ಪಿಯುಸಿ ಪರೀಕ್ಷೆ: ಕಲಾ ವಿಭಾಗದಲ್ಲಿ 561 ಅಂಕ ಗಳಿಸಿ ಅಂಧ ವಿದ್ಯಾರ್ಥಿನಿಯ ಸಾಧನೆ
Team Udayavani, Jun 18, 2022, 11:15 PM IST
ಮಂಗಳೂರು: ಈಕೆ ಬೆಳಕು ಕಂಡಿಲ್ಲ. ಆದರೆ ಅಕ್ಷರ ಬೆಳಕಿನ ಮೂಲಕ ಬದುಕು ಬೆಳಗಿಸುವ ಆಸೆ.
ಅಂಧ ವಿದ್ಯಾರ್ಥಿನಿ ಯಾಗಿರುವ ಅಪೂರ್ವಾ ಇತರರಿಗೆ ಸ್ಫೂರ್ತಿಯಾಗುವಂತಹ ಸಾಧನೆ ಮಾಡಿದ್ದಾರೆ. ಅವರು ಈ ಬಾರಿಯ ಪಿಯುಸಿ ಪರೀಕ್ಷೆಯ ಕಲಾ ವಿಭಾಗದಲ್ಲಿ 561 ಅಂಕ ಗಳಿಸಿದ್ದಾರೆ.
ಬೆಳಗಾವಿಯ ಕಾಗ್ವಾಡ್ ತಾ| ಮೋಳೆ ಗ್ರಾಮದ ಅಪೂರ್ವಾ ನಗರದ ಸೈಂಟ್ ಆ್ಯಗ್ನೆಸ್ ಪಿಯು ಕಾಲೇಜಿನ ಕಲಾ ವಿಭಾಗದ ವಿದ್ಯಾರ್ಥಿನಿ. ಬ್ರೈಲ್ ಲಿಪಿ ಯಲ್ಲೇ ಅಭ್ಯಾಸ ಮಾಡಿ ಪರೀಕ್ಷೆ ಬರೆದಿದ್ದಾರೆ. ಅಪೂರ್ವಾಳ ತಂದೆ ಬಾಹುಬಲಿ ಟೊಪಗಿ ಕೃಷಿಕ. ತಾಯಿ ರೋಹಿಣಿ ಟೊಪಗಿ ಶಿಕ್ಷಕಿ. ಅವರ ಮೂವರು ಮಕ್ಕಳು ಕೂಡ ಅಂಧರು. ಅಪೂರ್ವಾಳ ಸಹೋದರಿ ಬಿಎಡ್, ಸಹೋದರ ಬಿಎ ಓದುತ್ತಿದ್ದಾರೆ.
ಐಎಎಸ್ ಅಧಿಕಾರಿ ಆಗುವಾಸೆ
“ಉದಯವಾಣಿ’ಯೊಂದಿಗೆ ಮಾತನಾಡಿದ ಅಪೂರ್ವಾ, “ನನಗೆ ಕನಿಷ್ಠ 580 ಅಂಕಗಳ ನಿರೀಕ್ಷೆ ಇತ್ತು. ಆದ್ದರಿಂದ ಮರುಮೌಲ್ಯಮಾಪನಕ್ಕೆ ಹಾಕುತ್ತೇನೆ. ಐಎಎಸ್ ಅಧಿಕಾರಿಯಾಗುವ ಆಸೆ ಇದೆ. ಬೆಂಗಳೂರಿನ ಎಂ.ಎಸ್. ರಾಮಯ್ಯ ಕಾಲೇಜಿನಲ್ಲಿ ಬಿಎ ಮಾಡಲಿದ್ದೇನೆ’ ಎಂದು ಹೇಳಿದ್ದಾರೆ.
ಹಿಂಜರಿಕೆ ಬೇಡ
ನಾನು ಅಂಧಳಾಗಿದ್ದರೂ ಶಾಪ ಅಥವಾ ವರ ಎಂದು ಭಾವಿಸಿಲ್ಲ. ಧೈರ್ಯದಿಂದ ಮುನ್ನುಗ್ಗಿದರೆ ಯಾರು ಕೂಡ ಸಾಧನೆ ಮಾಡಬಹುದು. ಪಾಠವನ್ನು ಸರಿಯಾಗಿ ಓದುತ್ತಿದ್ದೆ. ಸಂದೇಹವಿದ್ದರೆ ಶಿಕ್ಷಕರಲ್ಲಿ ಕೇಳಿ ಪರಿಹರಿಸಿಕೊಳ್ಳುತ್ತಿದ್ದೆ. ಪ್ರಶ್ನೆಪತ್ರಿಕೆಗಳನ್ನು ಅಭ್ಯಸಿಸುತ್ತಿದ್ದೆ. ತಂದೆ, ತಾಯಿ ತುಂಬಾ ಪ್ರೋತ್ಸಾಹ ಮಾಡುತ್ತಿ ದ್ದಾರೆ. ಏನಾದರೂ ಸ್ವಲ್ಪ ವಿಫಲವಾದರೂ ಹುರಿದುಂಬಿಸುತ್ತಿದ್ದಾರೆ ಎಂದು ಅಪೂರ್ವಾ ಹೇಳಿದ್ದಾರೆ.
ಮಗಳ ಸಾಧನೆಯಿಂದ ತುಂಬಾ ಖುಷಿಯಾಗಿದೆ. ಆಕೆಗೆ ಇನ್ನಷ್ಟು ಅಂಕದ ನಿರೀಕ್ಷೆ ಇತ್ತು. ಆಕೆ ವಿಶೇಷವಾಗಿ ಅಭ್ಯಾಸ ಮಾಡುತ್ತಿರಲಿಲ್ಲ. ಆದರೆ ಆಡಿಯೋ ಮೂಲಕ ಗಮನವಿಟ್ಟು ಅಧ್ಯಯನ ಮಾಡುತ್ತಿದ್ದಳು ಎಂದು ಅಪೂರ್ವಾಳ ತಾಯಿ ರೋಹಿಣಿ ಟೊಪಗಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
Mangaluru ಪೆಟ್ರೋಲ್, ಡೀಸೆಲ್ ತುಟ್ಟಿ : ಪುಷ್ಪಾ ಅಮರನಾಥ್
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
MUST WATCH
ಹೊಸ ಸೇರ್ಪಡೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