ಪಂಪ್‌ವೆಲ್‌ ಫ್ಲೈ ಓವರ್‌: ಗರ್ಡರ್‌ನಲ್ಲಿ ಬಿರುಕು!


Team Udayavani, Oct 23, 2017, 1:07 PM IST

23Mng–8.jpg

ಮಹಾನಗರ: ಕೆಲವು ವರ್ಷಗಳಿಂದ ಕುಂಟುತ್ತಾ ಸಾಗಿ, ಸಾರ್ವಜನಿಕರ ಆಕ್ರೋಶಕ್ಕೆ ತುತ್ತಾಗಿರುವ ರಾ.ಹೆ. 66 ಹಾಗೂ 75ರ ಸಂಗಮ ಸ್ಥಳವಾದ ಪಂಪ್‌ ವೆಲ್‌ನ ಫ್ಲೈಓವರ್‌ ಕಾಮಗಾರಿಯಲ್ಲಿ ಈಗ ಮತ್ತೂಂದು ಎಡವಟ್ಟಾಗಿದೆ. ಕಾಮಗಾರಿಯಲ್ಲಿ ಲೋಪ ಎದುರಾದ ಹಿನ್ನೆಲೆಯಲ್ಲಿ ಫ್ಲೈ ಓವರ್‌ನ ಒಂದು ಭಾಗದಲ್ಲಿ ಅಳವಡಿಸಿದ ‘ಗರ್ಡರ್‌’ (ಕಾಂಕ್ರೀಟ್‌ನ ಉದ್ದದ ಸ್ತಂಭಗಳು) ಒಂದನ್ನು ಹಿಟಾಚಿ ಯಂತ್ರದ ಮೂಲಕ ಕತ್ತರಿಸಲಾಗುತ್ತಿದೆ. ಮಾರ್ಚ್‌ ಅಂತ್ಯದ ವೇಳೆಗೆ ಪೂರ್ಣಗೊಳ್ಳಬೇಕಿದ್ದ ಫ್ಲೈ ಓವರ್‌ ಕಾಮಗಾರಿ ಇನ್ನಷ್ಟು ವಿಳಂಬವಾಗುವ ಲಕ್ಷಣ ಸ್ಪಷ್ಟವಾಗುತ್ತಿದೆ.

ಫ್ಲೈ ಓವರ್‌ ಜೋಡಿಸುವ ‘ಗರ್ಡರ್‌’ ಅಳವಡಿಕೆ ಇಲ್ಲಿ ನಡೆಯುತ್ತಿದೆ. ಐದಾರು ಗರ್ಡರ್‌ಗಳನ್ನು ಜೋಡಿಸಲಾಗಿದೆ. ಗರ್ಡರ್‌ಗಳನ್ನು ಕಾಮಗಾರಿ ಕೈಗೊಂಡ ಗುತ್ತಿಗೆದಾರರು ನಿಗದಿತ ಸ್ಥಳದಲ್ಲಿ ನಿರ್ಮಿಸಿ, ಬೃಹತ್‌ ಗಾತ್ರದ ಲಾರಿಯ ಮೂಲಕ ಕಾಮಗಾರಿ ನಡೆಸುವಲ್ಲಿಗೆ ತಂದು ಅದನ್ನು ಅತ್ಯಂತ ಜಾಗ್ರತೆಯಿಂದ ಜೋಡಿಸುತ್ತಾರೆ. ಆದರೆ, ಪಂಪ್‌ವೆಲ್‌ನಲ್ಲಿ ಜೋಡಿಸಿದ ಒಂದು ಗರ್ಡರ್‌ನಲ್ಲಿ ಸ್ವಲ್ಪ ಬಿರುಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅದನ್ನು ಬದಲಿಸಲು ನಿರ್ಧರಿಸಿ, ತೆರವು ಕಾರ್ಯಾಚರಣೆ ನಡೆಸಲಾಗುತ್ತಿದೆ.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿದಾಗ, ಒಂದು ಗರ್ಡರ್‌ನಲ್ಲಿ ಬಿರುಕು ಇರುವುದನ್ನು ಪತ್ತೆ ಹಚ್ಚಿದ್ದಾರೆ. ಗರ್ಡರ್‌ ಜೋಡಿಸುವಾಗ ಆದ ಎಡವಟ್ಟಿನಿಂದಾಗಿ ಇದರಲ್ಲಿ ಸಣ್ಣ ಬಿರುಕು ಕಾಣಿಸಿಕೊಂಡಿತ್ತು. ಅಧಿಕಾರಿಗಳ ಸೂಚನೆ ಮೇರೆಗೆ ಗರ್ಡರ್‌ ತೆರವು ನಡೆಯುತ್ತಿದೆ. ಹೊಸ ಗರ್ಡರ್‌ ಅಳವಡಿಕೆ ಕಾರ್ಯವನ್ನು ಗುತ್ತಿಗೆದಾರ ಕಂಪೆನಿಯೇ ನಿರ್ವಹಿಸಬೇಕಿದೆ.

