ಪುತ್ತೂರು ಆಸ್ಪತ್ರೆ: ಕೈಕೊಡುವ ಜನರೇಟರ್‌!


Team Udayavani, May 30, 2018, 11:31 AM IST

30-may-5.jpg

ಪುತ್ತೂರು: ಮಳೆಗಾಲ ಆರಂಭವಾಗಿದೆ. ಕಾಯಿಲೆಗಳು ಬಾಧಿಸುತ್ತಿವೆ. ರೋಗಿಗಳು ಆಸ್ಪತ್ರೆಗಳಿಗೆ ಧಾವಿಸುತ್ತಿದ್ದಾರೆ. ಆಗಾಗ ವಿದ್ಯುತ್‌ ಕೈಕೊಟ್ಟ ಸಂದರ್ಭದಲ್ಲಿ ಬಳಕೆಯಾಗಬೇಕಾದ ಜನರೇಟರ್‌ ಅವ್ಯವಸ್ಥೆ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ದೊಡ್ಡ ಸಮಸ್ಯೆಯನ್ನು ತಂದೊಡ್ಡಿದೆ.

ಸರಕಾರಿ ಆಸ್ಪತ್ರೆಯಲ್ಲಿ ರಕ್ತನಿಧಿ, ಡಯಾಲಿಸಿಸ್‌, ಎಕ್ಸ್‌ರೇ, ರಕ್ತ, ಮೂತ್ರ, ಕಫ ಪರೀಕ್ಷಾ ವ್ಯವಸ್ಥೆಯಿದೆ. ತುರ್ತು ನಿಗಾ ವಿಭಾಗ, ಶಸ್ತ್ರಚಿಕಿತ್ಸೆ, ಹೆರಿಗೆ ವ್ಯವಸ್ಥೆ ಎಲ್ಲವೂ ಇದೆ. ಉತ್ತಮ ಸೇವೆ ನೀಡುವ ವೈದ್ಯರಿದ್ದಾರೆ. ಆದರೆ ವಿದ್ಯುತ್‌ ವ್ಯವಸ್ಥೆ ಕೈಕೊಟ್ಟಾಗ ಅತಿ ಅಗತ್ಯವಾಗಿ ಇರಲೇ ಬೇಕಾಗಿದ್ದ ಜನರೇಟರ್‌ ವ್ಯವಸ್ಥೆ ಮಾತ್ರ ಇಲ್ಲಿ ಸಮರ್ಪಕವಾಗಿಲ್ಲ. ಪದೇ ಪದೆ ಕೆಡುತ್ತದೆ.

ಹಳೆಯ ಕಾಲದ 50 ಕೆವಿ ಸಾಮರ್ಥ್ಯದ ದೊಡ್ಡ ಜನರೇಟರ್‌ ಇದೆ. ಕೆಟ್ಟು ಹೋಗಿರುವ ಇನ್ನೊಂದು ಸಣ್ಣ ಜನರೇಟರ್‌ ಮೂಲೆ ಸೇರಿದೆ. ದೊಡ್ಡ ಜನರೇಟರ್‌ನ ರಿಪೇರಿಗೆ ಪ್ರತಿ ವರ್ಷ ಬಹಳಷ್ಟು ಹಣ ವ್ಯಯಿಸಬೇಕಾಗಿ ಬರುತ್ತಿದೆ. ಈ ಜನರೇಟರ್‌ ಕೈಕೊಟ್ಟಾಗೆಲ್ಲ ಬಾಡಿಗೆ ಜನರೇಟರ್‌ ತಂದು ವಿದ್ಯುತ್‌ ಪೂರೈಸುವುದು ಇಲ್ಲಿ ಅಭ್ಯಾಸವಾಗಿದೆ.

ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿ ಹೊಸ ಜನರೇಟರ್‌ ವ್ಯವಸ್ಥೆಗಾಗಿ ಜಿಲ್ಲಾ ಆರೋಗ್ಯಾಧಿಕಾರಿ ಸಹಿತ ಸಂಬಂಧಪಟ್ಟವರಿಗೆ ಮನವಿ ಮಾಡುತ್ತಿದ್ದರೂ ಸ್ಪಂದನೆ ಸಿಕ್ಕಿಲ್ಲ. ವಿದ್ಯುತ್‌ ಸಮಸ್ಯೆಯ ಪರಿಹಾರಕ್ಕಾಗಿ ಗುತ್ತಿಗೆ ಆಧಾರದಲ್ಲಿ ಎಲೆಕ್ಟ್ರಿಷಿನ್‌ ಒಬ್ಬರನ್ನು ವರ್ಷಾವಧಿಗೆ ನೇಮಕ ಮಾಡಿಕೊಂಡಿದ್ದರೂ ಸಮಸ್ಯೆಗೆ ಪರಿಹಾರ ದೊರೆತಿಲ್ಲ. ಹಳೆಯ ಜನರೇಟರ್‌ನ ಬಿಡಿಭಾಗಗಳು ಲಭ್ಯವಿರದ ಕಾರಣ ದುರಸ್ತಿ ದೊಡ್ಡ ತಲೆನೋವಾಗಿದೆ ಎನ್ನುವುದು ಆಸ್ಪತ್ರೆಯವರ ಅಳಲು.

ರವಿವಾರ ರಾತ್ರಿ ಗಾಳಿ ಮಳೆಯಿಂದಾಗಿ ಕೆಲವೆಡೆ ಮರಗಳು ಉರುಳಿ ವಿದ್ಯುತ್‌ ಸ್ಥಗಿತಗೊಂಡಿತ್ತು. ಆಸ್ಪತ್ರೆಯ ಜನರೇಟರ್‌ ಕೆಟ್ಟು ಕುಳಿತಿತ್ತು. ಸೋಮವಾರ ಮಧ್ಯಾಹ್ನದ ತನಕ ವಿದ್ಯುತ್ತಿಲ್ಲದೆ ರೋಗಿಗಳು, ಸಂಬಂಧಿಕರು, ಆಸ್ಪತ್ರೆಯ ವೈದ್ಯರು ಹಾಗೂ ಸಿಬಂದಿ ಪರದಾಡಿದರು. ಡಯಾಲಿಸಿಸ್‌ ವಿಭಾಗದಲ್ಲಿ ಇನ್ವರ್ಟರ್‌ ಇದ್ದರೂ ಚಾರ್ಜ್‌ ಇಲ್ಲದೆ ಸೋಮವಾರ ರೋಗಿಗಳು ತೊಂದರೆ ಅನುಭವಿಸಿದರು. 

ತಾತ್ಕಾಲಿಕ ವ್ಯವಸ್ಥೆ 
ಜನರೇಟರ್‌ನ ದುರಸ್ತಿಗೆ ವ್ಯವಸ್ಥೆ ಮಾಡಿದ್ದೇವೆ. ಹೊಸ ಜನರೇಟರ್‌ ಒದಗಿಸುವಂತೆ ಇಲಾಖೆಯ ರಾಜ್ಯ ನಿರ್ದೇಶನಾಲಯಕ್ಕೆ ಮನವಿ ಮಾಡಿದ್ದೇವೆ. ಹಿರಿಯ ಅಧಿಕಾರಿಗಳಿಗೂ ತಿಳಿಸಿದ್ದೇವೆ. ಸದ್ಯಕ್ಕೆ ತಾತ್ಕಾಲಿಕ ಜನರೇಟರ್‌ ವ್ಯವಸ್ಥೆಯನ್ನು ಮಾಡಿಕೊಂಡಿದ್ದೇವೆ.
– ಡಾ| ವೀಣಾ,
ಆಡಳಿತ ವೈದ್ಯಾಧಿಕಾರಿ

ಟಾಪ್ ನ್ಯೂಸ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.