ಗುಜರಾತ್‌ನ ಭಿಲಾಡ್‌ ಬಳಿ 21 ದಿನಗಳಿಂದ ಪುತ್ತೂರಿನ ಯುವಕರು ಕಾರಲ್ಲೇ ‘ಲಾಕ್‌ಡೌನ್‌’

ಗುಜರಾತ್‌ನ ಭಿಲಾಡ್‌ ಚೆಕ್‌ಪೋಸ್ಟ್‌ ಬಳಿ ಅನ್ನ- ನೀರಿಲ್ಲದೆ ಬಾಕಿಯಾಗಿರುವ ಅಡಕೆ ವ್ಯಾಪಾರಿಗಳು

Team Udayavani, Apr 15, 2020, 6:59 AM IST

ಗುಜರಾತ್‌ನ ಭಿಲಾಡ್‌ ಬಳಿ 21 ದಿನಗಳಿಂದ ಪುತ್ತೂರಿನ ಯುವಕರು ಕಾರಲ್ಲೇ ‘ಲಾಕ್‌ಡೌನ್‌’

ಕಾರಿನ ಸೀಟಿನಲ್ಲೇ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಯುವಕ.

ಪುತ್ತೂರು / ಮಂಗಳೂರು: ವೃತ್ತಿಯಲ್ಲಿ ಅಡಕೆ ಸುಪಾರಿ ವ್ಯಾಪಾರಿಗಳಾಗಿ ಕೆಲಸ ನಿರ್ವಹಿಸುತ್ತಿದ್ದ ಪುತ್ತೂರಿನ ಯುವಕರಿಬ್ಬರು 21 ದಿನಗಳಿಂದ ಗುಜರಾತ್‌ ರಾಜ್ಯದ ಚೆಕ್‌ ಪೋಸ್ಟ್‌ ಬಳಿ ಕಾರೊಂದರಲ್ಲಿ ಅನಾಥ ಬದುಕು ಸಾಗಿಸುತ್ತಾ ಆತಂಕದಲ್ಲಿದ್ದಾರೆ.

ಲಾಕ್‌ಡೌನ್‌ ಜಾರಿಗೊಳ್ಳುವ ಎರಡು ದಿನಗಳ ಮೊದಲು ಗುಜರಾತ್‌ ರಾಜ್ಯದ ರಾಜ್‌ಕೋಟಾದಿಂದ ಕಾರಿನಲ್ಲಿ ಪುತ್ತೂರಿಗೆ ಹೊರಟಿದ್ದ ಈ ಯುವಕರು ಸುಮಾರು 500 ಕಿ.ಮೀ. ದೂರ ಪ್ರಯಾಣ ಮಾಡಿದ್ದರು. ವಲ್ಸಾಡ್‌ ಜಿಲ್ಲೆಯ ಅಂಬರ್‌ಗಾಂವ್‌ ಭಿಲಾಡ್‌ ತಾಲೂಕಿನ ಚೆಕ್‌ ಪೋಸ್ಟ್‌ ಬಳಿ ಅವರನ್ನು ನಿಲ್ಲಿಸಿಕೊಳ್ಳಲಾಗಿದೆ.

ವಾಪಸ್‌ ಹೋಗಲಾಗದೆ, ಊರಿಗೂ ಬರಲಾಗದೆ ಒದ್ದಾಡುವಂತಾಗಿದೆ. ಪುತ್ತೂರಿನ ಸಾಮೆತ್ತಡ್ಕ ನಿವಾಸಿ ಆಶಿಕ್‌ ಹುಸೈನ್‌ ಹಾಗೂ ಕೆಮ್ಮಿಂಜೆ ಗ್ರಾಮದ ನಿವಾಸಿ ಮೊಹಮ್ಮದ್‌ ತಾಕೀನ್‌ ಮರೀಲ್‌ ಅಪರಿಚಿತ ಊರಿನಲ್ಲಿ ಈಗ ದಿನದ ಬಹುತೇಕ ಅವಧಿಯನ್ನು ಕಾರಿನಲ್ಲೇ ಕಳೆಯುವಂತಾಗಿದೆ.

