ತಾತ್ಸಾರದ ಹೇಳಿಕೆಯೇ ಪ್ಲಾಸ್ಟಿಕ್‌ ಸಂಗ್ರಹಕ್ಕೆ  ಹೇತು


Team Udayavani, Oct 6, 2018, 11:26 AM IST

6-october-5.gif

ಸವಣೂರು: ಮೂರು ವರ್ಷಗಳ ಹಿಂದೆ ಶಾಲೆಯ ಮಕ್ಕಳು ಮಾಡುತ್ತಿದ್ದ ಪರಿಸರ ಜಾಗೃತಿ ಜಾಥಾದ ಕುರಿತು ವ್ಯಕ್ತಿ ಯೊಬ್ಬರು ನೀಡಿದ ತಾತ್ಸಾರದ ಹೇಳಿಕೆ ಯನ್ನೇ ಸವಾಲಾಗಿ ಸ್ವೀಕರಿಸಿದ ಜಿನಸು ವ್ಯಾಪಾರಿಯೊಬ್ಬರು ಕೊಳ್ತಿಗೆ ಗ್ರಾಮವನ್ನೇ ಪ್ಲಾಸ್ಟಿಕ್‌ ಮುಕ್ತ ಮಾಡಲು ಪಣ ತೊಟ್ಟಿದ್ದು, 3 ವರ್ಷಗಳಿಂದ ಪ್ಲಾಸ್ಟಿಕ್‌ನಿಂದಾಗುವ ಅಪಾಯಗಳ ಕುರಿತು ಗ್ರಾಮಸ್ಥರಿಗೆ ತಿಳಿವಳಿಕೆ ನೀಡುತ್ತಿದ್ದಾರೆ.

ಪೆರ್ಲಂಪಾಡಿಯಲ್ಲಿ ಶಾಲೆ ಮಕ್ಕಳು ಮೆರವಣಿಗೆ ಮಾಡಿ, ಪ್ಲಾಸ್ಟಿಕ್‌ ನಿರ್ನಾಮ ಮಾಡಿ, ಪರಿಸರ ಉಳಿಸಿ ಎಂಬ ಘೋಷಣೆ ಕೂಗುತ್ತ ಸಾಗುತ್ತಿದ್ದರು. ಮಕ್ಕಳ ಜಾಥಾ ಜಿನಸು ವ್ಯಾಪಾರಿ ಹರಿಪ್ರಸಾದ್‌ ಅವರ ಅಂಗಡಿಯ ಮುಂದೆ ಸಾಗುತ್ತಿದ್ದಾಗ ಅಲ್ಲೇ ಇದ್ದ ವ್ಯಕ್ತಿಯೊಬ್ಬರು. ‘ಇದೆಲ್ಲ ಏಕೆ? ಅದೆಲ್ಲ ಆಗುಹೋಗುವ ಕೆಲಸವೇ? ಸುಮ್ಮನೆ ಪರಿಸರದ ಬಗ್ಗೆ ಕಾಳಜಿ ಎಂದು ಹೇಳುತ್ತಾರೆ, ಪರಿಸರವನ್ನು ಉಳಿಸುವುದಕ್ಕೆ ಯಾರೂ ಮುಂದೆ ಬರುವುದೇ ಇಲ್ಲ’ ಎಂದು ಹೇಳಿದರು. ಈ ಮಾತಿನಿಂದ ಬೇಸರಗೊಂಡ ಹರಿಪ್ರಸಾದ್‌, ಪ್ಲಾಸ್ಟಿಕ್‌ ವಿರುದ್ಧ ಆ ಕ್ಷಣವೇ ಸಮರ ಸಾರಿದರು. ಪ್ಲಾಸ್ಟಿಕ್‌ ಸಂಗ್ರಹಿಸುವ ಅವರು, ಗ್ರಾಹಕರಿಗೂ ಪ್ಲಾಸ್ಟಿಕ್‌ ತ್ಯಜಿಸುವಂತೆ ಮನವಿ ಮಾಡುತ್ತಿದ್ದಾರೆ.

ಪ್ಲಾಸ್ಟಿಕ್‌ ವಸ್ತುಗಳಿದ್ದರೆ ಎಲ್ಲೆಂದರಲ್ಲಿ ಎಸೆಯಬೇಡಿ. ನನ್ನ ಅಂಗಡಿಗೆ ತನ್ನಿ. ಅದರ ವಿಲೇವಾರಿಗೆ ಬೇಕಾದ ವ್ಯವಸ್ಥೆ ಮಾಡುತ್ತೇನೆ ಎಂದು ಹೇಳುತ್ತಿದ್ದಾರೆ. ಕ್ರಮೇಣ ಪೆರ್ಲಂಪಾಡಿಯ ಜನರು ಈ ಅಭಿಯಾನಕ್ಕೆ ಬೆಂಬಲ ನೀಡುತ್ತಿದ್ದಾರೆ. ಈಗ ಹರಿಪ್ರಸಾದ್‌ ಅವರು ಪ್ಲಾಸ್ಟಿಕ್‌ ಮುಕ್ತ ಕೊಳ್ತಿಗೆ ಗ್ರಾಮದ ಸೇನಾನಿಯಾಗಿ ರೂಪುಗೊಂಡಿದ್ದಾರೆ.

