ಪುತ್ತೂರು ಪಶು ಆಸ್ಪತ್ರೆಗೆ ಹೊಸ ಕಟ್ಟಡದ ಭಾಗ್ಯ


Team Udayavani, Nov 6, 2017, 4:57 PM IST

6Nov–17.jpg

ನಗರ: ಬ್ರಿಟಿಷ್‌ ಕಾಲದ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿದ್ದ ಪಶು ಆಸ್ಪತ್ರೆಗೆ 26.83 ಲ.ರೂ. ಅನುದಾನದಡಿ ಹೊಸ ಕಟ್ಟಡದ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ.

ಕೊನೆಗೂ ಹೊಸ ಕಟ್ಟಡಕ್ಕೆ ಅನುದಾನ ಮಂಜೂರುಗೊಂಡಿದ್ದು, ಶೀಘ್ರದಲ್ಲೇ ಪಶು ಆಸ್ಪತ್ರೆ ತನ್ನ ಹಳೆಯ ಸ್ವರೂಪದ ಕಟ್ಟಡದ ಬದಲು ಹೊಸ ವಿನ್ಯಾಸದ ಕಟ್ಟಡದಲ್ಲಿ ಆರಂಭಗೊಳ್ಳಲಿದೆ.

ಪಶು ಆಸ್ಪತ್ರೆಯ ವಿವರ
ಪುತ್ತೂರು ತಾಲೂಕು ಪಶು ಆಸ್ಪತ್ರೆಯ ವ್ಯಾಪ್ತಿಯಲ್ಲಿ ಒಟ್ಟು 17 ಕೇಂದ್ರಗಳಿವೆ. ಕಡಬ, ಪುತ್ತೂರು, ಉಪ್ಪಿನಂಗಡಿ, ಪಾಣಾಜೆಯಲ್ಲಿ ಪಶು ಆಸ್ಪತ್ರೆ, ಕೌಕ್ರಾಡಿ, ನರಿಮೊಗರು, ಕೊಳ್ತಿಗೆಯಲ್ಲಿ ಪಶು ಚಿಕಿತ್ಸಾಲಯಗಳು, ಶಿರಾಡಿ, ನೆಲ್ಯಾಡಿ, ಕೋಡಿಂಬಾಡಿ, ಕುಂತೂರುಪದವು, ಕಲ್ಲುಗುಡ್ಡೆ, ಬೆಳಂದೂರು, ಬಲ್ನಾಡು, ಈಶ್ವರಮಂಗಲ, ಕೌಡಿಚ್ಚಾರು, ಕೆದಂಬಾಡಿಯಲ್ಲಿ ಪ್ರಾಥಮಿಕ ಪಶು ಪಾಲನ ಕೇಂದ್ರಗಳಿವೆ.

ನಬಾರ್ಡ್‌ನಲ್ಲಿ ಅನುದಾನ
ನಬಾರ್ಡ್‌ ಯೋಜನೆಯ ಗ್ರಾಮೀಣ ಮೂಲ ಸೌಕರ್ಯ ನಿಧಿಯಡಿ 26.83 ಲಕ್ಷ ರೂ. ಅನುದಾನ ಮಂಜೂರುಗೊಂಡಿದ್ದು, ನೂತನ ಕಟ್ಟಡ ನಿರ್ಮಾಣಕ್ಕೆ ಕೆಲವು ತಿಂಗಳ ಹಿಂದೆ ಶಿಲಾನ್ಯಾಸ ನಡೆದು ಕಾಮಗಾರಿಗೆ ಚಾಲನೆ ದೊರೆತಿದೆ.

ಕಾಮಗಾರಿಯ ಸಂಪೂರ್ಣ ಹೊಣೆಯನ್ನು ಸುರತ್ಕಲ್‌ನಲ್ಲಿ ಇರುವ ನಿರ್ಮಿತಿ ಕೇಂದ್ರ ಹೊತ್ತಿದೆ. ಇದೀಗ ಆಧುನಿಕ ಶೈಲಿಯಲ್ಲಿ ಕಟ್ಟಡ ಕಾಮಗಾರಿ ಸಾಗುತ್ತಿದ್ದು, ಗೋಡೆ ಕೆಲಸ ಪೂರ್ಣಗೊಂಡು, ಲಿಂಟಲ್‌ ತನಕ ಕೆಲಸ ಆಗಿದೆ.