ಆ ಊರಿನ ಸಹೃದಯರಾದ ಸಯ್ಯದ್‌ ಕಶ್ಯಪ್‌ ಎಂಬುವರು ಈ ಯುವಕರಿಗೆ ಅನ್ನ, ನೀರು ಕೊಡುತ್ತಿದ್ದಾರೆ. ಆದರೆ, ಯುವಕರ ಬಳಿ ಬಟ್ಟೆ, ಇತರ ಆವಶ್ಯಕ ವಸ್ತುಗಳೂ ಇಲ್ಲ. ಪುತ್ತೂರಿಗೆ ಬರಲು ಪ್ರಯತ್ನಿಸಿದರೂ ಸಾಧ್ಯವಾಗಿಲ್ಲ.
‘ಉದಯವಾಣಿ’ ಜತೆ ಮಾತನಾಡಿದ ಆಶಿಕ್‌, ‘ನಮ್ಮನ್ನು ಗುಜರಾತ್‌ನ ಪೊಲೀಸರು ತಡೆದು ನಿಲ್ಲಿಸಿದ್ದಾರೆ. ಪದೇ ಪದೆ ಬಯ್ಯುತ್ತಾರೆ ಹೊರತು ಯಾವುದೇ ರೀತಿಯ ಸಹಾಯ ಮಾಡುತ್ತಿಲ್ಲ.

ಸ್ಥಳೀಯರು ಅಲ್ಪ-ಸ್ವಲ್ಪ ಆಹಾರ ಕೊಡುತ್ತಿದ್ದಾರೆ. ಹಣ ಪಾವತಿಸಿದರೆ ಪಕ್ಕದ ಹೊಟೇಲ್‌ನವರು ಸ್ನಾನ ಮಾಡಲು, ಶೌಚಾಲಯ ಬಳಸಲು ಅವಕಾಶ ನೀಡುತ್ತಿದ್ದಾರೆ. ಆದರೆ, ತಿನ್ನುವುದಕ್ಕೆ ಏನೂ ಸಿಗುತ್ತಿಲ್ಲ. ಸದ್ಯಕ್ಕೆ ಆರೋಗ್ಯವಾಗಿದ್ದೇವೆ. ನಮಗೆ ದಿಕ್ಕು ತೋಚದಂತಾಗಿದೆ. ಊರಿಗೆ ಹೋಗಲು ಅವಕಾಶ ನೀಡಿದರೆ ಎಷ್ಟು ದಿನ ಬೇಕಾದರೂ ಕ್ವಾರಂಟೈನ್‌ನಲ್ಲಿ ಇರುತ್ತೇವೆ’ ಎಂದಿದ್ದಾರೆ.

ದ.ಕ. ಜಿಲ್ಲಾಧಿಕಾರಿ ಪತ್ರ
ಪುತ್ತೂರಿನ ಇಬ್ಬರು ಗುಜರಾತ್‌-ಮಹಾರಾಷ್ಟ್ರ ಗಡಿ ಸಮೀಪ ಕಾರಿನಲ್ಲೇ ದಿನ ಕಳೆಯುತ್ತಿರುವ ಬಗ್ಗೆ ಪುತ್ತೂರಿನ ರಶೀದ್‌ ವಿಟ್ಲ ಅವರು ದ.ಕ ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್‌ ಅವರಿಗೆ ಮಾಹಿತಿ ನೀಡಿದ್ದು ಅದರಂತೆ ಜಿಲ್ಲಾಧಿಕಾರಿಯವರು ಎ. 14ರಂದೇ ವಲ್ಸಾಡ್‌ ಜಿಲ್ಲಾಧಿಕಾರಿಗೆ ಇ-ಮೇಲ್‌ ಮೂಲಕ ಪತ್ರ ರವಾನಿಸಿದ್ದಾರೆ.
ಮತ್ತಿಬ್ಬರು ಸಂಕಷ್ಟದಲ್ಲಿ ಇದೇ ಪ್ರದೇಶದಲ್ಲಿ ಮಹಾರಾಷ್ಟ್ರದ ಇನ್ನಿಬ್ಬರು ಕಾರಿನಲ್ಲೇ ದಿನ ಕಳೆಯುತ್ತಿದ್ದು ಸಂಕಷ್ಟದಲ್ಲಿದ್ದಾರೆ ಎಂದು ಆಶಿಕ್‌ ಮಾಹಿತಿ ನೀಡಿದ್ದಾರೆ.

ಟಾಪ್ ನ್ಯೂಸ್

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

supreem

ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.