Puttur ವಿಷ ಸೇವಿಸಿ ವಿದ್ಯಾರ್ಥಿನಿ ಆತ್ಮಹತ್ಯೆ
ತಾಯಿಯ ನಿಧನದ ಬಳಿಕ ರೇಖಾ ಮಾನಸಿಕವಾಗಿ ಕುಗ್ಗಿದ್ದಳು...
Team Udayavani, Jun 11, 2023, 10:58 PM IST
ಪುತ್ತೂರು : ನಗರದ ಪಡೀಲಿನ ಹಾಸ್ಟೆಲ್ ನಲ್ಲಿ ಕೊಕ್ಕಡದ ವಿದ್ಯಾರ್ಥಿನಿಯೋರ್ವಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜೂ.11 ರಂದು ಸಂಭವಿಸಿದೆ.
ಕೊಕ್ಕಡ ಗ್ರಾಮದ ನೇತ್ರಾಳ ನಿವಾಸಿ ಶ್ರೀಧರ ಆಚಾರ್ಯ ಹಾಗೂ ದಿ. ಪುಷ್ಪ ದಂಪತಿ ಪುತ್ರಿ ರೇಖಾ (15) ಆತ್ಮಹತ್ಯೆ ಮಾಡಿಕೊಂಡಾಕೆ.
ತಾಯಿ ಪುಷ್ಪ ಅವರು ಕಳೆದ ವರ್ಷ ನಿಧನ ಹೊಂದಿದ್ದರು. ತಂದೆ ಕೂಲಿ ಕೆಲಸ ಮಾಡುತ್ತಿದ್ದು, ತಾಯಿಯ ನಿಧನದ ಬಳಿಕ ರೇಖಾ ಮಾನಸಿಕವಾಗಿ ಕುಗ್ಗಿದ್ದಳು. ಆಕೆ ತಮ್ಮ ಸಂಬಂಧಿಕರ ಮನೆಯಿಂದ ಶಾಲೆಗೆ ಹೋಗುತ್ತಿದ್ದಳು. ಕೊಕ್ಕಡ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಆಕೆಯನ್ನು ಪುತ್ತೂರಿನ ಪಡಿಲ್ ಹಾಸ್ಟೆಲ್ಗೆ ಸೇರಿಸಲಾಗಿತ್ತು. ಆರಂಭದಲ್ಲಿ ಹಾಸ್ಟೆಲಿಗೆ ಹೋಗಲು ನಿರಾಕರಿಸಿದ ಆಕೆ ಬಳಿಕ ಹಾಸ್ಟೆಲ್ ಸೇರಲು ಒಪ್ಪಿದ್ದಳು. ಹಾಸ್ಟೆಲ್ ಬೇಡ, ಇಂಗ್ಲೀಷ್ ಕಷ್ಟದ ವಿಷಯ ಎಂದು ಆಗಾಗ ಹೇಳುತ್ತಿದ್ದಳು ಎನ್ನಲಾಗಿದೆ. ಕೊಕ್ಕಡ ಶಾಲೆಯಲ್ಲಿರುವಾಗ ಗೆಳತಿಯರೊಂದಿಗೆ ಉತ್ತಮವಾಗಿ ಬೆರೆತು ಕಲಿಕೆಯಲ್ಲಿ ಆಸಕ್ತಿ ಹೊಂದಿದ್ದಳು.ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!