ಹತ್ಯೆಗಳ ಹಿಂದಿನ ಶಕ್ತಿಗಳನ್ನು ಶಿಕ್ಷಿಸಿ: ರಮಾನಾಥ ರೈ
Team Udayavani, Jul 28, 2022, 11:44 AM IST
ಮಂಗಳೂರು: ದ.ಕ ಜಿಲ್ಲೆಯಲ್ಲಿ ನಡೆಯುತ್ತಿರುವ ಹತ್ಯೆಗಳ ಹಿಂದಿರುವ ಶಕ್ತಿಗಳನ್ನು ಪತ್ತೆ ಹಚ್ಚಿ ಶಿಕ್ಷಿಸಿದರೆ ಮುಂದೆ ಇಂತಹ ಹತ್ಯೆಗಳನ್ನು ತಡೆಯಬಹುದು ಎಂದು ಮಾಜಿ ಸಚಿವ ರಮಾನಾಥ ರೈ ಹೇಳಿದ್ದಾರೆ.
ಕಾಂಗ್ರೆಸ್ ಭವನದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂದುವರೆದ ವರ್ಗದವರು ಪ್ರಚೋದನಕಾರಿ ಭಾಷಣ ಮಾಡಿ ಅಧಿಕಾರ ಪಡೆಯುತ್ತಿದ್ದಾರೆ. ಹಿಂದುಳಿದ ವರ್ಗದವರು ಬಲಿಯಾಗುತ್ತಿದ್ದಾರೆ. ಜೈಲು ಪಾಲಾಗುತ್ತಿದ್ದಾರೆ. ಜಿಲ್ಲೆಯಲ್ಲಿ ಎರಡು ಸಂಘಟನೆಗಳ ನಡುವಿನ ಮೇಲಾಟ ಘರ್ಷಣೆಯಿಂದ ಹತ್ಯೆಗಳು ನಡೆಯುತ್ತಿವೆ. ಇಂತಹ ಕೃತ್ಯ ನಡೆಸುವವರಿಗೆ ಕಠಿಣ ಶಿಕ್ಷೆಯಾಗಬೇಕು. ದ್ವೇಷಕ್ಕೆ ಪ್ರೀತಿ ಉತ್ತರವಾಗಬೇಕು ಎಂದರು.
ಇದನ್ನೂ ಓದಿ: ಮುಂದುವರಿದ ರಾಜೀನಾಮೆ ಪರ್ವ: ರಾಜೀನಾಮೆಗೆ ಸಕಾಲವಲ್ಲ ಎಂದ ಗುನ್ಹಾಳಕರ
ಪ್ರವೀಣ್ ಕುಟುಂಬಕ್ಕೆ ಗರಿಷ್ಠ ಪರಿಹಾರ ನೀಡಬೇಕು. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸರಕಾರ ವಿಫಲವಾಗಿದೆ. ಟಾರ್ಗೆಟ್ ಹತ್ಯೆಗಳು ಎಲ್ಲರಿಗೂ ಅಪಾಯಕಾರಿ. ಇದು ಕೊನೆಯಾಗಲಿ ಎಂದು ಹೇಳಿದರು.