ಮಾರ್ಚ್‌ ವೇಳೆಗೆ ಪೂರ್ಣ!
ಪಂಪ್‌ವೆಲ್‌ ಫ್ಲೈ ಓವರ್‌ ಕಾಮಗಾರಿ ಕುಂಟುತ್ತಾ ಸಾಗುತ್ತಿರುವ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣಗಳ ಮೂಲಕವೂ ಸಾರ್ವಜನಿಕರು ಇದನ್ನು ಅಪಹಾಸ್ಯ ಮಾಡಿದ ಪರಿಣಾಮ ಸುದ್ದಿಯಲ್ಲಿತ್ತು. ಸಂಸದ ನಳಿನ್‌ ಕುಮಾರ್‌ ಕಟೀಲು ಇತ್ತೀಚೆಗೆ ಮಂಗಳೂರಿನಲ್ಲಿ ರಾ.ಹೆ. ಪ್ರಾಧಿಕಾರದ ಅಧಿಕಾರಿಗಳ ಜತೆಗೆ ಸಭೆ ನಡೆಸಿ, ತುರ್ತಾಗಿ ಫ್ಲೈ ಓವರ್‌ ಕಾಮಗಾರಿ ಮುಗಿಸುವಂತೆ ಸೂಚನೆ ನೀಡಿದ್ದರು. ಮಾರ್ಚ್‌ ವೇಳೆಗೆ ಈ ಫ್ಲೈ ಓವರ್‌ ಅನ್ನು ಸಾರ್ವಜನಿಕರಿಗೆ ಬಿಟ್ಟುಕೊಡುವುದಾಗಿ ಅಧಿಕಾರಿಗಳು ತಿಳಿಸಿದ್ದರು. ಆದರೆ, ಐದು ವರ್ಷಗಳ ಸುದೀರ್ಘ‌ ಅವಧಿಯಿಂದ ಶೇ. 30ರಷ್ಟು ಮಾತ್ರ ಮುಗಿದಿರುವ ಕಾಮಗಾರಿ ಇನ್ನು 5 ತಿಂಗಳ ಒಳಗೆ ಪೂರ್ಣಗೊಳ್ಳುವುದು ಸಾಧ್ಯವೇ ಎಂಬ ಪ್ರಶ್ನೆ ಎದುರಾಗಿದೆ.

600 ಮೀ. ಉದ್ದದ ಫ್ಲೈ ಓವರ್‌
ಉಡುಪಿ- ಕಾಸರಗೋಡು ಮಾರ್ಗದ ಪಂಪ್‌ವೆಲ್‌ನಲ್ಲಿ ಈ ಫ್ಲೈ ಓವರ್‌ ನಿರ್ಮಾಣವಾಗುತ್ತಿದ್ದು, 600 ಮೀ. ಉದ್ದ ಹಾಗೂ 20 ಮೀ. ಅಗಲವಿರಲಿದೆ. ನಂತೂರಿನಿಂದ ಬರುವಾಗ ಕರ್ಣಾಟಕ ಬ್ಯಾಂಕ್‌ ಪ್ರಧಾನ ಕಚೇರಿಯಿಂದ ಇಂಡಿಯಾನ ಆಸ್ಪತ್ರೆ ಮುಂಭಾಗದವರೆಗೆ ಫ್ಲೈ ಓವರ್‌ ನಿರ್ಮಾಣವಾಗಲಿದೆ.

