ಬಹಿರಂಗ ಪ್ರಚಾರ ನಾಳೆ ಮುಕ್ತಾಯ: ಕೃಷ್ಣಮೂರ್ತಿ


Team Udayavani, May 9, 2018, 10:35 AM IST

9-May-4.jpg

ಪುತ್ತೂರು: ಗುರುವಾರ ಮೇ 10ರಂದು ಸಂಜೆ 6 ಗಂಟೆಯ ಒಳಗೆ ಬಹಿರಂಗ ಪ್ರಚಾರಕ್ಕೆ ಮುಕ್ತಾಯ ಹಾಡಬೇಕು. ಅನಂತರ ಕ್ಷೇತ್ರದಿಂದ ಹೊರಗಿನ ಯಾವ ನಾಯಕರೂ ಕ್ಷೇತ್ರದಲ್ಲಿ ಉಳಿದುಕೊಳ್ಳಬಾರದು ಎಂದು ಕ್ಷೇತ್ರದ ಚುನಾವಣಾಧಿಕಾರಿ ಹಾಗೂ ಸಹಾಯಕ ಕಮಿಷನರ್‌ ಎಚ್‌. ಕೆ. ಕೃಷ್ಣಮೂರ್ತಿ ಅವರು ಸೂಚನೆ ನೀಡಿದ್ದಾರೆ.

ಅವರು ಮಂಗಳವಾರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಗಳು ಮತ್ತು ಏಜೆಂಟರ ಸಭೆಯಲ್ಲಿ ಮಾತನಾಡಿದರು. ಚುನಾವಣೆ ಹಿನ್ನೆಲೆಯಲ್ಲಿ ಅನುಸರಿಸಬೇಕಾದ ನಿಯಮಗಳ ಕುರಿತು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಮತದಾನ ಕೇಂದ್ರಗಳಿಗಿಂತ 200 ಮೀ. ದೂರದಲ್ಲಿ ಪ್ರತೀ ಅಭ್ಯರ್ಥಿಗಳ ಪರವಾಗಿ ಒಂದು ಬೂತ್‌ ರಚಿಸಿಕೊಳ್ಳಬಹುದು. ಇಲ್ಲಿ ಅಭ್ಯರ್ಥಿಯ ಫೂಟೋ ಪ್ರದರ್ಶನ ಮಾಡಬಾರದು. ಪಕ್ಷದ ಹೆಸರು, ಅಭ್ಯರ್ಥಿಯ ಹೆಸರು ಬರೆಯಬಹುದು. ಪಕ್ಷದ ಧ್ವಜವನ್ನೂ ಅಳವಡಿಸುವಂತಿಲ್ಲ. ಬೂತ್‌ ರಚನೆಗೆ ಸಂಬಂಧಿಸಿ ಆಯಾ ಗ್ರಾ.ಪಂ.ನ ಅಭಿವೃದ್ಧಿ ಅಧಿಕಾರಿಗಳಿಂದ ಅನುಮತಿ ಪಡೆದುಕೊಳ್ಳಬೇಕು ತಿಳಿಸಿದರು.

ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ 2,01,884 ಮತದಾರರಿದ್ದು, 217 ಬೂತ್‌ಗಳು ಮತ್ತು 6 ಹೆಚ್ಚುವರಿ ಬೂತ್‌ ಗಳಿವೆ. ಇವುಗಳಲ್ಲಿ 44 ಅತಿಸೂಕ್ಷ್ಮ ಮತಗಟ್ಟೆಗಳಿವೆ ಹಾಗೂ ಉಳಿದ ಸಾಮಾನ್ಯ ಮತಗಟ್ಟೆಗಳಿಗೆ. ಅತಿಸೂಕ್ಷ್ಮ ಮತಗಟ್ಟೆಗಳಲ್ಲಿ ಓರ್ವ ಪೊಲೀಸ್‌ ಹೆಡ್‌ ಕಾನ್‌ಸ್ಟೇಬಲ್‌ ಮತ್ತು ಕೇಂದ್ರೀಯ ಅರೆಸೇನಾ ಪಡೆಯ ನಾಲ್ವರು ಭದ್ರತಾ ಸಿಬಂದಿ ಕಾರ್ಯನಿರ್ವಹಿಸಲಿದ್ದಾರೆ. ಸಾಮಾನ್ಯ ಮತಗಟ್ಟೆಗಳಲ್ಲಿ ಒಬ್ಬ ಪೊಲೀಸ್‌ ಅಥವಾ ಹೋಂ ಗಾರ್ಡ್‌ ಇರಲಿದ್ದಾರೆ.

ಒಂದು ಮತಗಟ್ಟೆಯಲ್ಲಿ ಒಬ್ಬ ಅಧ್ಯಕ್ಷಾಧಿಕಾರಿ (ಪಿಆರ್‌ಒ), ಒಬ್ಬ ಸಹಾಯಕ ಅಧ್ಯಕ್ಷಾಧಿಕಾರಿ ಮತ್ತು ಮೂವರು ಮತಗಟ್ಟೆ ಅಧಿಕಾರಿಗಳು ಇರುತ್ತಾರೆ. ಪುತ್ತೂರು ಕ್ಷೇತ್ರದಲ್ಲಿ ಒಟ್ಟು 264 ಪಿಆರ್‌ಒ ಮತ್ತು 264 ಎಪಿಆರ್‌ಒಗಳು ಕರ್ತವ್ಯ ನಿರ್ವಹಿಸುತ್ತಾರೆ. 792 ಮತಗಟ್ಟೆ ಅಧಿಕಾರಿಗಳಿರುತ್ತಾರೆ ಎಂದರು.

81 ಅಂಗವಿಕಲರು
ಕ್ಷೇತ್ರದಲ್ಲಿ 81 ಅಂಗವಿಕಲ ಮತದಾರರನ್ನು ಗುರುತಿಸಲಾಗಿದೆ. ಕೋಡಿಂಬಾಡಿ ಮತಗಟ್ಟೆ ವ್ಯಾಪ್ತಿಯಲ್ಲಿ ಗರಿಷ್ಠ 23 ಅಂಗವಿಕಲ ಮತದಾರರಿದ್ದಾರೆ. ಆಯಾ ಮತಗಟ್ಟೆಗಳಲ್ಲಿ ಇವರಿಗೆ ಗಾಲಿ ಕುರ್ಚಿಗಳ ವ್ಯವಸ್ಥೆ ಮಾಡಲಾಗಿದೆ. ಮತಗಟ್ಟೆಗಳಿಗೆ ಸಿಬಂದಿ ತೆರಳುವಾಗಲೇ ಅವರ ಜತೆ ತುರ್ತು ಆರೋಗ್ಯ ಚಿಕಿತ್ಸೆಯ ಕಿಟ್‌ ಕಳುಹಿಸಿ ಕೊಡಲಾಗುತ್ತದೆ. ಇದಲ್ಲದೆ ಕ್ಷೇತ್ರದಲ್ಲಿ ಸಂಚಾರಿ ಆರೋಗ್ಯ ಘಟಕಗಳನ್ನು ಸಿದ್ಧತಾ ಸ್ಥಿತಿಯಲ್ಲಿ ಇರಿಸಲಾಗುತ್ತದೆ ಎಂದರು.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.