ಪುತ್ತೂರು ಪೊಲೀಸರಿಗೆ ಸರಕಾರದ ಸೂರು


Team Udayavani, Feb 17, 2019, 5:56 AM IST

17-february-4.jpg

ಪುತ್ತೂರು : ಸಮರ್ಪಕ ವಸತಿ ವ್ಯವಸ್ಥೆ ಇಲ್ಲದೆ ಸಮಸ್ಯೆ ಅನುಭವಿಸುತ್ತಿರುವ ಪುತ್ತೂರಿನ ಪೊಲೀಸರಿಗೆ ಸಿಹಿ ಸುದ್ದಿ ಬಂದಿದೆ. ಪೊಲೀಸರಿಗಾಗಿ ಪುತ್ತೂರಿನಲ್ಲಿ ಒಟ್ಟು 50 ವಸತಿ ವ್ಯವಸ್ಥೆ ಸಿದ್ಧಗೊಳ್ಳುತ್ತಿದ್ದು, ಅಂತಿಮ ಹಂತದ ನಿರ್ಮಾಣ ಕಾಮಗಾರಿ ನಡೆಯುತ್ತಿದೆ. ಉದ್ಘಾಟನೆಯ ಬಳಿಕ ಪೊಲೀಸರಿಗೆ ವಸತಿ ಹಂಚಿಕೆಯಾಗಲಿದೆ. ಪುತ್ತೂರು ನಗರ ಠಾಣೆಯಲ್ಲಿ ಒಟ್ಟು 58, ಸಂಚಾರ ಠಾಣೆಯಲ್ಲಿ 33 ಹಾಗೂ ಗ್ರಾಮಾಂತರ ಠಾಣೆಯಲ್ಲಿ 43 ಪೊಲೀಸರು ಕಾರ್ಯ ನಿರ್ವಹಿಸುತ್ತಿದ್ದಾರೆ. 

ನಗರ ಠಾಣೆಯ ಹಿಂಭಾಗದಲ್ಲಿ ಇರುವ ಪೊಲೀಸ್‌ ಕರ್ರ್ಟರ್ಸ್‌ನಲ್ಲಿ ಹಾಲಿ 25 ವಸತಿ ವ್ಯವಸ್ಥೆ ಮಾತ್ರ ಇದೆ. ಕೆಲ ಪೊಲೀಸ್‌ ಸಿಬಂದಿ ಖಾಸಗಿ ವಸತಿ ವ್ಯವಸ್ಥೆಯಲ್ಲಿದ್ದಾರೆ. 50 ವಸತಿಗೃಹಗಳ ನಿರ್ಮಾಣವಾದಲ್ಲಿ ಪುತ್ತೂರಿನ ಹೆಚ್ಚಿನ ಪೊಲೀಸರಿಗೆ ಅನುಕೂಲವಾಗಲಿದೆ.

ಮೂರು ಕಡೆಗಳಲ್ಲಿ ನಿರ್ಮಾಣ
ಪೊಲೀಸ್‌ ಹೌಸಿಂಗ್‌ ಕಾರ್ಪೋರೇಶನ್‌ ಮೇಲುಸ್ತುವಾರಿಯಲ್ಲಿ ಸುರತ್ಕಲ್‌ ನಿರ್ಮಿತಿ ಕೇಂದ್ರ ವಸತಿ ಕಟ್ಟಡದ ನಿರ್ಮಾಣ ಕಾಮಗಾರಿ ನಡೆಸುತ್ತಿದೆ. ಪುತ್ತೂರು ನಗರ ಠಾಣೆಯ ಪೊಲೀಸರಿಗಾಗಿ ಸಾಮೆತ್ತಡ್ಕದಲ್ಲಿ 12 ವಸತಿಯ ಕಟ್ಟಡ, ಸಂಚಾರ ಠಾಣೆ ಹಾಗೂ ಸಂಪ್ಯ ಗ್ರಾಮಾಂತರ ಠಾಣೆಯ ಪೊಲೀಸ್‌ ಸಿಬಂದಿಗಾಗಿ ಸಂಪ್ಯ ಠಾಣೆಯ ಹಿಂಭಾಗದಲ್ಲಿ ಒಟ್ಟು 36 ವಸತಿಯ ಮೂರು ಕಟ್ಟಡಗಳು ಹಾಗೂ ಬನ್ನೂರಿನಲ್ಲಿ ಪೊಲೀಸ್‌ ಸಬ್‌ಇನ್‌ಸ್ಪೆಕ್ಟರ್‌ಗಳಿಗಾಗಿ 2 ವಸತಿಯ ಕಟ್ಟಡ ನಿರ್ಮಾಣವಾಗುತ್ತಿವೆ.

