ಎನ್ಐಟಿಕೆ ಟೋಲ್ ವಿರುದ್ಧ ಕೆಸರಲ್ಲಿ ಕುಳಿತು ಪ್ರತಿಭಟನೆ!
ಆಪದ್ಭಾಂಧವ ಆಸೀಫ್ ನೇತೃತ್ವದಲ್ಲಿ ಅಹೋರಾತ್ರಿ ಪ್ರತಿಭಟನೆ ಐದನೇ ದಿನಕ್ಕೆ
Team Udayavani, Feb 11, 2022, 12:49 PM IST
ಸುರತ್ಕಲ್ : ರಾಷ್ಟ್ರೀಯ ಹೆದ್ದಾರಿ 66ರ ಸುರತ್ಕಲ್ ಎನ್ ಐಟಿಕೆ ಬಳಿ ಇರುವ ಟೋಲ್ಗೇಟ್ ತೆರವುಗೊಳಿಸುವಂತೆ ಆಗ್ರಹಿಸಿ ಸಾಮಾಜಿಕ ಹೋರಾಟಗಾರ ಆಪದ್ಭಾಂಧವ ಆಸೀಫ್ ನೇತೃತ್ವದಲ್ಲಿ ನಡೆಯುತ್ತಿರುವ ಅಹೋರಾತ್ರಿ ಪ್ರತಿಭಟನೆ ಶುಕ್ರವಾರ ಐದನೇ ದಿನಕ್ಕೆ ಕಾಲಿರಿಸಿದೆ.
ಗುರುವಾರ ಸ್ಥಳೀಯವಾಗಿ ತೋಡಲಾದ ಹೊಂಡದ ಕೆಸರು ನೀರಿನಲ್ಲಿ ಕುಳಿತು, ಮಲಗಿ ಪ್ರತಿಭಟನೆ ನಡೆಸಿದರು. ಸುರತ್ಕಲ್ ಪೊಲೀಸ್ ನಿರೀಕ್ಷಕ ಚಂದ್ರಪ್ಪ ಆಗಮಿಸಿ ಹೆದ್ದಾರಿ ಇಲಾಖೆಯ ಅನುಮತಿ ಮೇರೆಗೆ ಟೋಲ್ ಸಂಗ್ರಹಿಸುತ್ತಿರುವ ವಿಚಾರವನ್ನು ಗಮನಕ್ಕೆ ತಂದರಲ್ಲದೆ, ಕೇಂದ್ರ ಹೆದ್ದಾರಿ ಇಲಾಖೆಯೇ ಇದಕ್ಕೆ ಕ್ರಮ ಕೈಗೊಳ್ಳಬೇಕಿದೆ ಎಂದು ಮನವರಿಕೆ ಮಾಡಿದರು. ಆಸಿಫ್ ಅವರು ಜಿಲ್ಲಾಧಿಕಾರಿಗಳೇ ಸ್ಥಳಕ್ಕೆ ಆಗಮಿಸಿ ಅಹವಾಲು ಸ್ವೀಕರಿಸ ಬೇಕೆಂದು ಪಟ್ಟು ಹಿಡಿದಿದ್ದಾರೆ. ಇಲ್ಲಿ ಎರಡೆರಡು ಟೋಲ್ಗೇಟ್ ಅಗತ್ಯವಿಲ್ಲ; ತತ್ಕ್ಷಣ ಇದನ್ನು ತೆರವುಗೊಳಿಸಿ ಇಲ್ಲವಾದರೆ ವಿವಿಧ ಸಂಘಟನೆಗಳ ಜತೆಗೂಡಿ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