ಪುತ್ತೂರು: 58.98 ಲಕ್ಷ ರೂ. ಮಿಗತೆ ಬಜೆಟ್ 


Team Udayavani, Feb 23, 2019, 6:02 AM IST

23-february-4.jpg

ಪುತ್ತೂರು: ಸ್ಥಳೀಯಾಡಳಿತಕ್ಕೆ ಇನ್ನೂ ಆಡಳಿತ ನೇಮಕವಾಗದ ಹಿನ್ನೆಲೆಯಲ್ಲಿ ಫೆ. 22ರಂದು ಅಧಿಕಾರಿಗಳು ಬಜೆಟ್‌ ಮಂಡಿಸಿದರು. ಪುತ್ತೂರು ನಗರಸಭೆ ಈ ಬಾರಿ 58.98 ಲಕ್ಷ ರೂ. ಮಿಗತೆ ಬಜೆಟ್‌ ಅನ್ನು ಮಂಡಿಸಿದೆ.

ಶುಕ್ರವಾರ ಸಂಜೆ ನಗರಸಭೆ ಸಭಾಂಗಣದಲ್ಲಿ ನಗರಸಭೆ ಪೌರಾಯುಕ್ತೆ ರೂಪಾ ಶೆಟ್ಟಿ ಅವರು ಬಜೆಟ್‌ ಮಂಡಿಸಿದರು. ಈ ಬಾರಿ ಆಡಳಿತ ಇಲ್ಲದೇ ಇರುವುದರಿಂದ, ಬಜೆಟ್‌ಗೆ ನಗರಸಭೆ ಆಡಳಿತಾಧಿಕಾರಿ ಆಗಿರುವ ಜಿಲ್ಲಾಧಿಕಾರಿಗಳ ಅನುಮೋದನೆ ಪಡೆಯಲಾಗಿತ್ತು. ಲೆಕ್ಕ ಅಧೀಕ್ಷಕ ಸಿ.ಆರ್‌. ದೇವಾಡಿಗ, ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ ಅರುಣ್‌ ಉಪಸ್ಥಿತರಿದ್ದರು.

2019-20ನೇ ಸಾಲಿನಲ್ಲಿ ಒಟ್ಟು 41.87 ಕೋಟಿ ರೂ. ಆದಾಯ ವಿವಿಧ ಮೂಲಗಳಿಂದ ನಿರೀಕ್ಷಿಸಲಾಗಿದೆ. ಇದರಲ್ಲಿ ವಿವಿಧ ಯೋಜನೆಗಳಿಗೆ ಹಾಗೂ ಅಗತ್ಯತೆಗಳಿಗೆ 41.29 ಕೋಟಿ ರೂ. ಮೀಸಲಿಡಲಾಗಿದೆ. 58.98 ಲಕ್ಷ ರೂ. ಮಿಗತೆ ಬಜೆಟ್‌ ಆಗಿದೆ. 12.48 ಕೋಟಿ ರೂ. ಸ್ವಂತ ಆದಾಯ ನಿರೀಕ್ಷಿಸಲಾಗಿದೆ.

