ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ ಪ್ರಕಟ


Team Udayavani, Jan 5, 2020, 1:44 AM IST

37

ಕರ್ನಾಟಕ ನಾಟಕ ಅಕಾಡೆಮಿಯ 2019-20ನೇ ಸಾಲಿನ ಪ್ರಶಸ್ತಿ ಘೋಷಣೆಯಾಗಿದ್ದು, ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಇಬ್ಬರು ಸಾಧಕರು ಆಯ್ಕೆಯಾಗಿದ್ದಾರೆ. ಅವರ ಕಿರು ಪರಿಚಯ ಇಲ್ಲಿದೆ.

ವಿಜಯ್‌ ಕುಮಾರ್‌ ಕೊಡಿಯಾಲ್‌ಬೈಲ್‌
ಮಂಗಳೂರು: “ಒರಿಯ ರ್ದೊರಿ ಅಸಲ್‌’ ಚಿತ್ರದ ಮೂಲಕ ತುಳು ಚಿತ್ರರಂಗ ಹಾಗೂ ರಂಗ ಭೂಮಿಗೆ ಹೊಸ ಛಾಪು ನೀಡಿದ ವಿಜಯ್‌ ಕುಮಾರ್‌ ಕೊಡಿಯಾಲ್‌ಬೈಲ್‌ ಅವರದ್ದು ರಂಗಭೂಮಿ ಮತ್ತು ತುಳು ಚಿತ್ರರಂಗದಲ್ಲಿ 30 ವರ್ಷಗಳ ಅಗಾಧ ಅನುಭವ.

ಒರಿಯೆ ಮಗೆ, ಸೀತಾ ಟೀಚರ್‌, ಸಂಸಾರದ ಸರ್ಕಸ್‌, ಮದಿಮೆ, ಕಡಲಮಗೆ, ಒಯಿಕ್ಲಾ ಆವಂದಿನಕುಲು ಸೇರಿದಂತೆ 19ಕ್ಕೂ ಹೆಚ್ಚು ನಾಟಕಗಳನ್ನು ರಚಿಸಿ ನಿರ್ದೇಶಿಸಿದ್ದಾರೆ. ದೇವು ಪೂಂಜಾ, ಅಪ್ಪೆ ಮೂಕಾಂಬಿಕೆ, ಬಜರಂಗ ಬಲಿ, ಶಿವದೂತೆ ಗುಳಿಗೆ ಮುಂತಾದ ಪೌರಾಣಿಕ ನಾಟಕಗಳನ್ನು ನಿರ್ದೇಶಿಸಿದ್ದಾರೆ.

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯಿಂದ ತುಳುನಾಡ ಬಿರ್ಸೆ-2012, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ-2011, ಮುಂಬಯಿ ಶ್ರೀಕೃಷ್ಣ ವಿಠಲ ಪ್ರತಿಷ್ಠಾನದಿಂದ ಕಲಾಚಕ್ರವರ್ತಿ ಪ್ರಶಸ್ತಿ-2006, ಜೇಸೀ ಬೆಸ್ಟ್‌ ಔಟ್‌ಸ್ಟಾಂಡಿಂಗ್‌ ಯಂಗ್‌ ಪರ್ಸನ್‌ ಸೇರಿದಂತೆ ವಿವಿಧ ಪ್ರಶಸ್ತಿ, ಸಮ್ಮಾನಗಳಿಗೆ ಭಾಜನರಾಗಿದ್ದಾರೆ. 28ಕ್ಕೂ ಮೀರಿದ ತುಳು ಧ್ವನಿ ಸುರುಳಿಗಳಿಗೆ ಸಾಹಿತ್ಯ, “ಬರವುದ ಬಂಡಸಾಲೆ’ ಮಕ್ಕಳ ಕಿರುಚಲನಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ, ಸಾಹಿತ್ಯ ಬರೆದಿರುವುದು, 2015ರಲ್ಲಿ ಅದ್ದೂರಿ ವೆಚ್ಚದ “ಮದಿಮೆ’ ಚಲನಚಿತ್ರ ನಿರ್ದೇಶನ ಮಾಡಿದ್ದಾರೆ.

