ಅಪರೂಪದ ಕ್ಷಣಕ್ಕೆ ಸಾಕ್ಷಿಯಾದ ಪುತ್ತೂರು: ಮಹಾಲಿಂಗೇಶ್ವರ ಮತ್ತು ವೆಂಕಟರಮಣ ದೇವರ ಮುಖಾಮುಖಿ.!
Team Udayavani, Apr 14, 2021, 2:42 PM IST
ಪುತ್ತೂರು: ಈ ಬಾರಿಯ ಜಾತ್ರೆ ಅಪರೂಪದ ಸನ್ನಿವೇಶಕ್ಕೆ ಸಾಕ್ಷಿಯಾಯಿತು. ಪೇಟೆ ಸವಾರಿ ಸಂದರ್ಭದಲ್ಲಿ ಮಹಾಲಿಂಗೇಶ್ವರ ದೇವರು ಮತ್ತು ವೆಂಕಟರಮಣ ದೇವರು ಮುಖಾಮುಖಿಯಾದ ವಿಶೇಷ ಸಂದರ್ಭ ನಡೆಯಿತು.
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ವಾರ್ಷಿಕ ಜಾತ್ರೆ ಹಿನ್ನೆಲೆಯಲ್ಲಿ ಎ.13 ರಂದು ರಾತ್ರಿ ಉತ್ಸವದ ಬಳಿಕ ಶ್ರೀ ದೇವರ ಪೇಟೆ ಸವಾರಿಯು ಕೋರ್ಟ್ ರಸ್ತೆ, ಸೈನಿಕ ಭವನ ರಸ್ತೆ, ಬಪ್ಪಳಿಗೆ, ಉರ್ಲಾಂಡಿ, ಬೊಳುವಾರು ಬೈಲ್ ಸವಾರಿಯೊಂದಿಗೆ ದೇವಾಲಯಕ್ಕೆ ಹಿಂದಿರುಗಿತು.
ಇದನ್ನೂ ಓದಿ:ಮತ್ತೆ ಬಂತು ಸಂಭ್ರಮ ಪರ್ವ
ಮಹಾಲಿಂಗೇಶ್ವರ ದೇವರ ಪೇಟೆ ಸವಾರಿ ಕೋರ್ಟ್ ರಸ್ತೆಯಲ್ಲಿ ತೆರಳುತ್ತಿದ್ದ ಸಂದರ್ಭ ಯುಗಾದಿ ಹಬ್ಬದ ಅಂಗವಾಗಿ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದ ಪಲ್ಲಕಿ ಉತ್ಸವದಲ್ಲಿ ಪೇಟೆ ಸವಾರಿಯಲ್ಲಿದ್ದ ವೆಂಕಟರಮಣ ದೇವರು ಮುಖಾಮುಖಿಯಾದರು.
ಈ ಅಪರೂಪದ ಕ್ಷಣದಿಂದ ನೆರೆದಿದ್ದ ಭಕ್ತರು ಪುಳಕಿತರಾದರು. ಆರು ವರ್ಷದ ಹಿಂದೆ ಪುತ್ತೂರು ಜಾತ್ರೆ ಸಂದರ್ಭ ಹನುಮ ಜಯಂತಿ ಉತ್ಸವ ನಡೆದಿದ್ದ ವೇಳೆ ಉಭಯ ದೇವರುಗಳ ಮುಖಾಮುಖಿ ನಡೆದಿತ್ತು ಎಂದು ಭಕ್ತರು ಸ್ಮರಿಸುತ್ತಾರೆ.
ಇದನ್ನೂ ಓದಿ: ಜಾತ್ರೆಯಲ್ಲಿ ಕಳೆದುಹೋದ ಚಿನ್ನಾಭರಣ ಹಿಂದಿರುಗಿಸಿದ ಪೊಳಲಿ ದೇವಸ್ಥಾನದ ಸಿಬ್ಬಂದಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು