ಪುತ್ತೂರು ಅರಣ್ಯ ಸಂಚಾರಿದಳದ ಕಾರ್ಯಾಚರಣೆ : ಧರ್ಮಸ್ಥಳ ಬಸ್ ನಿಲ್ದಾಣದಲ್ಲಿ ಜಿಂಕೆ ಚರ್ಮ ವಶ
Team Udayavani, Aug 3, 2021, 5:50 PM IST
ಬೆಳ್ತಂಗಡಿ : ಪುತ್ತೂರು ವಿಶೇಷ ಪೊಲೀಸ್ ಅರಣ್ಯ ಸಂಚಾರಿ ದಳದ ಪಿಎಸ್ಐ ಶ್ರೀಮತಿ ಜಾನಕಿ ನೇತ್ರತ್ವದಲ್ಲಿ ಇಂದು ಮಧ್ಯಾಹ್ನ ಧರ್ಮಸ್ಥಳ ಬಸ್ ನಿಲ್ದಾಣದಲ್ಲಿ ಅಕ್ರಮವಾಗಿ ಜಿಂಕೆ ಚರ್ಮವನ್ನು ಬೆಳಗಾವಿಯಿಂದ ಬಸ್ ಮೂಲಕ ಧರ್ಮಸ್ಥಳಕ್ಕೆ ತಂದು ಮಾರಾಟ ಮಾಡಲು ಯತ್ನಿಸುತ್ತಿದ್ದಾಗ ಖಚಿತ ಮಾಹಿತಿ ಮೇರೆಗೆ ಆರೋಪಿ ಬೆಳಗಾವಿಯ ಹನುಮಂತ(35)ಯನ್ನು ಬಂಧಿಸಿದ್ದಾರೆ.
ಆತನಿಂದ ಒಂದು ಮೊಬೈಲ್ ಫೋನ್, ಜಿಂಕೆ ಚರ್ಮವನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಯನ್ನು ಬೆಳ್ತಂಗಡಿ ನ್ಯಾಯಲಯಕ್ಕೆ ಹಾಜರುಪಡಿಸಿದ್ದು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಕಾರ್ಯಾಚಣೆಯಲ್ಲಿ ಪುತ್ತೂರು ವಿಶೇಷ ಅರಣ್ಯ ಸಂಚಾರಿ ಪೊಲೀಸರಾದ ಪಿಎಸ್ಐ ಶ್ರೀಮತಿ ಜಾನಕಿ ಮತ್ತು ಸಿಬ್ಬಂದಿಗಳಾದ ಸುಂದರ್ ಶೆಟ್ಟಿ, ವಿಜಯ ಸುವರ್ಣ, ಉದಯ್, ಸಂತೋಷ್ ಭಾಗವಹಿಸಿದ್ದರು.
ಇದನ್ನೂ ಓದಿ :ಮಹಾರಾಷ್ಟ್ರ, ಕೇರಳ, ಕರ್ನಾಟಕದಿಂದ ಬರುವವರಿಗೆ ಕೋವಿಡ್ ನೆಗೆಟಿವ್ ವರದಿ ಕಡ್ಡಾಯ : ಗೋವಾ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