ಶುದ್ಧ ಸಾಹಿತ್ಯ ಎಲ್ಲರಿಗೂ ತಿಳಿಸುವುದು ಇಂದಿನ ಅಗತ್ಯ: ಶತಾವಧಾನಿ ಆರ್‌. ಗಣೇಶ್‌


Team Udayavani, Apr 9, 2022, 4:50 AM IST

ಶುದ್ಧ ಸಾಹಿತ್ಯ ಎಲ್ಲರಿಗೂ ತಿಳಿಸುವುದು ಇಂದಿನ ಅಗತ್ಯ: ಶತಾವಧಾನಿ ಆರ್‌. ಗಣೇಶ್‌

ಮಂಗಳೂರು: ಸಾಹಿತ್ಯ, ದೃಶ್ಯ, ಶ್ರಾವ್ಯ, ಶಿಲ್ಪ ಹೀಗೆ ಪ್ರತಿಯೊಂದು ಕಲೆಯ ಪರಮೋದ್ದೇಶ ರಸ. ರಸಕ್ಕೆ ಮೂಲ ಸಾಮಗ್ರಿ ಭಾವ. ರಸ ಮೈಮರೆವು ಅಲ್ಲ; ಅರಿವು. ಶುದ್ಧ ಸಾಹಿತ್ಯವನ್ನು ಎಲ್ಲರಿಗೂ ತಿಳಿಯುವಂತೆ ಮಾಡುವುದು ಇಂದಿನ ಅಗತ್ಯ ಎಂದು ಶತಾವಧಾನಿ ಡಾ| ಆರ್‌. ಗಣೇಶ್‌ ಅಭಿಪ್ರಾಯಪಟ್ಟರು.

ನಗರದಲ್ಲಿ ಶುಕ್ರವಾರ ನಾಲ್ಕನೇ ಆವೃತ್ತಿಯ ಮಂಗಳೂರು ಲಿಟ್‌ ಫೆಸ್ಟ್‌ ಸಾಹಿತ್ಯೋತ್ಸವವನ್ನು ಉದ್ಘಾಟಿಸಿ ಮೊದಲ ಗೋಷ್ಠಿಯಲ್ಲಿ ಮಾತನಾಡಿದ ಅವರು, ರಸವೊಂದೇ ಕವಿನೀತಿ ಎಂದು ಕುವೆಂಪು ಹೇಳಿದ್ದರು. ಪ್ರಾಚೀನ ಗ್ರಂಥಗಳಾದ ರಾಮಾ ಯಣ, ಮಹಾಭಾರತಗಳು ರಸಾ ಸ್ವಾದದ ಕಲಾ ಸಾಹಿತ್ಯ ಹೊಂದಿವೆ. ಸತ್ಯದ ಸೌಂದರ್ಯವನ್ನು ಪರಿಣಾಮ ಕಾರಿಯಾಗಿ ಕಲೆಯ ಮೂಲಕ ಹೊರತರಬಹುದು ಎಂದರು.

ಆಡಳಿತಾರೂಢರಲ್ಲಿ
ಸಂವೇದನೆಯ ಕೊರತೆ
ಸಾಹಿತ್ಯ ಮತ್ತು ಕಲೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಸರಕಾರದ ಮೊರೆ ಹೋಗುವ ವಿಚಾರದಲ್ಲಿ ಕುರಿತಂತೆ ಪ್ರತಿಕ್ರಿಯಿಸಿದ ಅವರು, ಸರಕಾರ‌ದಲ್ಲಿ ಆಡಳಿತ ನಡೆಸುವವರಲ್ಲಿ ಸಂವೇದನಶೀಲಯ ಕೊರತೆ ಸಮಸ್ಯೆ ತಂದಿದೆ. ಅಕಾಡೆಮಿಗಳು ಇದ್ದರೂ ಅಲ್ಲಿಯೂ ಸಾಹಿತ್ಯ, ಕಲೆಗಳ ಬಗ್ಗೆ ಚಿಂತನೆ ನಡೆಸಿರುವುದು ವಿರಳವಾಗುತ್ತಿದೆ. ನಾನೂ ಸೇರಿದಂತೆ ಏಳು ಮಂದಿ ಅವಧಾನಿಗಳಿದ್ದರೂ ಸಾಹಿತ್ಯ ಸಮ್ಮೇಳನಗಳಲ್ಲಿ ಅಭಿಜಾತ ಕನ್ನಡದ ಬಗ್ಗೆ ಯಾವುದೇ ರೀತಿಯ ಕಾರ್ಯಕ್ರಮ ನಡೆಸಿಲ್ಲ. ಯಾರಾದರೂ ಪ್ರಸ್ತಾವ ಮುಂದಿರಿಸಿದರೆ, ಅದಕ್ಕೆ ಜಾತಿ, ಬಂಡವಾಳಶಾಹಿ ಬಣ್ಣವನ್ನು ಕಟ್ಟುತ್ತಾರೆ. ಇಂತಹ ಸಂಕುಚಿತ ದೃಷ್ಟಿಕೋನಹೊಂದಿದ್ದರೆ ಕಲೆ, ಸಂಸ್ಕೃತಿಗಳ ಉದ್ಧಾರ ಹೇಗೆ ಆಗಲು ಸಾಧ್ಯ ಎಂದು ಪ್ರಶ್ನಿಸಿದ ಅವರು ಸರಕಾರ ಇಲ್ಲವೇ ಅಕಾಡೆಮಿಗಳಿಂದ ಕಲೆ, ಸಂಸ್ಕೃತಿಯ ಉದ್ಧಾರವಾಗುತ್ತದೆ ಎಂಬ ಆಶಯ ಬೇಡ, ಇದರ ಬದಲು ಖಾಸಗಿ ಸಂಸ್ಥೆಗಳ ಮುತುವರ್ಜಿ ಅಥವಾ ಸ್ವಯಂಪ್ರೇರಣೆಯಿಂದ ತೊಡಗಿಸಿಕೊಳ್ಳುವುದೇ ಸೂಕ್ತ ಎಂದು ಅಭಿಪ್ರಾಯ ಪಟ್ಟರು.

