ರಾಜ್ಯಪಾಲರನಿಲುವುಖಂಡಿಸಿ ಜಿಲ್ಲಾಕಾಂಗ್ರೆಸ್‌ ನೇತೃತ್ವದಲ್ಲಿಪ್ರತಿಭಟನೆ


Team Udayavani, May 18, 2018, 11:08 AM IST

18-may-6.jpg

ಮಹಾನಗರ: ಪೂರ್ಣ ಬಹುಮತವಿಲ್ಲದ ಬಿಜೆಪಿಗೆ ಸರಕಾರ ನಡೆಸಲು ರಾಜ್ಯಪಾಲರು ಅವಕಾಶ ನೀಡಿರುವುದು ಪ್ರಜಾಪ್ರಭುತ್ವ ವಿರೋಧಿ ನಿರ್ಧಾರ ಎಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್‌ ವತಿಯಿಂದ ಗುರುವಾರ ಸಂಜೆ ಮಂಗಳೂರು ಪುರಭವನ ಮುಂಭಾಗದ ಮಹಾತ್ಮಾ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಯಿತು.

ಮಾಜಿ ಶಾಸಕ ಜೆ.ಆರ್‌.ಲೋಬೋ ಮಾತನಾಡಿ, ದೇಶದಲ್ಲಿ ಪ್ರಜಾ ಪ್ರಭುತ್ವ ವಿರೋಧಿ ನಿಲುವು ಹಾಗೂ ನಡವಳಿಕೆಗಳು ನಡೆಯುತ್ತಲೇ ಇವೆ. ಇದಕ್ಕೆ ಸ್ಪಷ್ಟ ಉದಾಹರಣೆ ಎಂಬಂತೆ, ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಹುಮತವಿಲ್ಲದ ಬಿಜೆಪಿ ಪಕ್ಷಕ್ಕೆ ರಾಜ್ಯಪಾಲರು ಸರಕಾರ ರಚನೆಗೆ ಅವಕಾಶ ಮಾಡಿಕೊಟ್ಟಿರುವುದು ಪ್ರಜಾ ಪ್ರಭುತ್ವದ ದುರಂತ. ರಾಜ್ಯಪಾಲ ಹುದ್ದೆಯಲ್ಲಿ ಕುಳಿತವರು ಪ್ರಜಾಪ್ರಭುತ್ವ ಮೌಲ್ಯವನ್ನು ಎತ್ತಿಹಿಡಿಯುವುದರ ಜತೆಗೆ ಗೌರವಯುತವಾಗಿ, ಸಂವಿಧಾನಾತ್ಮಕವಾಗಿ ನಡೆದುಕೊಳ್ಳಬೇಕು ಎಂದರು.

ನಿರ್ಧಾರವನ್ನು ಪರಾಮರ್ಶೆ ಮಾಡಲಿ
ರಾಜ್ಯಪಾಲರ ನಿರ್ಧಾರವನ್ನು ಖಂಡಿಸಿ ಇಂದು ಜನರು ಬೀದಿಗೆ ಬಂದು ನಿಂತಿದ್ದಾರೆ. ಬೇರೆ ರಾಜ್ಯಗಳಲ್ಲಿ ಸರಕಾರ ರಚನೆ ಸಂಬಂಧ ಯಾವ ರೀತಿಯ ನೀತಿ ನಿಯಮಗಳನ್ನು ಪಾಲಿಸಲಾಗಿದೆಯೋ ಅದೇ ನಿಲುವುಗಳನ್ನು ರಾಜ್ಯದಲ್ಲಿಯೂ ಪಾಲಿಸಬೇಕು. ಬಹುಮತ ತೋರಿಸಿದ ಪಕ್ಷಗಳಿಗೆ ಸರಕಾರ ನಡೆಸಲು ಅವಕಾಶ ನೀಡಬೇಕು. ರಾಜ್ಯದಲ್ಲಿ ಜನಾಂದೋಲನ ಆಗುವ ಮೊದಲು ರಾಜ್ಯಪಾಲರು ತನ್ನ ಈಗಿನ ನಿರ್ಧಾರವನ್ನು ಪರಾಮರ್ಶೆ ಮಾಡಬೇಕು. ರಾಜ್ಯಪಾಲರು ತನ್ನ ವ್ಯಕ್ತಿ ಮತ್ತು ಹುದ್ದೆಯ ಗೌರವ ಕಾಪಾಡಲಿ. ಇದು ಸಾಂಕೇತಿಕ ಮುಷ್ಕರ ಆಗಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ ಎಂದರು.

ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಹರೀಶ್‌ ಕುಮಾರ್‌, ಮೇಯರ್‌ ಭಾಸ್ಕರ್‌ ಕೆ., ಉಪಮೇಯರ್‌ ಕೆ. ಮಹಮ್ಮದ್‌, ಮುಖ್ಯ ಸಚೇತಕ ಎಂ.ಶಶಿಧರ ಹೆಗ್ಡೆ, ತಾ.ಪಂ. ಅಧ್ಯಕ್ಷ ಮಹಮ್ಮದ್‌ ಮೋನು, ರಜನೀಶ್‌, ಸದಾಶಿವ ಉಳ್ಳಾಲ್‌, ಹರಿನಾಥ್‌, ವಿಶ್ವಾಸ್‌ ದಾಸ್‌, ಶಾಲೆಟ್‌ ಪಿಂಟೋ, ಅಪ್ಪಿ, ಮರಿಯಮ್ಮ ಥೋಮಸ್‌, ಅಬ್ದುಲ್‌ ಲತೀಫ್‌, ಅಬ್ದುಲ್‌ ಸಲೀಂ, ಸಂತೋಷ್‌ ಶೆಟ್ಟಿ, ಟಿ.ಕೆ. ಸುಧೀರ್‌, ಪ್ರವೀಣ್‌ ಆಳ್ವ, ನೀರಜ್‌ ಪಾಲ್‌, ಆರಿಫ್‌ ಬಾವಾ, ಮಹಮ್ಮದ್‌ ಹನೀಫ್‌, ನಝೀರ್‌ ಬಜಾಲ್‌, ವಸಂತ್‌ ಬೆರ್ನಾಡ್‌, ಉಮ್ಮರ್‌ ಫಾರೂಕ್‌ ಉಪಸ್ಥಿತರಿದ್ದರು. 

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.