‘4 ವರ್ಷಗಳಲ್ಲಿ 12 ಕೋ.ರೂ.ಅಭಿವೃದ್ಧಿ ಕಾರ್ಯ’


Team Udayavani, Jul 15, 2017, 2:05 AM IST

Punacha-GP-Sabhe-14-7.jpg

ವಿಟ್ಲ: ಊರಿನ ಅಭಿವೃದ್ಧಿ ದೃಷ್ಟಿಯಲ್ಲಿ ನೀಡಿದ ಪ್ರತಿಯೊಬ್ಬರ ಅಹವಾಲುಗಳನ್ನು ಸ್ವೀಕರಿಸಿ ಪಕ್ಷಾತೀತವಾಗಿ ಅನುದಾನ ಹಂಚಿಕೆ ಮಾಡಲಾಗಿದೆ. ಪುಣಚ ಗ್ರಾಮಕ್ಕೆ ಕಳೆದ ನಾಲ್ಕು ವರ್ಷಗಳಲ್ಲಿ ಸುಮಾರು 12 ಕೋ.ರೂ.ಗಳಿಗಿಂತಲೂ ಅಧಿಕ ಅನುದಾನವನ್ನು ಮೂಲ ಸೌಕರ್ಯಗಳೊಂದಿಗೆ ನಾನಾ ಅಭಿವೃದ್ಧಿ ಕಾರ್ಯಗಳಿಗೆ ಒದಗಿಸಲಾಗಿದೆ ಎಂದು ಪುತ್ತೂರು ಶಾಸಕಿ ಟಿ. ಶಕುಂತಳಾ ಶೆಟ್ಟಿ  ಹೇಳಿದ್ದಾರೆ. ಅವರು ಶುಕ್ರವಾರ ಪುಣಚ ಗ್ರಾ.ಪಂ. ಸಭಾಭವನದಲ್ಲಿ ನಡೆದ ಗ್ರಾಮಸಭೆಯಲ್ಲಿ ಮಾತನಾಡಿದರು.

ಈ ಬಾರಿ ಕುಳ ಮತ್ತು ಪೆರುವಾಯಿ ಗ್ರಾಮಗಳಿಗೆ ಸುವರ್ಣ ಗ್ರಾಮ ಯೋಜನೆಯಡಿಯಲ್ಲಿ ಅಭಿವೃದ್ಧಿ ಕಾರ್ಯ ನಡೆಯಲಿದೆ. ಬದನಾಜೆ-ಕುಂಡಡ್ಕ -ಪರಿಯಾಲ್ತಡ್ಕ ರಸ್ತೆಗೆ ವನ್‌ಟೈಮ್‌ ಫಂಡ್‌ ಅನುದಾನ 2.20 ಕೋ.ರೂ. ಮಂಜೂರಾಗಿದ್ದು ಎರಡೂ ಭಾಗಗಳಿಂದ ಆಗಸ್ಟ್‌ ತಿಂಗಳ ಬಳಿಕ ಕಾಮಗಾರಿ ಆರಂಭಗೊಳ್ಳಲಿದೆ. ಶಾಸಕತ್ವದ ಅವಧಿಯಲ್ಲಿ ನಾಗರಿಕರ ಬಹುತೇಕ ಬೇಡಿಕೆ ಈಡೇರಿಸಿದ್ದೇನೆ ಎಂಬ ಸಂತೃಪ್ತಿಯಿದೆ ಎಂದರು.

ತೆರಿಗೆ ವಂಚಕರಿಗೆ ದಂಡ ವಿಧಿಸಿ
ಶ್ರೀಮಂತರು ತೆರಿಗೆ ವಂಚನೆ ಮಾಡುತ್ತಿದ್ದಾರೆ. ಬಡವರು ತೆರಿಗೆ ಪಾವತಿಸುತ್ತಿದ್ದಾರೆ. ತೆರಿಗೆ ಪಾವತಿಸಲು ತಡವಾದರೆ ಅವರಿಗೆ ದಂಡ ವಿಧಿಸುವ ನಿರ್ಣಯ ಕೈಗೊಳ್ಳಬೇಕು ಎಂದು ಪುಣಚ ಗ್ರಾಮಸ್ಥರು ಆಗ್ರಹಿಸಿದರು.