ಆಸ್ಪತ್ರೆಯಲ್ಲಿನ ಸೌಲಭ್ಯಗಳು
ಪಶು ವೈದ್ಯಕೀಯ ಆಸ್ಪತ್ರೆಯಲ್ಲಿ ದನ, ನಾಯಿ, ಆಡು, ಕೋಳಿ, ಹಂದಿ ಇನ್ನಿತರ ಸಾಕು ಪ್ರಾಣಿಗಳಿಗೆ ಉಚಿತ ಚಿಕಿತ್ಸಾ ಸೌಲಭ್ಯಗಳನ್ನು ನೀಡುವುದರ ಜತೆಗೆ ಜಂತು ನಾಶಕ ಮಾತ್ರೆ, ಇನ್ನಿತರ ಆ್ಯಂಟಿ ಬಯೋಟಿಕ್‌ ಔಷಧಗಳನ್ನು ಉಚಿತವಾಗಿ ನೀಡಲಾಗುತ್ತಿದೆ.

ಉಳಿದೆಡೆ ಹೊಸ ಕಟ್ಟಡ
ತಾಲೂಕಿನಲ್ಲಿ ಪುತ್ತೂರು ಸಹಿತ ಉಪ್ಪಿನಂಗಡಿ, ಕೋಡಿಂಬಾಡಿಯಲ್ಲಿ ಪಶು ವೈದ್ಯಕೀಯ ಆಸ್ಪತ್ರೆಗಳಿದ್ದು, ಇವೆಲ್ಲವೂ ಹೊಸ ಸ್ವರೂಪವನ್ನು ಪಡೆಯಲಿವೆ. ಉಪ್ಪಿನಂಗಡಿ ಹಾಗೂ ಕೋಡಿಂಬಾಡಿಯಲ್ಲಿ ಕಟ್ಟಡದ ತಳ ಹಂತ ಕಾಮಗಾರಿ ಮುಗಿದಿದೆ.

ಪುತ್ತೂರಿನಲ್ಲಿ ಇತ್ತೀಚೆಗಷ್ಟೇ ಪುನರ್‌ ನಿರ್ಮಾಣ ಕಾರ್ಯ ಆರಂಭಗೊಂಡಿದೆ. ಅಂತೂ ತ್ವರಿತ, ಉತ್ತಮ ಸೇವೆ ನೀಡುವ
ನಿಟ್ಟಿನಲ್ಲಿ ಪಶು ವೈದ್ಯಕೀಯ ಆಸ್ಪತ್ರೆಗಳು ಶೀಘ್ರ ತಲೆ ಎತ್ತಲಿವೆ.

ಹಳೆ ಕಟ್ಟಡ
ಬ್ರಿಟಿಷರ ಕಾಲದ ಈ ಕಟ್ಟಡ ವಿಶೇಷ ವಿನ್ಯಾಸದೊಂದಿಗೆ ನಿರ್ಮಾಣಗೊಂಡಿದ್ದು, ಅತ್ಯಂತ ಹಳೆಯ ಕಟ್ಟಡಗಳಲ್ಲಿ ಒಂದು
ಎನ್ನಲಾಗಿದೆ. ಹೊಸ ಕಟ್ಟಡದಲ್ಲಿ ಸುಸಜ್ಜಿತ ಚಿಕಿತ್ಸಾ ವಿಭಾಗ, ಪ್ರಯೋಗಾಲಯ, ಇನ್ನಿತರ ಸೌಲಭ್ಯಗಳು ಒಳಗೊಳ್ಳಲಿವೆ.

ಹುದ್ದೆ ಖಾಲಿ
ಈಗಾಗಲೇ ಈ ಆಸ್ಪತ್ರೆಯಲ್ಲಿ 12 ಹುದ್ದೆಗಳು ಅನಿವಾರ್ಯವಿದ್ದರೂ ಸಹಾಯಕ ನಿರ್ದೇಶಕರು, ಪಶು ವೈದ್ಯಾಧಿಕಾರಿ ಸಹಿತ ಐದು ಹುದ್ದೆಗಳು ಇವೆ. ಉಳಿದಂತೆ ಏಳು ಹುದ್ದೆಗಳು ಖಾಲಿ ಇವೆ.

ಕಾಮಗಾರಿ ಪ್ರಗತಿಯಲ್ಲಿದೆ
26.83 ಲ.ರೂ ಅನುದಾನ ಬಿಡುಗಡೆಗೊಂಡಿದ್ದು, ಹಳೆ ಕಟ್ಟಡ ಬಳಿಯಲ್ಲಿ ಹೊಸ ಕಟ್ಟಡದ ಕಾಮಗಾರಿ ಪ್ರಗತಿಯಲ್ಲಿದೆ.
ಡಾ| ಸುರೇಶ್‌ ಭಟ್‌ ಪಿ., 
  ಸಹಾಯಕ ನಿರ್ದೇಶಕರು, ಪಶುಸಂಗೋಪನ ಇಲಾಖೆ

ಟಾಪ್ ನ್ಯೂಸ್

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

CAR-D

Sullia: ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಕಂಟೈನರ್‌ ಢಿಕ್ಕಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.