ಪುತ್ತೂರು ಮುಖ್ಯ ರಸ್ತೆಯೇ ಹೊಂಡಮಯ!


Team Udayavani, Oct 9, 2017, 4:05 PM IST

9-1-4.jpg

ಪುತ್ತೂರು: ಬೆಳೆಯುತ್ತಿರುವ ಪುತ್ತೂರು ನಗರದಲ್ಲಿ ಹಾದುಹೋಗುವ ಮುಖ್ಯರಸ್ತೆಯಲ್ಲಿ ಅಲ್ಲಲ್ಲಿ ದೊಡ್ಡ ಗಾತ್ರದ
ಹೊಂಡಗಳು ಸೃಷ್ಟಿಯಾಗಿ ಸಂಚಾರ ವ್ಯವಸ್ಥೆಗೆ ಸವಾಲೊಡ್ಡುತ್ತಿವೆ. ಮಳೆ ನೀರಿನ ಜತೆಗೆ ಈ ರಸ್ತೆಯ ಡಾಮರು ಕಾಣೆಯಾಗುತ್ತಿದೆ.

ನಗರೋತ್ಥಾನ ಯೋಜನೆಯಲ್ಲಿ  ಎರಡು ವರ್ಷಗಳ ಹಿಂದೆ ನಗರದ ಮುಖ್ಯರಸ್ತೆಗೆ ಡಾಮರು ಹಾಕಲಾಗಿತ್ತು. ಆದರೆ ಕಾಮಗಾರಿಯ ಗುಣಮಟ್ಟ ಸರಿಯಾಗಿಲ್ಲದ ಕಾರಣ ಕೆಲ ದಿನಗಳಲ್ಲೇ ಹುಳುಕು ಬಯಲಾಗಿತ್ತು. ಸಾರ್ವಜನಿಕ
ವಲಯದಿಂದ ಆಕ್ರೋಶ ವ್ಯಕ್ತವಾದರೂ ಸರಿಪಡಿಸುವ ಕೆಲಸ ಮಾಡಿಲ್ಲ. 

ಸಂಚಾರ ದುಸ್ತರ
ಮುಖ್ಯವಾಗಿ ಗಾಂಧಿಕಟ್ಟೆ ಮತ್ತು ಪಕ್ಕದ 100 ಮೀ. ವ್ಯಾಪ್ತಿಯಲ್ಲಿ ರಸ್ತೆಯ ಡಾಮರು ಕಿತ್ತುಹೋಗಿ ಅಲ್ಲಲ್ಲಿ ಹೊಂಡಗಳು ನಿರ್ಮಾಣವಾಗಿವೆ. ಜನ ಹಾಗೂ ವಾಹನ ನಿಬಿಡ ನಗರದಲ್ಲಿ ಸುಲಲಿತ ಸಂಚಾರ ವ್ಯವಸ್ಥೆಗೂ ಇದು ತೊಡಕಾಗಿದೆ. ದ್ವಿಚಕ್ರ ವಾಹನಗಳ ಸಂಚಾರವಂತೂ ಸವಾಲಿನ ವಿಷಯವಾಗಿದೆ. ನಗರ ವ್ಯಾಪ್ತಿಯಲ್ಲಿನ ಮುಖ್ಯರಸ್ತೆಯಲ್ಲಿ ಹೆಚ್ಚು ಹದೆಗೆಟ್ಟ ಕೆಲವು ಕಡೆಗಳಲ್ಲಿ ಇತ್ತೀಚೆಗೆ ನಗರಸಭೆಯ ವತಿಯಿಂದ ಪ್ಯಾಚ್‌ವರ್ಕ್‌ ಕಾಮಗಾರಿ ನಡೆಸಲಾಗಿದೆ. ಆದರೆ ಇನ್ನು ಕೆಲವು ಕಡೆಗಳಲ್ಲಿ ಮಳೆಗಾಲ ಆರಂಭವಾದ ಬಳಿಕ ದೊಡ್ಡ ಗಾತ್ರದ ಹೊಂಡಗಳು ನಿರ್ಮಾಣವಾಗಿವೆ.