ಕಸದ ರಾಶಿ
ಪುಣಚ ಗ್ರಾಮದ ಪರಿಯಾಲ್ತಡ್ಕ ಪೇಟೆಯಲ್ಲಿ ಕಸದ ರಾಶಿ ಬಿದ್ದಿದೆ. ಪೇಟೆಯ ಅಂಗಡಿಗಳ ಮಾಲಕರು ಕಸಗಳನ್ನು ರಸ್ತೆ ಬದಿಯಲ್ಲಿ ಎಸೆಯುತ್ತಿದ್ದಾರೆ. ಈ ಬಗ್ಗೆ ಪಂಚಾಯತ್‌ ಗಮನ ಹರಿಸಿ, ಅಂಗಡಿ ಬದಿಗಳಲ್ಲಿ ಬಕೆಟ್‌ ವ್ಯವಸ್ಥೆ ಮಾಡಬೇಕು. ಅವುಗಳನ್ನು ಮೀರಿದವರ ಮೇಲೆ ಕ್ರಮ ಜರಗಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದರು. ಪುಣಚ ಆರೋಗ್ಯ ಕೇಂದ್ರದಲ್ಲಿ ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸಲು ವೈದ್ಯರನ್ನು ನಿಯೋಜಿಸಬೇಕು. ರಕ್ತ ಪರೀಕ್ಷೆ ನಡೆಸಲು ವ್ಯವಸ್ಥೆ ಮಾಡಬೇಕು. ಆಸ್ಪತ್ರೆಯ ಅಭಿವೃದ್ಧಿಗಾಗಿ ಸಮಿತಿ ರಚಿಸಬೇಕು ಎಂದು ನಾಗರಿಕರು ಆಗ್ರಹಿಸಿದರು.

ದೀರ್ಘ‌ ಮಾತಿಗೆ ಆಕ್ಷೇಪ
ಶಾಸಕಿ ಶಕುಂತಳಾ ಟಿ.ಶೆಟ್ಟಿ ಅವರು ಪುಣಚ ಗ್ರಾಮದ ಅಭಿವೃದ್ಧಿಗೆ ನೀಡಿದ ಅನುದಾನದ ಬಗ್ಗೆ ವಿವರಣೆ ನೀಡುತ್ತಿದ್ದಾಗ ಸಭೆಯಿಂದ ಅಸಮಾಧಾನದ ಮಾತು ಕೇಳಿ ಬಂತು. ಆಗ ಶಾಸಕರು ‘ಕ್ಷೇತ್ರದ ಶಾಸಕಿಯಾಗಿ ಗ್ರಾಮಸಭೆಯಲ್ಲಿ ಭಾಗವಹಿಸಿ ಗ್ರಾಮದಿಂದ ಬಂದ ಬೇಡಿಕೆಗಳನ್ನು ಪ್ರಸ್ತಾಪಿಸುತ್ತಾ, ಅನುದಾನ ಹಂಚಿಕೆಯ ಬಗ್ಗೆ ಮಾತನಾಡುತ್ತಿದ್ದೇನೆ ಹೊರತು ಇತರ ಯಾವುದೇ ವಿಚಾರಗಳನ್ನು ಪ್ರಸ್ತಾಪಿಸಿಲ್ಲ’ ಎಂದು ಸಮರ್ಥಿಸಿಕೊಂಡರು.