ಪ್ರಶಸ್ತಿ ಬಂದಿರು ವುದು ತುಂಬ ಸಂತೋಷ ವಾಗಿದೆ. ನನ್ನೊಂದಿಗೆ 30 ವರ್ಷಗಳ ಕಾಲ ದುಡಿದ ಎಲ್ಲ ಕಲಾವಿದರು, ತಂತ್ರಜ್ಞರು, ಪ್ರತ್ಯಕ್ಷ, ಪರೋಕ್ಷವಾಗಿ ಪ್ರೋತ್ಸಾಹಿಸಿದ ಕಲಾಭಿಮಾನಿಗಳಿಗೆ ಸಂದ ಗೌರವ ಇದು.
–   ವಿಜಯಕುಮಾರ್‌ ಕೊಡಿಯಾಲ್‌ಬೈಲ್‌

ಭಾಸ್ಕರ ಪೂಜಾರಿ ಮಣಿಪಾಲ
ಉಡುಪಿ: ಸುಮಾರು ನಲ್ವತ್ತು ವರ್ಷಗಳಿಂದ ರಂಗಭೂಮಿ ಕಲಾವಿದರಾಗಿ ಸೇವೆ ಸಲ್ಲಿಸುತ್ತಿರುವ ಮಣಿಪಾಲದ ಈಶ್ವರನಗರದ ನಿವಾಸಿ ಭಾಸ್ಕರ ಪೂಜಾರಿ ಅವರು ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

80ರ ದಶಕದಲ್ಲಿ ಮಣಿಪಾಲದ ಜೂನಿಯರ್‌ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾಗ ಛದ್ಮವೇಷದಲ್ಲಿ ತೊಡಗಿದ್ದು ಬಳಿಕ ನಾಟಕ ಕ್ಷೇತ್ರಕ್ಕೆ ಒಲವು ಹರಿಸಿದರು. ಸಂಗಮ ಕಲಾವಿದರು ನಾಟಕ ಸಂಸ್ಥೆಯ ಮೂಲಕ ರಂಗಕಲಾವಿದರಾಗಿ ನಾಟಕದಲ್ಲಿ ಅಭಿನಯಿಸಿರುವ ಅವರು 60ಕ್ಕೂ ಹೆಚ್ಚು ನಾಟಕಗಳಲ್ಲಿ ಮುಖ್ಯ ನಾಯಕನ ಪಾತ್ರ, ಹಾಸ್ಯ ಕಲಾವಿದರಾಗಿ, ಅಜ್ಜನ ಪಾತ್ರ, ಕುಡುಕನ ಪಾತ್ರ ಇತ್ಯಾದಿಯಾಗಿ ನಟಿಸಿದರು.

ಪುರಂದರನ ಪುನರ್‌ಜನ್ಮ ನಾಟಕವು ಮದ್ಯಪಾನದಿಂದಾಗುವ ಹಾನಿಯ ಬಗ್ಗೆ ಸಂದೇಶ ನೀಡಿತು.¤ ಅದರಲ್ಲಿ ಅವರ ಕುಡುಕನ ಮನೋಜ್ಞ ಪಾತ್ರ ನಿರ್ವಹಣೆ ನೋಡಿದ ಹಲವರು ಮದ್ಯ ತ್ಯಜಿಸಿದ್ದರು.
ಚಂದ್ರಪ್ಪನ ಚಟ್ಟದ ಯಾತ್ರೆ, ಪುರಂದರನ ಪುನರ್‌ಜನ್ಮ, ಮಿನಿಸ್ಟರ್‌ ಮಾಮಣ್ಣೆ, ಅಂಗಾರ, ಹಸಿರು ನಾಡಿನ ಕೆಂಪು ಹಾದಿ, ಅಟಿಲ್ದಾಯೆ ಇತ್ಯಾದಿ ಅವರ ಪ್ರಮುಖ ನಾಟಕಗಳು. ಕೆಮೂ¤ರು ದೊಡ್ಡಣ್ಣ ಶೆಟ್ಟಿ ನಾಟಕ ಸ್ಪರ್ಧೆಯಲ್ಲಿ ಶೇಷ್ಠ ನಟ ಪ್ರಶಸ್ತಿ ಸಹಿತ ಹಲವು ಪುರಸ್ಕಾರಗಳು ಸಂದಿವೆ.

ಅಕಾಡೆಮಿ ಪ್ರಶಸ್ತಿ ತುಂಬ ಖುಷಿ ತಂದಿದೆ. ಮಕ್ಕಳಿಗೆ ನಾಟಕ ತರಬೇತಿ ನೀಡುವ ಸಂಸ್ಥೆ ಹುಟ್ಟುಹಾಕುವ ಯೋಜನೆ ಇದೆ.
-ಭಾಸ್ಕರ ಪೂಜಾರಿ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.