ಪುಣ್ಚಪ್ಪಾಡಿ ಶಾಲಾ ಮಕ್ಕಳಿಗೆ ಪ್ರಕೃತಿ ಪಾಠದ ಸಂಭ್ರಮ


Team Udayavani, Nov 25, 2019, 5:07 AM IST

2411PCR3CPH

ಸವಣೂರು: ಅದು ವಿಸ್ತಾರವಾದ ಗದ್ದೆ. ತೆನೆ ತುಂಬಿ ಹಳದಿ ಬಣ್ಣಕ್ಕೆ ತಿರುಗಿದ ಭತ್ತದ ಪೈರುಗಳು ಕಣ್ಣಿಗೆ ಹಬ್ಬದಂತಿದ್ದವು. ರಮಣೀಯವಾದ ತೋಟಗಳ ಮಧ್ಯೆ ವಿಸ್ತಾರವಾಗಿ ಕಂಗೊಳಿಸುತ್ತಿರುವ ಆ ಗದ್ದೆಯನ್ನು ಉಳಿಸಿಕೊಂಡು ಬಂದದ್ದು, ಕೃಷಿಕ ವಿವೇಕ್‌ ಆಳ್ವ ಪುಣcಪ್ಪಾಡಿ.

ಆ ದಿನ ಗದ್ದೆಯ ತುಂಬೆಲ್ಲ ಸಮವಸ್ತ್ರ ಧರಿಸಿದ ಪುಟ್ಟ ಮಕ್ಕಳ ಓಡಾಟ, ಚಂದದ ಪೈರಿನ ಅಂದಕ್ಕೆ ಮತ್ತೂಂದು ಮೆರುಗು ನೀಡುತ್ತಿತ್ತು. ಅಲ್ಲಿ ಒಂದಷ್ಟು ಔಷಧೀಯ ಗಿಡಗಳು. ಒಂದಷ್ಟು ಅಪೂರ್ವ ಸಸಿಗಳು. ಸುತ್ತಲೂ ಮನಸ್ಸಿಗೆ ಮುದ ನೀಡುವ ಹಸುರು. ಇದು ಪುಣ್ಚಪ್ಪಾಡಿ ಶಾಲಾ ಮಕ್ಕಳ ಪ್ರಕೃತಿ ಪಾಠದ ಸೊಬಗು.

ಪುಣ್ಚಪ್ಪಾಡಿ ಶಾಲೆ ಈ ಬಾರಿ ಇಕೋ ಕ್ಲಬ್‌ ವತಿಯಿಂದ ಕೃಷಿಕರಾದ ವಿವೇಕ್‌ ಆಳ್ವ ಪುಣ್ಚಪ್ಪಾಡಿ ಅವರ ಗದ್ದೆ ನೋಡುವ ಭಾಗ್ಯವನ್ನು ಮಕ್ಕಳಿಗೆ ಒದಗಿಸಿತ್ತು. ಮನೆಯಂಗಳಕ್ಕೆ ಬರು ತ್ತಿದ್ದಂತೆಯೇ ಮಕ್ಕಳನ್ನು ಸ್ವಾಗತಿಸಿದ್ದು ಹಿಂದಿನ ಕಾಲದಲ್ಲಿ ಭತ್ತ ಕುಟ್ಟುತ್ತಿದ್ದ ಒನಕೆ ಮತ್ತು ನೆಲಗುಳಿ (ನೆಲಕ್ಕುರಿ). ಈ ನೆಲ ಗುಳಿಯಲ್ಲಿ ಭತ್ತವನ್ನು ಕುಟ್ಟಿ ಚಾಲನೆ ನೀಡಿದವರು ನಾಟಿ ವೈದ್ಯ ಬಾಲಕೃಷ್ಣ ರೈ ಮುಂಡಾಜೆ.

ಭತ್ತವನ್ನು ಕುಟ್ಟುವ ಸಂಪ್ರದಾಯ, ಅಕ್ಕಿ ಮಾಡುವ ಪರಿಚಯ ನೀಡಿದರು.ಅನಂತರ ಮಕ್ಕಳು ಓಡಿದ್ದು ಗದ್ದೆಯ ಕಡೆಗೆ. ಕೃಷಿಕರಾದ ವಿವೇಕ್‌ ಆಳ್ವ ಅವರು ಮಕ್ಕಳಿಗೆ ಗದ್ದೆ ಹದ ಮಾಡುವುದರಿಂದ ಹಿಡಿದು ಪೈರು ಕಟಾವು ಮಾಡುವ ವರೆಗೆ ಸಂಪೂರ್ಣ ಮಾಹಿತಿ ತಿಳಿಸಿದರು. ಭತ್ತದ ತಳಿಗಳು, ತಾವೇ ಆವಿಷ್ಕರಿಸಿದ ಕೃಷಿ ಉಪಕರಣಗಳು, ಅಡಿಕೆಯಿಂದ ತಯಾರಿಸಿದ ದಂತಚೂರ್ಣ, ಮಣ್ಣಿನಿಂದ ತಯಾರಿಸಿದ ಮೈಕ್ರೋವೇವ್‌ ಓವನ್‌ ಬಗ್ಗೆ ತಿಳಿಸಿದರು.