ಸಮ್ಮಾನ
ಕುವೆಂಪು ಭಾಷಾ ಪ್ರಾಧಿಕಾರ ಅಧ್ಯಕ್ಷ ಅಜಕ್ಕಳ ಗಿರೀಶ್‌ ಭಟ್‌ ಪ್ರಥಮ ಗೋಷ್ಠಿ ನಡೆಸಿಕೊಟ್ಟರು. ಸಾಹಿತ್ಯ ಕ್ಷೇತ್ರಕ್ಕೆ ಅಸಮಾನ್ಯ ಕೊಡುಗೆಗಾಗಿ ಶತಾವಧಾನಿ ಡಾ| ಆರ್‌. ಗಣೇಶ್‌ ಅವರನ್ನು ಸಮ್ಮಾನಿಸಲಾಯಿತು.

ಭಾರತ್‌ ಫೌಂಡೇಶನ್‌ ಟ್ರಸ್ಟ್‌ ಹಾಗೂ ಲಿಟ್‌ ಫೆಸ್ಟ್‌ ಸಂಯೋಜಕ ಸುನೀಲ್‌ ಕುಲಕರ್ಣಿ ಸ್ವಾಗತಿಸಿದರು. ಮಿಥಿಕ್‌ ಸೊಸೈಟಿಯ ಆಡಳಿತ ಮಂಡಳಿಯ ಸದಸ್ಯ ವಿ. ಪ್ರಸನ್ನ ಉಪಸ್ಥಿತರಿದ್ದರು. ಪ್ರಕಾಶ್‌ ಮಲ್ಪೆ ಅವರು ಡಾ| ಗಣೇಶರನ್ನು ಪರಿಚಯಿಸಿದರು.

ಕವಿಗೆ, ಕೃತಿಗೆ ಅಪಚಾರವೆಸಗದಿರಿ
ಅಭಿಜಾತ ಸಾಹಿತ್ಯದ ಪುನರ್‌ರಚನೆ ಮಾಡುವಾಗ ಆನೇಕರು ಮೂಲ ಕವಿಗೆ, ಕೃತಿಗೆ ಅಪಚಾರವೆಸಗುವ ಪ್ರವೃತ್ತಿಯನ್ನು ಇಂದು ಕಾಣುತ್ತಿದ್ದೇವೆ. ರಾಮಾಯಣದ ಬಗ್ಗೆ ಕೃತಿ ರಚನೆ ಮಾಡುವವರು ರಾಮನನ್ನೇ ಕೆಟ್ಟದಾಗಿ ಚಿತ್ರಿಸಿ ಮೂಲರಾಮಾಯಣಕ್ಕೆ ಧಕ್ಕೆ ತರುತ್ತಿದ್ದಾರೆ. ಮಹಾನ್‌ ಕವಿಗಳ, ವಿದ್ವಾಂಸರ ಬರವಣಿಗೆಯನ್ನು ತಿರುಚುವುದು ಸರಿಯಲ್ಲ ಎಂದವರು ಹೇಳಿದರು.

ಟಾಪ್ ನ್ಯೂಸ್

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.