ಮಂಗಳೂರು;ಶಾಲಾ ಬಸ್ ಮೇಲೆ ಉರುಳಿದ ಮರ – 17 ಮಕ್ಕಳು ಪ್ರಾಣಾಪಾಯದಿಂದ ಪಾರು
Team Udayavani, Aug 14, 2019, 10:42 AM IST
ಮಂಗಳೂರು: ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಶಾಲಾ ವಾಹನವೊಂದರ ಮೇಲೆ ಮರ ಉರುಳಿಬಿದ್ದ ಘಟನೆ ಬುಧವಾರದಂದು ನಡೆದಿದೆ. ಮಂಗಳೂರಿನ ಖಾಸಗಿ ಶಾಲೆಯೊಂದಕ್ಕೆ ಸೇರಿದ ಬಸ್ ಇದಾಗಿದ್ದು ಘಟನೆಯ ಸಂದರ್ಭದಲ್ಲಿ ಬಸ್ಸಿನಲ್ಲಿ 17 ಜನ ವಿದ್ಯಾರ್ಥಿಗಳಿದ್ದರು ಎಂದು ತಿಳಿದುಬಂದಿದೆ. ನಗರದ ನಂತೂರು ವೃತ್ತದ ಬಳಿ ಈ ಘಟನೆ ನಡೆದಿದೆ.
ಘಟನೆಯಿಂದಾಗಿ ಬಸ್ಸಿನ ಒಳಗಿದ್ದ ಮಕ್ಕಳು ಭಯಗೊಂಡಿದ್ದರು. ಬಳಿಕ ಮಕ್ಕಳ ಸಹಿತ ಬಸ್ಸಿನಲ್ಲಿದ್ದವರನ್ನು ಸುರಕ್ಷಿತವಾಗಿ ಇಳಿಸಿ ಬದಲೀ ವ್ಯವಸ್ಥೆಯ ಮೂಲಕ ಶಾಲೆಗೆ ಕಳುಹಿಸಿಕೊಡಲಾಗಿದೆ ಎಂದು ತಿಳಿದುಬಂದಿದೆ.
ಡಿಸಿಪಿ ಸಹಿತ ಇತರೇ ಪೊಲೀಸ್ ಅಧಿಕಾರಿಗಳು ಘಟನಾ ಸ್ಥಳಕ್ಕೆ ಧಾವಿಸಿದ್ದಾರೆ. ಈ ಬಸ್ಸಿನಲ್ಲಿ ಸಂಚರಿಸುತ್ತಿದ್ದ ಶಾಲಾ ಮಕ್ಕಳ ಸಹಿತ ಎಲ್ಲರೂ ಸುರಕ್ಷಿತವಾಗಿದ್ದಾರೆ ಎಂಬ ಮಾಹಿತಿಯನ್ನು ಸಂಬಂಧಿತ ಶಾಲೆಯ ಪ್ರಾಂಶುಪಾಲರು ತನಗೆ ನೀಡಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತರಾಗಿರುವ ಪಿ.ಎಸ್. ಹರ್ಷ ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
Mangaluru ಪೆಟ್ರೋಲ್, ಡೀಸೆಲ್ ತುಟ್ಟಿ : ಪುಷ್ಪಾ ಅಮರನಾಥ್
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