‘ಶಾಂತಿಯುತ ಹೋರಾಟ ಅವಗಣಿಸಬೇಡಿ’


Team Udayavani, Oct 25, 2018, 12:09 PM IST

25-october-7.gif

ಸುರತ್ಕಲ್‌ : ಸ್ಥಳೀಯರಿಗೆ ರಾಷ್ಟ್ರೀ ಯ ಹೆದ್ದಾರಿ ಒಂದೇ ಸಂಚಾರ ನಾಡಿ ಎಂಬಂತಾಗಿದ್ದು, ಸರ್ವಿಸ್‌ ರಸ್ತೆಯಿಂದ ಹಿಡಿದು ಯಾವುದೇ ಮೂಲಸೌಲಭ್ಯ ಮರೀಚಿಕೆಯಾಗಿದೆ. ಶಾಂತಿಯುತ ಹೋರಾಟವನ್ನು ಅವಗಣಿಸದಿರಿ ಎಂದು ಮಾಜಿ ಉಪಮೇಯರ್‌ ಬಶೀರ್‌ ಬೈಕಂಪಾಡಿ ಹೇಳಿದರು.

ಟೋಲ್‌ ಗೇಟ್‌ ವಿರೋಧಿ ಹೋರಾಟ ಸಮಿತಿ ಸುರತ್ಕಲ್‌ ಟೋಲ್‌ ಗೇಟ್‌ ಮುಚ್ಚುವಂತೆ ಒತ್ತಾಯಿಸಿ ನಡೆಯುತ್ತಿರುವ ಹಗಲು ರಾತ್ರಿಯ ಮೂರನೇ ದಿನದ ಧರಣಿಯಲ್ಲಿ ಭಾಗವಹಿಸಿ ಮಾತನಾಡಿದರು. ಹೊಂಡ ಗುಂಡಿಗಳಿರುವ ಇದಕ್ಕೂ ಟೋಲ್‌ ನಿಗದಿಪಡಿಸಿ ಅಕ್ರಮವಾಗಿ ಸುಂಕ ವಸೂಲಿ ಮಾಡುತ್ತಿರುವುದನ್ನು ತಡೆಯಲು ಸಂಸದರು ಯಾವುದೇ ಪ್ರಯತ್ನ ಮಾಡುತ್ತಿಲ್ಲ . ಪದೇ ಪದೇ ಟೋಲ್‌ ಗೇಟ್‌ ಮುಚ್ಚುತ್ತೇವೆ ಎಂದು ಹೇಳಿರುವುದೇ ಸಾಧನೆ. ಅ. 30ರ ಬಳಿಕ ಮುಚ್ಚದೇ ಹೋದಲ್ಲಿ ಸಂಸದರೂ ನಮ್ಮ ಜತೆ ಬರಲಿ ಹೇಗೆ ಮುಚ್ಚುವುದು ಎಂಬುದನ್ನು ನಾವು ತೋರಿಸುತ್ತೇವೆ ಎಂದರು. ಸ್ಥಳೀಯರ ಓಡಾಟಕ್ಕೆ ಪ್ರತ್ಯೇಕ ರಸ್ತೆಯಿಲ್ಲ, ಅಪಘಾತಗಳು ಹೆಚ್ಚುತ್ತಿವೆ. ಇದೀಗ ಅಲ್ಲಲ್ಲಿ ಟೋಲ್‌ಗೇಟ್‌ ನಿರ್ಮಿಸಿ ಸುಂಕ ವಸೂಲಿ ಮಾಡಲಾಗುತ್ತಿದೆ. ಯಾವುದೇ ಸೌಲಭ್ಯವಿಲ್ಲದ ಸುರತ್ಕಲ್‌ ಟೋಲ್‌ಗೇಟ್‌ ನವೀಕರಣ ಮಾಡದೆ ಮುಚ್ಚಬೇಕು ಎಂದು ಆಗ್ರಹಿಸಿದರು.

ಟೋಲ್‌ಗೇಟ್‌ನಿಂದ ಅನ್ಯಾಯ
ಮಾಜಿ ಶಾಸಕ ವಿಜಯ್‌ಕುಮಾರ್‌ ಶೆಟ್ಟಿ ಮಾತನಾಡಿ, ಕೇವಲ ಕೆಲವು ಮಂದಿಗೆ ಮಾತ್ರ ಟೋಲ್‌ಗೇಟ್‌ ಹೋರಾಟ ಅಲ್ಲ. ಟೋಲ್‌ಗೇಟ್‌ನಿಂದ ಸಾವಿರಾರು ಮಂದಿಗೆ ಅನ್ಯಾಯವಾಗುತ್ತಿದೆ. ಈ ಹೋರಾಟಕ್ಕೆ ಸರ್ವರೂ ಬೆಂಬಲ ನೀಡಿ ಸುರತ್ಕಲ್‌ ಟೋಲ್‌ಗೇಟ್‌ ಮುಚ್ಚಿಸಲು ಹಕ್ಕೊತ್ತಾಯ ಮಂಡಿಸಬೇಕು ಎಂದು ಅವರು ಹೇಳಿದರು. ಹೋರಾಟದಲ್ಲಿ ಜಯಕರ್ನಾಟಕ ಸುರತ್ಕಲ್‌ ಘಟಕದ ಅಧ್ಯಕ್ಷ ವೈ. ರಾಘವೇಂದ್ರ ರಾವ್‌ ನೇತೃತ್ವದಲ್ಲಿ ರಿಕ್ಷಾ ಚಾಲಕರು, ಮಹಿಳೆಯರು ಬೆಳಗ್ಗಿನಿಂದ ಸಂಜೆವರೆಗೆ ಹೋರಾಟದಲ್ಲಿ ಪಾಲ್ಗೊಂಡರು. ಕಾರ್ಪೊರೇಟರ್‌ಗಳಾದ ದಯಾನಂದ ಶೆಟ್ಟಿ, ರೇವತಿ ಪುತ್ರನ್‌, ಎಸ್‌ಎಫ್‌ಐ ಜಿಲ್ಲಾಧ್ಯಕ್ಷ ಚರಣ್‌ ಶೆಟ್ಟಿ, ಮಾಧುರಿ ಬೋಳಾರ, ಡಿವೈಎಫ್‌ಐ ಮುಖಂಡರಾದ ಇಮ್ತಿಯಾಝ್, ನಿತಿನ್‌ ಕುತ್ತಾರ್‌, ಕಮಲಾಕ್ಷ ಬಜಾಲ್‌, ಶೇಖರ ಶೆಟ್ಟಿ ಮುಂಚೂರು, ಹೊಟೇಲ್‌ ಉದ್ಯಮಿ ಟಿ.ಎನ್‌. ರಮೇಶ್‌, ಹುಸೈನ್‌ ಕಾಟಿಪಳ್ಳ, ಭಾಸ್ಕರ ಶೆಟ್ಟಿಗಾರ್‌, ಫಿಲೋಮಿನಾ ಹೊಸಬೆಟ್ಟು, ಆಶಾ ಬೋಳೂರು, ದಯಾನಂದ ಶೆಟ್ಟಿ ಕಡಂ ಬೋಡಿ ಮೊದಲಾದವರು ಈ ಸಂದರ್ಭ ಪಾಲ್ಗೊಂಡರು.

ಟಾಪ್ ನ್ಯೂಸ್

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.