ಕೇಂದ್ರ ಹಾಗೂ ರಾಜ್ಯ ಸರಕಾರದಿಂದ 17.30 ಕೋಟಿ ರೂ. ಅನುದಾನ ಬರಲಿದೆ. 2019-20ನೇ ಸಾಲಿನಲ್ಲಿ ಸ್ವಂತ ಆದಾಯದ ವಿವರವನ್ನು ನೀಡಲಾಯಿತು. ವರ್ಷದಲ್ಲಿ 3.50 ಕೋಟಿ ರೂ. ಆಸ್ತಿ ತೆರಿಗೆಯಿಂದ ಬರಲಿದೆ. ಕುಡಿಯುವ ನೀರಿನ ಶುಲ್ಕವಾಗಿ 3.10 ಕೋಟಿ ರೂ., ನೀರಿನ ನಳ್ಳಿ ಸಂಪರ್ಕದಲ್ಲಿ 15 ಲಕ್ಷ ರೂ., ಕಟ್ಟಡ ಹಾಗೂ ಉದ್ಯಮ ಪರವಾನಿಗೆಯಿಂದ 15 ಲಕ್ಷ ರೂ., ಕರ ಸಂಗ್ರಹಣೆಯಿಂದ 9.10 ಲಕ್ಷ ರೂ., ಖಾತೆ ಬದಲಾವಣೆ, ಜನನ ಮರಣ ಪ್ರತಿ ನೀಡಿಕೆಯಿಂದ 25 ಲಕ್ಷ ರೂ., ಆಸ್ತಿ ತೆರಿಗೆ ಹಾಗೂ ಉದ್ಯಮ ಪರವಾನಿಗೆಗಳಿಗೆ ವಿಧಿಸುವ ದಂಡನೆಯಿಂದ 45.25 ಲಕ್ಷ ರೂ., ನವೀಕರಣಗೊಂಡ ಪುರಭವನದಿಂದ 10 ಲಕ್ಷ ರೂ. ಆದಾಯ ನಗರಸಭೆಗೆ ಬರಲಿದೆ. ಹೀಗೆ ಒಟ್ಟು 12.48 ಕೋಟಿ ರೂ. ಸ್ವಂತ ಆದಾಯ, ಕೇಂದ್ರ ಹಾಗೂ ರಾಜ್ಯ ಸರಕಾರದಿಂದ 17.30 ಕೋಟಿ ರೂ. ಅನುದಾನ ಬರಲಿದೆ. ಒಟ್ಟು ಇತರೆ ಹೊಂದಾಣಿಕೆ ಮೊತ್ತ ಸೇರಿ 41.87 ಕೋಟಿ ರೂ. ಮೊತ್ತ ನಗರಸಭೆಗೆ ಬರಲಿದೆ.

41.29 ಕೋಟಿ ರೂ. ಹಂಚಿಕೆ
ನಗರಸಭೆಯ ಪ್ರತಿ ವಾರ್ಡ್‌ಗಳಿಗೆ ತಲಾ 10 ಲಕ್ಷ ರೂ., ಪರಿಶಿಷ್ಟ ಜಾತಿ, ಪಂಗಡದವರಿಗೆ ಶೇ. 24.10ರ ನಿಧಿಯಡಿ 3.10 ಲಕ್ಷ ರೂ., ಬಡತನ ರೇಖೆಗಿಂತ ಕೆಳಗಿರುವ ಬಿಪಿಎಲ್‌ ಕುಟುಂಬಗಳಿಗೆ ಶೇ. 7.25ರ ನಿಧಿಯಡಿ ಸಹಾಯಧನ ಒದಗಿಸಲು 33.54 ಲಕ್ಷ ರೂ., ಭಿನ್ನ ಸಾಮರ್ಥ್ಯ ಹೊಂದಿದವರಿಗೆ ಶೇ. 5 ನಿಧಿಯಲ್ಲಿ 23.13 ಲಕ್ಷ ರೂ., ಕಚೇರಿ ಆಡಳಿತ ವ್ಯವಸ್ಥೆ ಸಾರ್ವಜನಿಕರಿಗೆ ತ್ವರಿತಗೊಳಿಸುವ ನಿಟ್ಟಿನಲ್ಲಿ ತಂತ್ರಾಂಶ ಅಭಿವೃದ್ಧಿಗಾಗಿ 15 ಲಕ್ಷ ರೂ., ನಗರಸಭೆ ಕಟ್ಟಡಗಳಿಗಾಗಿ 75 ಲಕ್ಷ ರೂ., ನಗರಸಭೆಗೆ ಹೊಸ ವಾಹನಗಳ ಖರೀದಿಗಾಗಿ 90 ಲಕ್ಷ ರೂ., ದಾರಿದೀಪ, ಪ್ರತಿ ವಾರ್ಡ್‌ಗೆ ನೀರು ಸರಬರಾಜು, ಹೊರಗುತ್ತಿಗೆ ನಿರ್ವಹಣೆಗೆ, ನಲ್ಮ್ ಯೋಜನೆಯಡಿ ಸಾಲ ಹಾಗೂ ಸಹಾಯಧನ, ಹೊಸ ವಾಹನ ಖರೀದಿಗೆ ಇನ್ನಿತರ ಸೌಲಭ್ಯಗಳಿಗೆ ಹಂಚಿಕೆ ಮಾಡಲಾಗಿದೆ ಎಂದು ಪೌರಾಯುಕ್ತೆ ವಿವರಿಸಿದರು.

ಟಾಪ್ ನ್ಯೂಸ್

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.