ಶೀಘ್ರ ಕಾಮಗಾರಿ ಮುಕ್ತಾಯ
ಸಾಮೆತ್ತಡ್ಕದ ಪೊಲೀಸ್‌ ವಸತಿ ಕಟ್ಟಡ ನಿರ್ಮಾಣ ಮುಕ್ತಾಯಗೊಂಡಿದೆ. ಆದರೆ ಹೆಚ್ಚುವರಿ ನಿರ್ಮಾಣ ಕಾಮಗಾರಿಗೆ ಮಂಜೂರಾತಿ ಆಗಿರುವುದರಿಂದ ಆ ಕೆಲಸ ಬಾಕಿ ಇದೆ. ಸಂಪ್ಯ ಗ್ರಾಮಾಂತರ ಠಾಣೆಯ ಬಳಿ ನಿರ್ಮಾಣವಾಗುತ್ತಿರುವ ವಸತಿ ಕಟ್ಟಡ ಕಾಮಗಾರಿ 15 ದಿನಗಳಲ್ಲಿ ಮುಕ್ತಾಯಗೊಳ್ಳಲಿದೆ. ಬನ್ನೂರಿನಲ್ಲಿ ನಿರ್ಮಾಣವಾಗುತ್ತಿರುವ ಪಿಎಸ್‌ಐ ವಸತಿ ಕಟ್ಟಡಕ್ಕೆ ಕಾಂಪೌಂಡ್‌ ನಿರ್ಮಾಣ ಕಾಮಗಾರಿ ನಡೆಯಬೇಕಿದೆ ಎಂದು ಪುತ್ತೂರು ಡಿವೈಎಸ್ಪಿ ದಿನಕರ ಶೆಟ್ಟಿ ತಿಳಿಸಿದ್ದಾರೆ.

15 ಕೋಟಿ ರೂ. ವ್ಯಯ
ಜಿಲ್ಲೆಯ ವಿವಿಧ ಕಡೆಗಳಲ್ಲಿ ಸುಮಾರು 15 ಕೋಟಿ ರೂ. ವೆಚ್ಚದಲ್ಲಿ ಪೊಲೀಸ್‌ ವಸತಿ ನಿರ್ಮಾಣ ಕಾಮಗಾರಿ ನಡೆಯುತ್ತಿದೆ. ಪೊಲೀಸ್‌ ಹೌಸಿಂಗ್‌ ಕಾರ್ಪೋರೇಶನ್‌ನಿಂದ ನಿರ್ಮಿತಿ ಕೇಂದ್ರದ ಮೂಲಕ ಕೆಲಸಗಳು ನಡೆಯುತ್ತಿವೆ. ಕೆಲ ಕಡೆಗಳಲ್ಲಿ ಕಾಮಗಾರಿ ಅಂತಿಮ ಹಂತದಲ್ಲಿದ್ದು, ಅವರು ನಮಗೆ ಹಸ್ತಾಂತರಿಸಿದ ಬಳಿಕ ಉದ್ಘಾಟನೆಯ ದಿನಾಂಕ ನಿಗದಿಪಡಿಸಲಾಗುವುದು.
-ಬಿ.ಎಂ. ಲಕ್ಷ್ಮೀಪ್ರಸಾದ್‌,
ದ.ಕ. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ

ರಾಜೇಶ್‌ ಪಟ್ಟೆ 

ಟಾಪ್ ನ್ಯೂಸ್

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.