವಿ ಸಲ್ಲಿಸಿದರು.

ಶಾಲೆಯಲ್ಲಿ ನಡೆದ ಪ್ರತಿಭಟನ ಸಭೆ ಯಲ್ಲಿ ಎಸ್‌ಡಿಎಂಸಿ ಕಾರ್ಯಾಧ್ಯಕ್ಷ, ಕೊಂಬೆಟ್ಟು ವಾರ್ಡ್‌ ನಗರಸಭಾ ಸದಸ್ಯ ಪಿ.ಜಿ. ಜಗನ್ನಿವಾಸ ರಾವ್‌ ಮಾತನಾಡಿ, ಕೊಂಬೆಟ್ಟು ಶಾಲೆಗೆ ವಿದ್ಯಾರ್ಥಿಗಳನ್ನು ಸೇರಿಸಲು ಅಧ್ಯಾಪಕರು ವಿಶೇಷ ಅಭಿಯಾನ ನಡೆಸಿ ಮಕ್ಕಳ ಸಂಖ್ಯೆ ಮತ್ತಷ್ಟು ಜಾಸ್ತಿಯಾಯಿತು. ಆದರೆ ಈಗ ಶಿಕ್ಷಕರ ಕೊರತೆಯಾಗಿದೆ. ಶಾಸಕರ ನೇತೃತ್ವ ದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ನಿರ್ದೇಶಕರನ್ನು ಭೇಟಿ ಮಾಡಿ ಈ ಕುರಿತು ಮನವರಿಕೆ ಮಾಡಲಾಗಿತ್ತು.

ನ್ಯಾಯ ದೊರೆಯಬೇಕು

ಎಸ್‌ಡಿಎಂಸಿ ಅಧ್ಯಕ್ಷ ಹಾಗೂ ನ್ಯಾಯವಾದಿ ಪಡ್ಡಂಬೈಲು ಸುರೇಶ್‌ ಶೆಟ್ಟಿ ಮಾತನಾಡಿ, ಶತಮಾನವನ್ನು ಕಂಡ ಸರಕಾರಿ ಶಾಲೆ ಎಲ್ಲ ರೀತಿಯ ಪ್ರಗತಿಯ ದೃಷ್ಟಿಯಿಂದ ಮುಂಚೂಣಿಯಲ್ಲಿದೆ. 650 ವಿದ್ಯಾರ್ಥಿಗಳಿರುವ ಕೊಂಬೆಟ್ಟು ಪ್ರೌಢಶಾಲೆಯಲ್ಲಿ ಮುಖ್ಯ ಶಿಕ್ಷಕರು, ಚಿತ್ರಕಲಾ ಶಿಕ್ಷಕರು ಮತ್ತು ದೈಹಿಕ ಶಿಕ್ಷಣ ಶಿಕ್ಷಕರನ್ನು ಹೊರತುಪಡಿಸಿ ಸರಕಾರದ ನಿಯಮಾವಳಿಯಂತೆ 20 ಮಂದಿ ಶಿಕ್ಷಕರಿರಬೇಕು. ಈಗ ಒಂದೇ ಬಾರಿಗೆ ಆರು ಮಂದಿ ಶಿಕ್ಷಕರನ್ನು ವರ್ಗಾವಣೆ ಮಾಡಿದ ಕಾರಣ ಕೇವಲ 13 ಮಂದಿ ಶಿಕ್ಷಕರಿದ್ದಾರೆ. ಶಾಲೆಯ ಬೆಳವಣಿಗೆಗೆ ಇದು ಮಾರಕವಾಗಿದೆ. ಈ ನಿಟ್ಟಿನಲ್ಲಿ ನ್ಯಾಯ ದೊರೆಯುವವರೆಗೆ ಪ್ರತಿಭಟನೆ ಮಾಡುತ್ತೇವೆ ಎಂದರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

CAR-D

Sullia: ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಕಂಟೈನರ್‌ ಢಿಕ್ಕಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.