ಹಿತ್ತಲ ಮದ್ದಿನ ಪರಿಚಯ
ನಾಟಿ ವೈದ್ಯ ಬಾಲಕೃಷ್ಣ ರೈ ಮುಂಡಾಜೆ ಅವರು ಔಷಧಿ ಗಿಡಗಳ ಬಗ್ಗೆ ವಿಸ್ತƒತ ಪರಿಚಯ ನೀಡಿದರು. ನಮ್ಮ ಹಿತ್ತಲಲ್ಲೇ ದೊರಕುವ ಆಡುಸೋಗೆ, ನೆಕ್ಕಿ ಸೊಪ್ಪು, ರಾಮಫ‌ಲ, ನಾಚಿಕೆಮುಳ್ಳು, ಕೇಪುಳು, ಕಹಿಬೇವು, ಕರಿಬೇವು, ತುಳಸಿ, ಒಂದೆಲಗ, ಬಾಳೆ, ಪಳ್ಳಿ ಸೊಪ್ಪು ಹೀಗೆ ಹಲವು ಸಸ್ಯಗಳನ್ನು ಪರಿಚಯಿಸಿ, ಅವುಗಳ ಔಷಧೀಯ ಗುಣಗಳ ಮಾಹಿತಿ ನೀಡಿದರು. ಪಳ್ಳಿ ಸೊಪ್ಪು ಮೈಯಲ್ಲಿ ಬೀಳುವುದಕ್ಕೆ ಹಚ್ಚಲು ದಿವೌÂಷಧ ಎಂದು ತಿಳಿದ ಮಕ್ಕಳು ಬೆರಗಾದರು.

ಆಹಾರ ವೈವಿಧ್ಯ
ಹಿರಿಯರಾದ ಅಂಬುಜಾಕ್ಷಿ ಆಳ್ವ ಅವರು ಆಹಾರದಿಂದ ಮನುಷ್ಯನ ಮೇಲಾಗುವ ಪರಿಣಾಮಗಳ ಮಾಹಿತಿ ನೀಡಿದರು. ಮನೆಯಲ್ಲಿ ಕುಟ್ಟಿ ಮಾಡಿದ ಅವಲಕ್ಕಿಯಿಂದ 10 ಬಗೆಯ ತಿನಿಸುಗಳನ್ನು ತಯಾರಿಸಿ ತೋರಿಸಿದರು. ಮಕ್ಕಳು ಅವುಗಳನ್ನು ಸವಿದು ಖುಷಿಪಟ್ಟರು. ಆರೋಗ್ಯಕರ ಎಳ್ಳು ಜ್ಯೂಸ್‌ ಕುಡಿದರು.

ಉಪನ್ಯಾಸಕಿ ಸ್ಮಿತಾ ವಿವೇಕ್‌, ಪುಣcಪ್ಪಾಡಿ ಶಾಲಾ ಮುಖ್ಯಗುರು ರಶ್ಮಿತಾ ನರಿಮೊಗರು, ಶಿಕ್ಷಕರಾದ ಶೋಭಾ ಕೆ., ಫ್ಲಾವಿಯಾ, ಅತಿಥಿ ಶಿಕ್ಷಕ ಯತೀಶ್‌ ಕುಮಾರ್‌, ಗೌರವ ಶಿಕ್ಷಕಿ ಯಮುನಾ ಬಿ., ಪೋಷಕರಾದ ಕಾವೇರಿ ಅಜಿಲೋಡಿ ಕಾರ್ಯಕ್ರಮ ನಿರ್ವಹಿಸಿದರು.

ಅಚ್ಚಳಿಯದ ನೆನಪು
ಮಕ್ಕಳು ನಮ್ಮ ಮನೆಗೆ ಬಂದಿದ್ದು ಬಹಳ ಖುಷಿಯಾಯಿತು. ಮಕ್ಕಳಿಗೆ ಈ ರೀತಿ ಪ್ರಕೃತಿಯಲ್ಲಿ ಅನುಭವದ ಪಾಠ ಸಿಕ್ಕಿದಾಗ ಮಕ್ಕಳ ಮನಸ್ಸಿನಲ್ಲಿ ಅದು ಅಚ್ಚಳಿಯದೆ ಉಳಿಯುತ್ತದೆ.
– ವಿವೇಕ ಆಳ್ವ, ಪ್ರಗತಿಪರ ಕೃಷಿಕರು, ಪುಣ್ಚಪ್ಪಾಡಿ

ಪ್ರವೀಣ್‌ ಚೆನ್ನಾವರ

ಟಾಪ್ ನ್ಯೂಸ್

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

8-

Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.