ಹಲವರ ರಾಜಕೀಯ ಬೆಳವಣಿಗೆಗೆ ಸೋಪಾನವಾದ ಕ್ಷೇತ್ರ


Team Udayavani, Mar 31, 2019, 12:54 PM IST

Untitled-1

ಪುತ್ತೂರು: ರಾಜಕೀಯ ಕ್ಷೇತ್ರದಲ್ಲಿ ಹಲವು ಮಂದಿಯ ಬೆಳವಣಿಗೆಗೆ ತೊಟ್ಟಿಲಾದ ಕ್ಷೇತ್ರ ಪುತ್ತೂರು. ಇಲ್ಲಿಂದ ರಾಜಕೀಯ ಜೀವನ ಆರಂಭಿಸಿ ಹಂತಹಂತವಾಗಿ ಮೇಲೇರಿ ರಾಜ್ಯ, ಕೇಂದ್ರ ಸಚಿವ ಸ್ಥಾನವನ್ನು ಪಡೆದವರು, ರಾಜ್ಯದ ಮುಖ್ಯಮಂತ್ರಿ ಯಾದವರಿದ್ದಾರೆ.

ಜನಸಂಘದ ಕಾಲದಿಂದಲೇ ಪುತ್ತೂರು ಸಂಘ ಪರಿವಾರದ ಗಟ್ಟಿ ನೆಲೆಯಾಗಿ ಗುರುತಿಸಿಕೊಂಡಿದೆ. ಈ ಕಾರಣದಿಂದಲೋ ಏನೋ; 1978ರಲ್ಲಿ ಜನತಾ ಪಾರ್ಟಿಯಿಂದ ಉರಿಮಜಲು ರಾಮ ಭಟ್‌ ಅವರು ಗೆದ್ದ ಬಳಿಕ ಹೆಚ್ಚಿನ ವಿಧಾನಸಭಾ ಚುನಾವಣೆಗಳಲ್ಲಿ ಬಿಜೆಪಿ ಅಭ್ಯರ್ಥಿಗಳೇ ಗೆಲುವು ಸಾಧಿಸಿದ್ದಾರೆ. ಹಾಗೆಂದು ಕಾಂಗ್ರೆಸ್‌ ಬಲಹೀನವಾಗಿದೆ ಎಂದೇನಲ್ಲ; ಪ್ರಬಲ ಸ್ಪರ್ಧೆಯನ್ನೇ ಒಡ್ಡಿದೆ.

ವಿನಯ ಕುಮಾರ್‌ ಸೊರಕೆ ಅವರು ಕಾಂಗ್ರೆಸ್‌ ಪಕ್ಷದಿಂದ 1985 ಮತ್ತು 1989ರಲ್ಲಿ ಶಾಸಕ ರಾಗಿ ಆಯ್ಕೆಯಾದ ಬಳಿಕ 2013ರಲ್ಲಿ ಕಾಂಗ್ರೆಸ್‌ನಿಂದ ಶಕುಂತಳಾ ಟಿ. ಶೆಟ್ಟಿ ಗೆಲುವು ಸಾಧಿಸಿದ್ದಾರೆ. ಉಳಿದ ಎಲ್ಲ ಅವಧಿಗಳಲ್ಲಿ ಬಿಜೆಪಿ ಅಭ್ಯರ್ಥಿಗಳೇ ಗೆಲುವು ಸಾಧಿಸಿದ್ದಾರೆ. ಪುತ್ತೂರಿನಿಂದ ರಾಜಕೀಯ ಅಸ್ತಿತ್ವವನ್ನು ಸ್ಥಾಪಿಸಿಕೊಂಡ ಡಿ.ವಿ. ಸದಾನಂದ ಗೌಡರು ಮುಖ್ಯಮಂತ್ರಿಯಾಗಿ, ಕೇಂದ್ರ ಸಚಿವರಾಗಿದ್ದಾರೆ. 2014ರ ಲೋಕಸಭಾ ಚುನಾವಣೆಯಲ್ಲಿ ಪುತ್ತೂರಿನಲ್ಲಿ ಕಾಂಗ್ರೆಸ್‌ ಶಾಸಕರಿದ್ದರೂ ಬಿಜೆಪಿ ಲೋಕಸಭಾ ಅಭ್ಯರ್ಥಿಗೆ 29,314 ಮತಗಳ ಮುನ್ನಡೆ ಲಭಿಸಿತ್ತು.

ಪುತ್ತೂರು ಕ್ಷೇತ್ರದ ಮುನ್ನಡೆ?
2008ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಮಲ್ಲಿಕಾ ಪ್ರಸಾದ್‌ (46,605 ಮತಗಳು) ಅವರು ಕಾಂಗ್ರೆಸ್‌ನ ಬೊಂಡಾಲ ಜಗನ್ನಾಥ ಶೆಟ್ಟಿ (45,180) ಅವರ ವಿರುದ್ಧ 1,425 ಮತಗಳಿಂದ ಗೆಲುವು ಸಾಧಿಸಿದ್ದರು. ಬಿಜೆಪಿಯಿಂದ ಸೀಟು ಸಿಗದ ಹಿನ್ನೆಲೆಯಲ್ಲಿ ಬಂಡಾಯವಾಗಿ ಸ್ವಾಭಿಮಾನಿ ಪಕ್ಷದಿಂದ  ಸ್ಪರ್ಧಿಸಿದ ಶಕುಂತಳಾ ಟಿ. ಶೆಟ್ಟಿ ಅವರು ಸುಮಾರು 25,000
ಮತಗಳನ್ನು ಪಡೆದಿದ್ದರು.

