ಪುತ್ತೂರು: ರಬ್ಬರ್‌ ಮಾರಾಟವಾಗದೆ ಬೆಳೆಗಾರರು ಕಂಗಾಲು


Team Udayavani, Apr 21, 2020, 6:17 AM IST

ಪುತ್ತೂರು: ರಬ್ಬರ್‌ ಮಾರಾಟವಾಗದೆ ಬೆಳೆಗಾರರು ಕಂಗಾಲು

ವಿಶೇಷ ವರದಿ-ಪುತ್ತೂರು: “ಕೋವಿಡ್‌ 19′ ಲಾಕ್‌ಡೌನ್‌ ಮಧ್ಯೆ ರಬ್ಬರ್‌ ಬೆಳೆಗೆ ಮಾರುಕಟ್ಟೆಯೇ ಇಲ್ಲದಂತಾಗಿದೆ. ಮನೆಯಲ್ಲಿ ಉಳಿಕೆಯಾದ ರಬ್ಬರ್‌ ಶೀಟ್‌ಗೆ ಧಾರಣೆ, ಮಾರಾಟದ ವ್ಯವಸ್ಥೆ ಇಲ್ಲದೆ ಬೆಳೆಗಾರರು ಕಂಗಾಲಾಗಿದ್ದಾರೆ.

ರಬ್ಬರ್‌ ಅಂತಾರಾಷ್ಟ್ರೀಯ ಮಾರುಕಟ್ಟೆ ಹೊಂದಿದ ಬೆಳೆ. ಹಲವು ದಿನಗಳಿಂದ ರಬ್ಬರ್‌ ಬೆಳೆಗೆ ಯಾವುದೇ ಮಾರುಕಟ್ಟೆ ಇಲ್ಲ. ಖಾಸಗಿಯಾಗಿ ರಬ್ಬರ್‌ ಬೆಳೆಯನ್ನು ಬೆಳೆಯು ತ್ತಿರುವ ರೈತರು ಸಹಕಾರಿ ಸಂಘಗಳನ್ನು ಸ್ಥಾಪಿಸಿಕೊಂಡು ಆ ಮೂಲಕ ತಮ್ಮ ಬೆಳೆಯನ್ನು ಮಾರಾಟ ಮಾಡುತ್ತಿದ್ದಾರೆ. ಈ ಸಹಕಾರಿ ಸಂಘಗಳು ಎಂ.ಆರ್‌.ಎಫ್‌. ಕಂಪೆನಿಗೆ ರಬ್ಬರ್‌ ಪೂರೈಕೆ ಮಡುತ್ತಿವೆ. ಇದರ ಕಂಪೆನಿಗಳು ಗೋವಾ, ಕೇರಳ, ವೈಜಾಗ್‌ ಮತ್ತಿತರ ಪ್ರದೇಶಗಳಲ್ಲಿ ಇರುವುದರಿಂದ ಪ್ರಸ್ತುತ ರಬ್ಬರ್‌ ಶೀಟ್‌ಗಳನ್ನು ಒಯ್ಯಲು ಅವಕಾಶ ಇಲ್ಲದಂತಾಗಿದೆ.

ಕೇರಳಕ್ಕೆ ಇಲ್ಲಿನ ಬಹುತೇಕ ರಬ್ಬರ್‌ ಪೂರೈಕೆಯಾಗುತ್ತಿದ್ದು, ಪ್ರಸ್ತುತ ಕೇರಳದ ಗಡಿಯನ್ನು ಕೋವಿಡ್‌ 19 ಹಿನ್ನೆಲೆಯಲ್ಲಿ ಬಂದ್‌ ಮಾಡಿರುವುದರಿಂದ ರಬ್ಬರ್‌ ಶೀಟ್‌ಗಳನ್ನು ಅಲ್ಲಿಗೆ ಪೂರೈಕೆ ಮಾಡಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ರಬ್ಬರ್‌ ಮಾರುಕಟ್ಟೆಯೇ ಬಿದ್ದು ಹೋಗಿದೆ.

ಪುತ್ತೂರು ತಾಲೂಕಿನ ಸಾವಿರಾರು ರೈತ ಕುಟುಂಬಗಳು ರಬ್ಬರ್‌ ಬೆಳೆಯಿಂದಲೇ ಬದುಕುತ್ತಿವೆ. ಪ್ರಸ್ತುತ ಕಡಬ ತಾಲೂಕಿಗೆ ಸೇರಿದ ಗುಂಡ್ಯ, ಶಿರಾಡಿ, ಕಡಬ, ಸುಳ್ಯ ತಾಲೂಕಿನ ಬೆಳ್ಳಾರೆ ಸಹಿತ ಇಲ್ಲಿನ ಕೆಲವು ಭಾಗಗಳು, ಪುತ್ತೂರು ತಾಲೂಕಿನ ಕೇರಳ ಗಡಿಭಾಗದ ನೆಟ್ಟಣಿಗೆ ಮುಟ್ನೂರು ಭಾಗದಲ್ಲಿ ಅತಿ ಹೆಚ್ಚಿನ ರಬ್ಬರ್‌ ಬೆಳೆಯಲಾಗುತ್ತಿದೆ. ಇವರೆಲ್ಲ ರಬ್ಬರ್‌ ಶೀಟ್‌ಗಳನ್ನು ತಯಾರಿಸಿ ಮನೆಯಲ್ಲಿ ದಾಸ್ತಾನು ಮಾಡಿದ್ದು, ಅವುಗಳು ಹಾಳಾಗುತ್ತಿವೆ.

ಸಂಘವೂ ಅಸಹಾಯಕ
ರಬ್ಬರ್‌ ಬೆಳೆಗಾರರ ಸಹಕಾರಿ ಸಂಘವೂ ರೈತರಿಂದ ರಬ್ಬರ್‌ ಬೆಳೆಯನ್ನು ಕೊಂಡುಕೊಳ್ಳುವ ಸ್ಥಿತಿಯಲ್ಲಿಲ್ಲ. ಕಾರಣ ಮಾರುಕಟ್ಟೆಯೇ ಇಲ್ಲದೆ ರಬ್ಬರ್‌ಗೆ ಬೆಲೆ ನಿರ್ಣಯ ಮಾಡುವುದೇ ಇವರಿಗೆ ದೊಡ್ಡ ಸಮಸ್ಯೆ. ಕನಿಷ್ಠಪಕ್ಷ ಲಾರಿಗಳಲ್ಲಿ ಕೇರಳ, ಗೋವಾ ರಬ್ಬರ್‌ ಕಾರ್ಖಾನೆಗಳಿಗೆ ರಬ್ಬರ್‌ ಒಯ್ಯಲು ಅವಕಾಶ ನೀಡಿದರೆ ಮಾತ್ರ ರೈತರಿಂದ ಸಹಕಾರಿ ಸಂಘಗಳು ರಬ್ಬರ್‌ ಖರೀದಿ ಮಾಡಬಹುದಾಗಿದೆ.

ವಿಶೇಷ ಪ್ಯಾಕೇಜ್‌ ಘೋಷಿಸಲಿ
ಜಿಲ್ಲೆಯಲ್ಲಿ ಸಾವಿರಾರು ಮಂದಿ ರೈತರ ಬದುಕು ನಿರ್ಣಯಿಸುವ ರಬ್ಬರ್‌ ಬೆಳೆಗೆ ಬೆಂಬಲ ಬೆಳೆಯನ್ನು ಕೇರಳ ಮಾದರಿಯಲ್ಲಿ ನೀಡಬೇಕು. ಮೂಲ ಆವಶ್ಯಕತೆಬೇಕಾದ ಆರ್ಥಿಕತೆ ದೊರೆಯುವಂತಾಗಬೇಕು. ರಬ್ಬರ್‌, ಅಡಿಕೆ ಬೆಳೆಯುವ ರೈತವರ್ಗಕ್ಕೆ ಸರಕಾರ ವಿಶೇಷ ಪ್ಯಾಕೇಜ್‌ ನೀಡಬೇಕು.

ಈ ಕುರಿತು ಸಂಸದರು ಮತ್ತು ಮಾಜಿ ಸಚಿವರು, ಹಾಲಿ ಶಾಸಕರ ನಿಯೋಗದೊಂದಿಗೆ ಮುಖ್ಯ ಮಂತ್ರಿಯವರನ್ನು ಭೇಟಿ ಮಾಡಿ ಆಗ್ರಹಿ ಸಲಾಗುವುದು ಎಂದು ಜಿಲ್ಲಾ ಸಹಕಾರಿ ಯೂನಿಯನ್‌ ಅಧ್ಯಕ್ಷ, ಪುತ್ತೂರು ರಬ್ಬರ್‌ ಬೆಳೆಗಾರರ ಸಹಕಾರಿ ಸಂಘದ ಅಧ್ಯಕ್ಷ ಪ್ರಸಾದ್‌ ಕೌಶಲ್‌ ಶೆಟ್ಟಿ ತಿಳಿಸಿದ್ದಾರೆ.

ಪರಿಹಾರಕ್ಕೆ ಕ್ರಮ
ಅಧಿಕ ರಬ್ಬರ್‌ ಬೆಳೆಯುವ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ಸ್ವಲ್ಪಮಟ್ಟಿನ ರಬ್ಬರ್‌ ಖರೀದಿ ನಡೆಯುತ್ತಿದೆ. ಸರಕಾರದ ಜತೆ ಮಾತುಕತೆ ನಡೆಸಿ ರಬ್ಬರ್‌ ಬೆಳೆಗಾರರ ಸಮಸ್ಯೆಗೆ ಪರಿಹಾರ ನೀಡುವ ನಿಟ್ಟಿನಲ್ಲಿ ಪ್ರಯತ್ನ ಪಡಲಾಗುವುದು.
ಸಂಜೀವ ಮಠಂದೂರು,
ಶಾಸಕರು, ಪುತ್ತೂರು

ಟಾಪ್ ನ್ಯೂಸ್

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

8-uv-fusion

UV Fusion: ಅತಿಯಾದ ಒಲವು ಒಳಿತಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.