ಪುಂಜಾಲಕಟ್ಟೆ ಪ್ರಾಥಮಿಕ ಆರೋಗ್ಯ ಕೇಂದ್ರ ಮೇಲ್ದರ್ಜೆಗೆ


Team Udayavani, Apr 2, 2021, 11:39 AM IST

ಪುಂಜಾಲಕಟ್ಟೆ ಪ್ರಾಥಮಿಕ ಆರೋಗ್ಯ ಕೇಂದ್ರ ಮೇಲ್ದರ್ಜೆಗೆ

ಪುಂಜಾಲಕಟ್ಟೆ: ಬಹು ಕಾಲದ ಬೇಡಿಕೆಯಾಗಿರುವ ಪುಂಜಾಲಕಟ್ಟೆ ಪ್ರಾ. ಆರೋಗ್ಯ ಕೇಂದ್ರ ಮೇಲ್ದರ್ಜೆಗೇರುವ ಕಾಲ ಕೂಡಿ ಬಂದಿದೆ. ರಾಜ್ಯ ಸರಕಾರ ಘೋಷಿಸಿದ 250 ಪ್ರಾ.ಆ.ಕೇಂದ್ರಗಳ ಉನ್ನತೀಕರಣದಲ್ಲಿ ಇದೂ ಒಂದಾಗಿದೆ. ಪುಂಜಾಲಕಟ್ಟೆ ಪ್ರಾ.ಆ. ಕೇಂದ್ರವನ್ನು 6 ಕೋ.ರೂ. ವೆಚ್ಚದಲ್ಲಿ ಜಾಗತಿಕ ಮಟ್ಟದ ಚಿಕಿತ್ಸಾ ಕೇಂದ್ರವಾಗಿಸುವ ಕಾರ್ಯವನ್ನು ಶೀಘ್ರ ಕೈಗೆತ್ತಿಕೊಳ್ಳುವುದಾಗಿ ರಾಜ್ಯ ಆರೋಗ್ಯ ಸಚಿವ ಡಾ| ಸುಧಾಕರ್‌ ಘೋಷಿಸಿದ್ದು, ಸಾರ್ವಜನಿಕರು ಸಂತಸ ವ್ಯಕ್ತಪಡಿಸಿದ್ದಾರೆ.

ಬಹುಕಾಲದ ಬೇಡಿಕೆ :

ಗ್ರಾಮೀಣ ಪ್ರದೇಶಗಳನ್ನೊಳಗೊಂಡ ಪುಂಜಾ ಲಕಟ್ಟೆಯ ಪ್ರಾಥಮಿಕ ಆರೋಗ್ಯ ಕೇಂದ್ರ ಹಲವು ಕೊರತೆಗಳ ನಡುವೆಯೂ ಜನರಿಗೆ ಉತ್ತಮ ಆರೋಗ್ಯ ಸೇವೆ ನೀಡುತ್ತಿದೆ. ಬಂಟ್ವಾಳ ತಾಲೂಕಿನ ಪಿಲಾತಬೆಟ್ಟು, ಇರ್ವತ್ತೂರು, ಮೂಡುಪಡುಕೋಡಿ, ಬಡಗಕಜೆಕಾರು, ತೆಂಕಕಜೆಕಾರು, ಕಾವಳಮೂಡೂರು, ಕಾವಳಪಡೂರು, ಕಾಡಬೆಟ್ಟು ಗ್ರಾಮಗಳು ಹಾಗೂ  ಬೆಳ್ತಂಗಡಿ ತಾಲೂಕಿನ ಮಾಲಾಡಿ, ಕುಕ್ಕಳ ಗ್ರಾಮಸ್ಥರು ಅವಲಂಬಿಸಿರುವ ಸರಕಾರಿ ಆಸ್ಪತ್ರೆ ಇದಾಗಿದೆ. ದಿನವೊಂದಕ್ಕೆ ಸುಮಾರು 150ರಿಂದ 200 ರೋಗಿಗಳು ಇಲ್ಲಿಗೆ ಚಿಕಿತ್ಸೆಗೆ ಬರುತ್ತಾರೆ. ಕಾಯಂ ಎಂಬಿಬಿಎಸ್‌ ವೈದ್ಯರ ಹಾಗೂ ಸ್ಟಾಫ್‌ ನರ್ಸ್‌ ಕೊರತೆಯಿಂದಾಗಿ ಹೆಚ್ಚಿನ ಚಿಕಿತ್ಸೆ ನೀಡಲು ಸಮಸ್ಯೆಯಾಗಿತ್ತು.

ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆ ಗೇರಿಸುವುದು, ಪೂರ್ಣಾವಧಿ ವೈದ್ಯರ ನೇಮಕ ಮೊದಲಾದ ಬೇಡಿಕೆಗಳ ಬಗ್ಗೆ  ಸಾರ್ವಜನಿಕರು ಹಾಗೂ ಇತರ ಸಂಘ ಟನೆಗಳ ವತಿಯಿಂದ ಈ ಹಿಂದೆ ಪ್ರತಿ ಭಟನೆಗಳು ನಡೆದಿದ್ದವು. ಆದರೂ ವ್ಯವಸ್ಥೆ ಯಾಗಿರಲಿಲ್ಲ. ಇದಕ್ಕೆ ಕಾನೂನಿನ ತೊಡಕು ಪ್ರಮುಖ ಕಾರಣವಾಗಿತ್ತು. ಸಮುದಾಯ ಆಸ್ಪತ್ರೆಯಾಗಿಸಲು ಅಗತ್ಯ ವಾದ ಐವತ್ತು ಸಾವಿರ ಜನಸಂಖ್ಯೆಗೆ  ವಾಮ ದಪದವಿನಲ್ಲಿ ಅದಾಗಲೇ ಸಮುದಾಯ ಆಸ್ಪತ್ರೆ ಸ್ಥಾಪಿಸಲಾಗಿದೆ.

ಹೀಗಾಗಿ ಜಟಿಲವಾದ ಕಾನೂನು ಸರಳಗೊಳಿಸಿ ಜನತೆಗೆ ಆರೋಗ್ಯ ವ್ಯವಸ್ಥೆ ಕಲ್ಪಿಸಬೇಕೆಂದು ಬಹು ಕಾಲದ ಬೇಡಿಕೆಯಾಗಿತ್ತು.

ಬೆಳ್ತಂಗಡಿ, ಬಂಟ್ವಾಳ ಹಾಗೂ ವಾಮದಪದವಿನಲ್ಲಿ ಸಮುದಾಯ ಆಸ್ಪತ್ರೆಗಳಿವೆ. ಇವುಗಳ ನಡುವೆ ಬಹಳ ಅಂತರವಿದೆ. ಆದ್ದರಿಂದ ಪುಂಜಾಲಕಟ್ಟೆ ಪರಿಸರ ಮಾತ್ರವಲ್ಲ ಅಕ್ಕ ಪಕ್ಕದ ಊರುಗಳಿಂದಲೂ ಜನರು ಈ ಆಸ್ಪತ್ರೆಗೆ ಆಗಮಿಸುತ್ತಾರೆ.

ವೈದ್ಯಾಧಿಕಾರಿ ಇಲ್ಲ :

ಇಲ್ಲಿ 7 ವರ್ಷಗಳಿಂದ ಒಂದು ವೈದ್ಯಾಧಿಕಾರಿ ಹುದ್ದೆ ಇದೆ. ಆದರೆ ಕಾಯಂ ವೈದ್ಯಾಧಿಕಾರಿ ಇಲ್ಲ. ಬಿ.ಸಿ.ರೋಡ್‌ ಗಿರಿಜನ ಸಂಚಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ| ಸತೀಶ್‌ ಎಂ.ಸಿ. ಪ್ರಭಾರ ವೈದ್ಯಾಧಿಕಾರಿಯಾಗಿ ವಾರದಲ್ಲಿ ಮೂರುದಿನ ಕರ್ತವ್ಯ ನಿರ್ವಹಿಸಬೇಕಾಗಿದೆ. ಮತ್ತೋರ್ವ ಆಯುಷ್‌ ವೈದ್ಯ ಡಾ| ಸೋಹನ್‌ ಕುಮಾರ್‌ ಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿಭಾಯಿಸುತ್ತಾರೆ.

ಸ್ಟಾಫ್‌ ನರ್ಸ್‌ ಹುದ್ದೆಯೇ ಇಲ್ಲ :