2009ರಲ್ಲಿ ನಳಿನ್‌ ಕುಮಾರ್‌ ಕಟೀಲು ಪ್ರಥಮ ಬಾರಿಗೆ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದಾಗ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ(70,685)ಯು ಕಾಂಗ್ರೆಸ್‌ ( 52,317) ವಿರುದ್ಧ 18,368 ಮತಗಳಿಂದ ಮುನ್ನಡೆ ಸಾಧಿಸಿತ್ತು. 2013ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನ ಶಕುಂತಳಾ ಟಿ. ಶೆಟ್ಟಿ (66,345 ಮತಗಳು) ಅವರು ಬಿಜೆಪಿಯ ಸಂಜೀವ ಮಠಂದೂರು (62,056) ವಿರುದ್ಧ 4,289 ಮತಗಳಿಂದ ಗೆಲುವು ಸಾಧಿಸಿದ್ದರು.
2014ರ ಲೋಕಸಭಾ ಚುನಾವಣೆಯಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ (87,882)ಯು ಕಾಂಗ್ರೆಸ್‌ (58, 568)ನ ವಿರುದ್ಧ 29,314 ಮತಗಳಿಂದ ಮುನ್ನಡೆ ಸಾಧಿಸಿತ್ತು. 2008ರ ಚುನಾವಣೆಗಿಂತಲೂ 10,946 ಮತಗಳು ಹೆಚ್ಚುವರಿಯಾಗಿ ಪುತ್ತೂರಿನಲ್ಲಿ ಬಿಜೆಪಿಗೆ ಲಭಿಸಿದ್ದವು.

2018ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಸಂಜೀವ ಮಠಂದೂರು (90,073 ಮತಗಳು) ಅವರು ಕಾಂಗ್ರೆಸ್‌ನ ಶಕುಂತಳಾ ಟಿ. ಶೆಟ್ಟಿ (70,596) ವಿರುದ್ಧ 19,477 ಮತಗಳಿಂದ ಗೆಲುವು ಸಾಧಿಸಿದ್ದರು.

ಈಗಿನ ಚಿತ್ರಣ
2019ರ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ ಮತ್ತು ಕಾಂಗ್ರೆಸ್‌ ಪಕ್ಷದ ಪ್ರಚಾರ ಬಿರುಸು ಪಡೆದುಕೊಳ್ಳುತ್ತಿದೆ. ಬಿಜೆಪಿ ಅಭ್ಯರ್ಥಿ ನಳಿನ್‌ ನೆರೆಯ ಸುಳ್ಯ ತಾಲೂಕಿನವರಾಗಿರುವುದರಿಂದ ಮತ್ತು 2 ಬಾರಿ ಆಯ್ಕೆಯಾಗಿರುವುದರಿಂದ ಈ ಭಾಗದ ಜನರ ಜತೆ ನಿಕಟ ಸಂಪರ್ಕ ಹೆಚ್ಚು. ಕಾಂಗ್ರೆಸ್‌ ಅಭ್ಯರ್ಥಿ ಮಿಥುನ್‌ ರೈ ಅವರದು ಕ್ಷೇತ್ರಕ್ಕೆ ಹೊಸ ಮುಖ. ಪಕ್ಷದ ಕಾರ್ಯಕರ್ತರು, ಮುಖಂಡರಿಗೆ ಮಾತ್ರ ಪರಿಚಯ. ಈ ಭಾಗದ ಜನರ ಸಂಪರ್ಕ ಇನ್ನಷ್ಟೇ ಆಗಬೇಕಿದೆ. ಆದರೆ ಯುವ ಅಭ್ಯರ್ಥಿಯಾಗಿರುವುದರಿಂದ ಕಾಂಗ್ರೆಸ್‌ ಕಾರ್ಯಕರ್ತರಲ್ಲಿ ಹುರುಪು ಹೆಚ್ಚಿದೆ.

ಹಾಲಿ ಸಂಸದ ನಳಿನ್‌ ಗ್ರಾಮಾಂತರ ಭಾಗಗಳಿಗೆ ಹೆಚ್ಚಿನ ಕೊಡುಗೆ ನೀಡಿಲ್ಲ ಎಂಬ ಅಸಮಾಧಾನ ಅಲ್ಲಲ್ಲಿ ಇರುವಂತಿದೆ. ಆದರೆ ಮೋದಿ ಹವಾ ಅವರಿಗೆ ಧನಾತ್ಮಕವಾಗುವ ಸಾಧ್ಯತೆ ಇದೆ. ಇತ್ತ ಮಿಥುನ್‌ ರೈ ಅವರನ್ನು ಕಾಂಗ್ರೆಸ್‌ ಕಣಕ್ಕಿಳಿಸಿರುವುದೂ ಇದೇ ಕಾರಣಕ್ಕೆ. ಎದುರಾಳಿ ಅಭ್ಯರ್ಥಿಯ ಬಗೆಗಿರುವ ಋಣಾತ್ಮಕ ಅಂಶಗಳನ್ನು ಮತಗಳನ್ನಾಗಿಸುವ ತಂತ್ರ ಕಾಂಗ್ರೆಸಿನದು ಎಂಬುದು ಜನರ ತರ್ಕ.

 ರಾಜೇಶ್‌ ಪಟ್ಟೆ

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

10

Missing: ಚುನಾವಣಾ ಕರ್ತವ್ಯದಲ್ಲಿದ್ದ ಸರಕಾರಿ ನೌಕರ ನಾಪತ್ತೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.