ಕೊಳ್ತಿಗೆ ಗ್ರಾ.ಪಂ.ನಲ್ಲಿ ಪ್ಲಾಸ್ಟಿಕ್‌ ಸಂಗ್ರಹಕ್ಕೆ ಗೋದಾಮು ನಿರ್ಮಾಣ ಮಾಡಲಾಗಿದೆ. ಇದಕ್ಕೂ ಹರಿಪ್ರಸಾದ್‌ ಅವರ ಪ್ರಯತ್ನವೇ ಕಾರಣ. ಗ್ರಾಮದಲ್ಲಿ ಸಂಗ್ರಹವಾದ ಪ್ಲಾಸ್ಟಿಕ್‌ ಸಂಗ್ರಹಿಸಲು ಯೋಗ್ಯ ಗೋದಾಮಿನ ವ್ಯವಸ್ಥೆ ಇಲ್ಲ ಎಂಬುದನ್ನು ಜಿಲ್ಲೆಯ ಸ್ವಚ್ಛತಾ ರಾಯಭಾರಿ ಶೀನ ಶೆಟ್ಟಿ ಅವರ ಗಮನಕ್ಕೆ ತಂದಿದ್ದರು. ಎಲ್ಲರ ಸಹಕಾರದಲ್ಲಿ ಗೋದಾಮು ನಿರ್ಮಾಣವಾಯಿತು. ಪ್ಲಾಸ್ಟಿಕ್‌ ವಿರುದ್ಧ ಏಕಾಂಗಿ ಹೋರಾಟ ಮಾಡುತ್ತಿರುವ ಹರಿಪ್ರಸಾದ್‌ ಅವರನ್ನು ಗ್ರಾಮಸ್ಥರು ಸಮ್ಮಾನಿಸಿದ್ದಾರೆ.

ಅಚುಕಟ್ಟಾಗಿ ಸಂಗ್ರಹ
ತಮ್ಮ ಅಂಗಡಿ ವ್ಯವಹಾರದ ಮಧ್ಯೆ ಹರಿಪ್ರಸಾದ್‌ ಪ್ಲಾಸ್ಟಿಕ್‌ ವಸ್ತುಗಳನ್ನು ಸಂಗ್ರಹಿಸುತ್ತಾರೆ. ಮರುಬಳಕೆ ಸಾಧ್ಯವಿದ್ದರೆ ತಾವೇ ಮಾಡುತ್ತಾರೆ. ಮರುಬಳಕೆಗೆ ಯೋಗ್ಯವಿಲ್ಲದ ಪ್ಲಾಸ್ಟಿಕ್‌ ಚೀಲಗಳನ್ನು ಅಂಗಡಿಯಲ್ಲೇ ಅಚ್ಚುಕಟ್ಟಾಗಿ ಸಂಗ್ರಹಿಸುತ್ತಿದ್ದಾರೆ. ಸಂಗ್ರಹ ತುಂಬಿದಾಗ ಅದನ್ನು ಸ್ಥಳೀಯ ಗ್ರಾ.ಪಂ. ಗೋದಾಮಿಗೆ ಸಾಗಿಸುತ್ತಾರೆ. ಗ್ರಾ.ಪಂ. ಅದನ್ನು ವಿಲೇವಾರಿ ಮಾಡುತ್ತದೆ.

ಹೋರಾಟ ನಿರಂತರ
ಪ್ಲಾಸ್ಟಿಕ್‌ ಹಾನಿಯ ಕುರಿತು ಜನರಿಗೆ ತಿಳಿವಳಿಕೆ ನೀಡುತ್ತಿದ್ದೇನೆ. ಪ್ರಾರಂಭದಲ್ಲಿ ಏಕಾಂಗಿ ಹೋರಾಟವಾಗಿತ್ತು. ಒಂದು ವರ್ಷದಿಂದ ಜನರ ಬೆಂಬಲ ಸ್ವಲ್ಪಮಟ್ಟಿಗೆ ಸಿಗುತ್ತಿದೆ. ಗ್ರಾಮಸ್ಥರು ಪ್ಲಾಸ್ಟಿಕ್‌ ಬಳಕೆ ಮಾಡುವುದಿಲ್ಲ ಅಥವಾ ಬಳಸಿದ ಪ್ಲಾಸ್ಟಿಕನ್ನು ಎಲ್ಲೆಂದರಲ್ಲಿ ಎಸೆದು ಪರಿಸರಕ್ಕೆ ಹಾನಿ ಮಾಡುವುದಿಲ್ಲ ಎಂದು  ದೃಢ ಸಂಕಲ್ಪ ಮಾಡಿದ್ದೇ ಆದಲ್ಲಿ ನಮ್ಮ ದೇಶ ಪ್ಲಾಸ್ಟಿಕ್‌ ಮುಕ್ತವಾಗಲು ಸಾಧ್ಯ. ನನ್ನ ಜಾಗೃತಿ ನಿರಂತರವಾಗಿರುತ್ತದೆ.
ಹರಿಪ್ರಸಾದ್‌ ಪೆರ್ಲಂಪಾಡಿ,
   ಜಿನಸು ವ್ಯಾಪಾರಿ

ಟಾಪ್ ನ್ಯೂಸ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.