ಹಿಂದೆ ಆರೋಗ್ಯ ಕೇಂದ್ರದಲ್ಲಿ ದಿನದ ಇಪ್ಪತ್ತನಾಲ್ಕು ಗಂಟೆಯೂ ತೆರೆಯುವ ವ್ಯವಸ್ಥೆ ಇತ್ತು. ಆಗ ಮೂರು ಮಂದಿ ಸ್ಟಾಫ್‌ ನರ್ಸ್‌ ಇದ್ದರು. ಹೆರಿಗೆಯ ಸಂಖ್ಯೆ ಕಡಿಮೆಯಾದ ನಿಟ್ಟಿನಲ್ಲಿ ಈ ವ್ಯವಸ್ಥೆ ರದ್ದುಗೊಂಡಿದೆ. ಜತೆಗೆ ಸ್ಟಾಫ್‌ ನರ್ಸ್‌ ಹುದ್ದೆಯೂ ರದ್ದುಗೊಂಡಿದೆ. ಪ್ರಸ್ತುತ ಓರ್ವ ಸ್ಟಾಫ್‌ ನರ್ಸ್‌ ಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಹಿರಿಯ ಮಹಿಳಾ ಆರೋಗ್ಯ ಸಹಾಯಕಿ ಹುದ್ದೆ ಖಾಲಿ ಇದೆ. ಈ ಕಾರಣದಿಂದ ರಾತ್ರಿ ಒಳರೋಗಿಗಳ ಚಿಕಿತ್ಸೆಗೆ ಅವಕಾಶವಿಲ್ಲ.ಸಂಜೆಯವರೆಗೆ ಚಿಕಿತ್ಸೆ ನೀಡಿ ಅಗತ್ಯವಾದಲ್ಲಿ ಬೆಳ್ತಂಗಡಿ ಅಥವಾ ಬಂಟ್ವಾಳ ತಾಲೂಕು ಆಸ್ಪತ್ರೆಗೆ ಕಳುಹಿಸಲಾಗುತ್ತಿದೆ. ಗ್ರೂಪ್‌ ಡಿ ಸಿಬಂದಿ ಹುದ್ದೆ ಖಾಲಿಯಾದ ಕಾರಣ  ಮರಣೋತ್ತರ ಪರೀಕ್ಷೆಗೆ ಬೆಳ್ತಂಗಡಿ ಅಥವಾ ಬಂಟ್ವಾಳಕ್ಕೆ ಹೋಗಬೇಕಾಗಿದೆ. ಇಲ್ಲಿ ಪ್ರಯೋಗ ಶಾಲಾ ತಜ್ಞ ರಿದ್ದಾರೆ. ಸಾಧಾರಣ ರಕ್ತ ಪರೀಕ್ಷೆಗಳು ನಡೆಯುತ್ತವೆ. ದಾನಿಯೊಬ್ಬರು ಇಸಿಜಿ ಮತ್ತು ನೆಬುಲೈಸೇಷನ್‌ ಯಂತ್ರವನ್ನು ಕೊಡುಗೆಯಾಗಿ ನೀಡಿದ್ದಾರೆ. ಪ್ರಸ್ತುತ 6 ಹಾಸಿಗೆ ಮಾತ್ರವಿದೆ. ಆರೋಗ್ಯ ಕೇಂದ್ರ ಮೂರೂವರೆ ಎಕರೆ ಜಾಗ ಹೊಂದಿದೆ. ಆದರೆ ಸಂಪೂರ್ಣ ಆವರಣ ಗೋಡೆ ಇಲ್ಲ. ಹಳೆಯ ಕಟ್ಟಡವಾದರೂ ಸುಣ್ಣ, ಬಣ್ಣ, ಟೈಲ್ಸ್‌ ಅಳವಡಿಸಲಾಗಿದೆ. ನೂತನ ಕಟ್ಟಡ ಸಹಿತ ನಿರ್ಮಾಣಗೊಳ್ಳಲಿರುವ ಹೈಟೆಕ್‌ ಆಸ್ಪತ್ರೆ ಸಮಗ್ರ ಚಿಕಿತ್ಸಾ ಕೇಂದ್ರ, ವೈದ್ಯರು, ದಾದಿಯರು, ಇತರ ಸಿಬಂದಿಗೆ ವಸತಿ ಸೌಲಭ್ಯ ಒಳಗೊಂಡಿರಲಿದೆ.

ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಮೇಲ್ದರ್ಜೆಗೇರಿಸಬೇಕು. ಇಬ್ಬರು ಪೂರ್ಣ ಪ್ರಮಾಣದ ವೈದ್ಯಾಧಿಕಾರಿಗಳು ಹಾಗೂ ಸಿಬಂದಿಯನ್ನು ನೇಮಕಗೊಳಿಸಬೇಕೆಂದು ಜಿ.ಪಂ.ನಲ್ಲಿ ಐದು ಬಾರಿ ನಿರ್ಣಯ ಕೈಗೊಂಡು ಸರಕಾರಕ್ಕೆ ಮನವಿ ಸಲ್ಲಿಸಲಾಗಿತ್ತು. ಪ್ರಸ್ತುತ ಬಂಟ್ವಾಳ ಶಾಸಕ ರಾಜೇಶ್‌ ನಾೖಕ್‌ ಉಳಿಪ್ಪಾಡಿ ಅವರ ಮುತುವರ್ಜಿಯಿಂದ ಬಹುಕಾಲದ ಬೇಡಿಕೆ ಈಡೇರಿದೆ.  -ಎಂ.ತುಂಗಪ್ಪ ಬಂಗೇರ, ಜಿ.ಪಂ. ಸದಸ್ಯರು.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.