ಬೆಳೆವಿಮೆ ಮಾಹಿತಿ ನೀಡಿ
ಬೆಳೆವಿಮೆ ಬಗ್ಗೆ ತೋಟಗಾರಿಕಾ ಇಲಾಖೆಯವರು ಯಾವುದೇ ಮಾಹಿತಿ ನೀಡುತ್ತಿಲ್ಲ. ಅವರು ಗ್ರಾಮ ಸಭೆಗೆ ಗೈರು ಹಾಜರಾಗುತ್ತಿದ್ದಾರೆ. ಮಳೆಗಾಲದಲ್ಲಿ ಈ ಭಾಗದಲ್ಲಿ ಹಲವು ತೋಟಗಳು ಕೊಳೆರೋಗಕ್ಕೆ ತುತ್ತಾಗುತ್ತಿವೆ ಎಂದು ನಾಗರಿಕರು ಆರೋಪಿಸಿದರು.

ಪುಣಚ ಗ್ರಾ.ಪಂ. ಅಧ್ಯಕ್ಷೆ ಪ್ರತಿಭಾ ಶ್ರೀಧರ್‌ ಅಧ್ಯಕ್ಷತೆ ವಹಿಸಿದ್ದರು. ವಿವಿಧ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದರು. ಶಿಶು ಅಭಿವೃದ್ಧಿ ಇಲಾಖೆಯ ಸುಧಾ ಜೋಷಿ ಅವರು ನೋಡಲ್‌ ಅಧಿಕಾರಿಯಾಗಿ ಭಾಗವಹಿಸಿದ್ದರು. ಜಿ.ಪಂ.ಸದಸ್ಯೆ ಜಯಶ್ರೀ ಕೋಡಂದೂರು, ತಾ.ಪಂ.ಸದಸ್ಯೆ ಕವಿತಾ ಸುಬ್ಬನಾಯ್ಕ, ಅಭಿವೃದ್ಧಿ ಅಧಿಕಾರಿ ಭಾರತಿ, ಗ್ರಾಮ ಪಂಚಾಯತ್‌ ಸದಸ್ಯರು ಉಪಸ್ಥಿತರಿದ್ದರು.

ಡೆಂಗ್ಯೂ ಪ್ರಕರಣ ಪತ್ತೆ
ಪುಣಚ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ಯೇಧುರಾಜ್‌ ಅವರು ಮಾತನಾಡಿ ಕಳೆದ ಕೆಲವು ತಿಂಗಳುಗಳಲ್ಲಿ ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿವೆ. ಈ ಬಗ್ಗೆ  ಮನೆಮನೆಗೆ ತೆರಳಿ ಅವುಗಳನ್ನು ತಡೆಗಟ್ಟುವ ಬಗ್ಗೆ ಮಾಹಿತಿ ನೀಡಲಾಗಿದೆ. ಸೊಳ್ಳೆ ಉತ್ಪತ್ತಿಯಾಗದಂತೆ ನಾಗರಿಕರು ಎಚ್ಚರ ವಹಿಸಬೇಕು. ಕೇರಳ ರಾಜ್ಯದ ಕಾಸರಗೋಡಿನಿಂದ ನಮ್ಮ ಪರಿಸರಕ್ಕೆ ಎಚ್‌1ಎನ್‌1 ರೋಗ ಹರಡುತ್ತಿದೆ. ಹಂದಿಗಳ ಮೂಲಕ ಮನುಷ್ಯನಿಗೆ ಈ ರೋಗ ಹರಡುತ್ತದೆ. ಇಲಾಖೆ ವತಿಯಿಂದ ಇದನ್ನು ತಡೆಗಟ್ಟುವ ಬಗ್ಗೆ ಕ್ರಮ ಕೈಗೊಳ್ಳಲಾಗಿದೆ. ಗ್ರಾಮಸ್ಥರು ಈ ಬಗ್ಗೆ ಎಚ್ಚರ ವಹಿಸಬೇಕು ಎಂದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

10

Missing: ಚುನಾವಣಾ ಕರ್ತವ್ಯದಲ್ಲಿದ್ದ ಸರಕಾರಿ ನೌಕರ ನಾಪತ್ತೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.