ಜಿಲ್ಲಾಧಿಕಾರಿ ಸ್ಪಂದನೆಯಿಲ್ಲ
ನಗರೋತ್ಥಾನ ಯೋಜನೆಯಲ್ಲಿ ಮುಖ್ಯರಸ್ತೆಗೆ ನಡೆಸಲಾದ ಅಭಿವೃದ್ಧಿ ಕಾಮಗಾರಿ ಗುಣಮಟ್ಟದಿಂದ ಕೂಡಿಲ್ಲ ಮತ್ತು ಮರು ಕಾಮಗಾರಿ ನಡೆಸಲು ಸಂಬಂಧಪಟ್ಟ ಗುತ್ತಿಗೆದಾರರಿಗೆ ಸೂಚಿಸಬೇಕು ಎಂದು ನಗರಸಭೆಯ ವತಿಯಿಂದ ದ. ಕ. ಜಿಲ್ಲಾಧಿಕಾರಿಯವರಿಗೆ ಎರಡೆರಡು ಸಲ ಮನವಿ ಮಾಡಲಾಗಿದೆ. ಆದರೆ ಜಿಲ್ಲಾಧಿಕಾರಿಯವರ ಕಡೆಯಿಂದ
ಯಾವುದೇ ಸ್ಪಂದನೆ ಸಿಕ್ಕಿಲ್ಲ ಎನ್ನುವುದು ನಗರಸಭೆ ಆಡಳಿತದ ಹೇಳಿಕೆ.

ಡಿಸಿಗೇ ಅಧಿಕಾರ
ನಗರೋತ್ಥಾನ ಯೋಜನೆಯಲ್ಲಿ ನಡೆಸಲಾದ ರಸ್ತೆ ಅಭಿವೃದ್ಧಿ ಕಾಮಗಾರಿಯಲ್ಲಿ ಗುಣಮಟ್ಟ ದೋಷ ಕಂಡುಬಂದ ಹಿನ್ನೆಲೆಯಲ್ಲಿ ಮರು ಕಾಮಗಾರಿಗೆ ಜಿಲ್ಲಾಧಿಕಾರಿಯವರಿಗೆ ಮನವಿ ಮಾಡಿದರೂ ಉತ್ತರ ಸಿಕ್ಕಿಲ್ಲ. ನಗರೋತ್ಥಾನ ಯೋಜನೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಯವರಿಗೆ ಅಧಿಕಾರವಿರುವುದರಿಂದ ಅವರು ಸ್ಪಂದಿಸಬೇಕು. 
ಜಯಂತಿ ಬಲ್ನಾಡು  
ಅಧ್ಯಕ್ಷರು, ನಗರಸಭೆ ಪುತ್ತೂರು

ಟಾಪ್ ನ್ಯೂಸ್

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

1-qweqewqe

BSNL 4G; ಆಗಸ್ಟ್‌ನಲ್ಲಿ ದೇಶಾದ್ಯಂತ ಸೇವೆ: ಮೂಲಗಳು

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharmasthala: ಸರಣಿ ಅಪಘಾತ; 5 ವಾಹನಗಳಿಗೆ ಹಾನಿ

Dharmasthala: ಸರಣಿ ಅಪಘಾತ; 5 ವಾಹನಗಳಿಗೆ ಹಾನಿ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

Bantwala; ಕಾರಿಗೆ ಸೈಡ್ ಕೊಟ್ಟಿಲ್ಲವೆಂದು ಕೆಎಸ್ಆರ್ ಟಿಸಿ ಬಸ್ ಚಾಲಕನಿಗೆ ತಂಡದಿಂದ ಹಲ್ಲೆ

Bantwala; ಕಾರಿಗೆ ಸೈಡ್ ಕೊಟ್ಟಿಲ್ಲವೆಂದು ಕೆಎಸ್ಆರ್ ಟಿಸಿ ಬಸ್ ಚಾಲಕನಿಗೆ ತಂಡದಿಂದ ಹಲ್ಲೆ

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

Belthangady ವೇಣೂರಿನ ಬಾಹುಬಲಿಗೆ ಮಸ್ತಕಾಭಿಷೇಕ; ವಿರಾಟ್‌ ವಿರಾಗಿಗೆ ಮಜ್ಜನ ಸಮಾಪನ

Belthangady ವೇಣೂರಿನ ಬಾಹುಬಲಿಗೆ ಮಸ್ತಕಾಭಿಷೇಕ; ವಿರಾಟ್‌ ವಿರಾಗಿಗೆ ಮಜ್ಜನ ಸಮಾಪನ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.