ಪಂಪ್‌ವೆಲ್‌ ಸುತ್ತಮುತ್ತ ವಾಹನದಟ್ಟಣೆ ತೀವ್ರಗೊಂಡ ಪರಿಣಾಮ ಈ ಭಾಗದಲ್ಲಿ ಸಂಚಾರ ಅಸ್ತವ್ಯಸ್ತವಾಗುತ್ತಿರುವುದು ಸಾಮಾನ್ಯ. ಎರಡೂ ಬದಿಯಿಂದ ಓಡಾಟಕ್ಕೆ ಅನುಕೂಲವಾಗುವ ರೀತಿಯಲ್ಲಿ ದ್ವಿಪಥದ ಫ್ಲೈ ಓವರ್‌ ನಿರ್ಮಾಣದ ಉದ್ದೇಶ ಇರಿಸಲಾಗಿದೆ.

ಪ್ರಸಕ್ತ ರಸ್ತೆಗಿಂತ ನೂತನ ಫ್ಲೈ ಓವರ್‌ ಸುಮಾರು ಐದೂವರೆ ಮೀ. ಎತ್ತರವಿರಲಿದೆ. ಕಾಮಗಾರಿಗಾಗಿ ಪಂಪ್‌ವೆಲ್‌ನ ಸುಂದರ ವೃತ್ತ ಹಾಗೂ ಕಲಶ ತೆಗೆಯಲಾಗಿದೆ. ಕುಂದಾಪುರದಿಂದ ತಲಪಾಡಿವರೆಗೆ (ಮಧ್ಯೆ ಸ್ವಲ್ಪ ಹೊರತುಪಡಿಸಿ) ಹೆದ್ದಾರಿ ಚತುಷ್ಪಥ ಕಾಮಗಾರಿಯನ್ನು ನವಯುಗ ಕಂಪೆನಿಯವರು ನಿರ್ವಹಿಸಿರುವುದರಿಂದ ಕಾಮಗಾರಿಗೆ ತಗಲುವ ಒಟ್ಟು ವೆಚ್ಚದಲ್ಲಿ ಪಂಪ್‌ವೆಲ್‌ ಹಾಗೂ ತೊಕ್ಕೊಟ್ಟು ಫ್ಲೈ ಓವರ್‌ ಖರ್ಚು ಸೇರಿಕೊಂಡಿದೆ.

ಕಾಮಗಾರಿ ಮುಗಿದ ಮೇಲೆ ನಂತೂರಿನಿಂದ ಕಾಸರಗೋಡು ಕಡೆಗೆ ತೆರಳುವವರುಫ್ಲೈ ಓವರ್‌ ಮೂಲಕ, ಬೆಂಗಳೂರು ಕಡೆಗೆ ತೆರಳುವ ವಾಹನಗಳು ಫ್ಲೈ ಓವರ್‌ನ ಕೆಳಗಡೆಯಿಂದ ಸಾಗಬೇಕಿದೆ. ಕಂಕನಾಡಿ ಕಡೆಯಿಂದ ಬರುವ ವಾಹನಗಳು ಕೂಡ ಕೆಳರಸ್ತೆಯನ್ನೇ ಬಳಸಿಕೊಳ್ಳಬೇಕಿದೆ.

ಕೆಲಸ ಮಾಡುವವರು ಮೂವರು ಮಾತ್ರ!
ಪ್ರತಿಷ್ಠಿತ ಪಂಪ್‌ವೆಲ್‌ ಫ್ಲೈ ಓವರ್‌ ಕಾಮಗಾರಿ ಅತ್ಯಂತ ಕ್ಷಿಪ್ರಗತಿಯಲ್ಲಿ ನಡೆಯ ಬೇಕಿತ್ತು. ಹೆದ್ದಾರಿ ಕೆಲಸ ಆಗಿ ಫ್ಲೈಓವರ್‌ಗಾಗಿ ಇಷ್ಟು ವರ್ಷ ತಗಲುತ್ತದೆ ಎಂದರೆ ಅಚ್ಚರಿಯೇ. ಬಹುತೇಕ ಸಂದರ್ಭದಲ್ಲಿ ಒಂದಿಬ್ಬರು ಮಾತ್ರ ಇದರ ಕಾಮಗಾರಿ ನಡೆಸುತ್ತಿರುತ್ತಾರೆ. ಹೀಗಾದರೆ, ಈ ಕಾಮಗಾರಿ ಪೂರ್ಣಗೊಳ್ಳುವುದು ಯಾವಾಗ ಎಂಬ ಪ್ರಶ್ನೆ ಕಾಡುತ್ತದೆ. ಮನೆ ಕಟ್ಟುವ ಕೆಲಸಕ್ಕೂ ಹತ್ತಾರು ಜನ ಬೇಕಾಗುತ್ತಾರೆ. ಸಮರೋಪಾದಿಯಲ್ಲಿ ನಡೆಯಬೇಕಾದ ಈ ಕಾಮಗಾರಿಯನ್ನು ಒಂದಿಬ್ಬರು ಮಾಡಿ ದರೆ, ಮಾರ್ಚ್‌ ವೇಳೆಗೆ ಮುಗಿಯುವುದು ಸಾಧ್ಯವೇ ಎಂಬ ಪ್ರಶ್ನೆ ಸಾರ್ವಜನಿಕರದ್ದು

ತೊಕೊಟ್ಟಿನದ್ದೂ ಇದೇ ಸ್ಥಿತಿ
ರಾ.ಹೆ.66ರ ತೊಕ್ಕೊಟ್ಟಿನಲ್ಲಿ ನಿರ್ಮಿಸುತ್ತಿರುವ ಫ್ಲೈ ಓವರ್‌ ಕಾಮಗಾರಿಗೂ ಗ್ರಹಣ ಹಿಡಿದಂತಾಗಿದೆ. ಕೆಲವು ವರ್ಷದಿಂದ ಇಲ್ಲಿ ಕಾಮಗಾರಿ ನಡೆಯುತ್ತಿದ್ದರೂ, ಇನ್ನೂ ಮುಗಿಯುವ ಹಂತ ಕಾಣುತ್ತಿಲ್ಲ. ಮಾರ್ಚ್‌ ವೇಳೆಗೆ ಈ ಫ್ಲೈ ಓವರ್‌ ಬಿಟ್ಟು ಕೊಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದರೂ ಕಾಮಗಾರಿ ಪ್ರಗತಿ ಪರಿಗಣಿಸಿದರೆ ಕಷ್ಟ ಎನ್ನುವ ಸ್ಥಿತಿ ಇದೆ. ಇಲ್ಲೂ 600 ಮೀ. ಉದ್ದ, 20 ಮೀ. ಅಗಲದ ಫ್ಲೈ ಓವರ್‌ ನಿರ್ಮಾಣವಾಗಲಿದೆ. ಇಲ್ಲಿ ಗರ್ಡರ್‌ಗಳ ಅಳವಡಿಕೆ ಆಗಿದ್ದರೂ ತೊಕ್ಕೊಟ್ಟು ಓವರ್‌ಬ್ರಿಡ್ಜ್ ನಿಂದ, ನಾಗನ ಕಟ್ಟೆಯವರೆಗಿನ ಸ್ಥಳದಲ್ಲಿ ಕಾಮಗಾರಿಗಳು ಇನ್ನಷ್ಟೇ ನಡೆಯಬೇಕಿದೆ. ಪ್ರಸ್ತುತ ಇಲ್ಲಿ ಸರ್ವಿಸ್‌ ರಸ್ತೆ ಇದ್ದರೂ, ನಿತ್ಯ ಸಂಚಾರ ದಟ್ಟಣೆ ಎದುರಾಗಿದೆ.

ದಿನೇಶ್‌ ಇರಾ

ಟಾಪ್ ನ್ಯೂಸ್

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

badminton

Uber Cup ಬ್ಯಾಡ್ಮಿಂಟನ್‌: ಕೆನಡಾವನ್ನು ಮಣಿಸಿದ ಭಾರತ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.