ದೇರಳೆಕಟ್ಟೆ ಬಳಿ ಬೈಕ್ ಅಪಘಾತ: ದೈಹಿಕ ಶಿಕ್ಷಣ ಶಿಕ್ಷಕ ಸಾವು
Team Udayavani, Oct 29, 2022, 10:43 PM IST
ಉಳ್ಳಾಲ : ಬೈಕ್ ಅಪಘಾತಕ್ಕೀಡಾಗಿ ದೇರಳಕಟ್ಟೆ ಪಬ್ಲಿಕ್ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ದಾರುಣವಾಗಿ ಸಾವನ್ನಪ್ಪಿರುವ ಘಟನೆ ದೇರಳಕಟ್ಟೆ ಮಸೀದಿ ಬಳಿ ಶನಿವಾರ ಸಂಭವಿಸಿದೆ.
ದೇರಳಕಟ್ಟೆ ನಿವಾಸಿ ಇಸ್ಮಾಯಿಲ್ (55) ಮೃತರು. ಶನಿವಾರ ಮಧ್ಯಾಹ್ನ ಶಾಲೆ ಮುಗಿಸಿ ಮನೆ ಕಡೆಗೆ ತೆರಳಲು ರಸ್ತೆ ದಾಟುವ ಸಂದರ್ಭ ಅತಿವೇಗ ಹಾಗೂ ಅಜಾಗರೂಕತೆಯಿಂದ ಬಂದ ಬುಲೆಟ್ ಬೈಕ್ ಢಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಗಂಭೀರ ಗಾಯಗೊಂಡ ಇಸ್ಮಾಯಿಲ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಘಟನೆಯಲ್ಲಿ ಬೈಕ್ ಸವಾರರಿಬ್ಬರು ಗಾಯಗೊಂಡಿದ್ದಾರೆ. ಮೃತರು ಉತ್ತಮ ನಾಟಕ ಕಲಾವಿದ, ಖೋ ಖೋ ಪಂದ್ಯ ದಲ್ಲಿ ರಾಜ್ಯ ಮಟ್ಟದ ತೀರ್ಪುಗಾರರಾಗಿ, ಉಳ್ಳಾಲ ತಾಲೂಕು ವಾಲಿಬಾಲ್ ಅಸೋಸಿಯೇಷನ್ ಇದರ ಸಂಘಟನಾ ಕಾರ್ಯದರ್ಶಿ ಯಾಗಿಯೂ ಸೇವೆ ಸಲ್ಲಿಸುತ್ತಿದ್ದರು.ಮೃತರು ಇಬ್ಬರು ಪುತ್ರಿಯರು ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ.
ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಕುಂದುಕೊರತೆಗಳ ಮೇಲ್ಮನವಿ ಸಮಿತಿಯ ರಚನೆ ಕುರಿತು ಶೀಘ್ರ ಪ್ರಕಟ