ಪುತ್ತೂರು ಜಾತ್ರೆ: ಇಂದು ಧ್ವಜಾರೋಹಣ

ಎ. 14ರಂದು ಶ್ರೀ ದೇಗುಲದಲ್ಲಿ ವಿಷು ಕಣಿ ಉತ್ಸವ

Team Udayavani, Apr 10, 2019, 6:00 AM IST

g-10

ನಗರ: ಸೀಮಾತೀತ ಪ್ರಭಾವ ವಲಯವನ್ನು ಹೊಂದಿರುವ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೆಗೆ ಬುಧವಾರ ಧ್ವಜಾರೋಹಣದ ಮೂಲಕ ಚಾಲನೆ ದೊರೆಯಲಿದೆ. ಬೆಳಗ್ಗೆ 9.46ರ ವೃಷಭ ಲಗ್ನ ಸುಮುಹೂರ್ತದಲ್ಲಿ ಧ್ವಜಾರೋಹಣ ನಡೆಯಲಿದೆ.

ಪುತ್ತೂರ ಉಳ್ಳಾಯನಾಗಿ ಭಕ್ತರ ನಂಬಿಕೆ, ಪ್ರೀತಿ, ಗೌರವಕ್ಕೆ ಪಾತ್ರವಾಗಿರುವ ಶ್ರೀ ಮಹಾಲಿಂಗೇಶ್ವರನ ದೇಗುಲವು ಕೇವಲ 273 ದಿನಗಳಲ್ಲಿ 12 ಕೋಟಿ ರೂ. ವೆಚ್ಚದಲ್ಲಿ ಭಕ್ತ ಸಮುದಾಯದ ನಿತ್ಯ ಕರಸೇವೆಯ ಜತೆಗೆ ನಿರ್ಮಾಣಗೊಂಡಿರುವುದು ಒಂದು ಚರಿತ್ರೆ. ಇಂತಹ ಹಲವು ಐತಿಹಾಸಿಕ ಕಾರಣದಿಂದಲೇ ಪುತ್ತೂರು ಜಾತ್ರೆ ಕೂಡ ಭಕ್ತ ಸಮುದಾಯದಲ್ಲಿ ವಿಶೇಷ ಮಹತ್ವವನ್ನು ಪಡೆದಿದೆ.

ಧಾರ್ಮಿಕ ಚರಿತ್ರೆ
ಶ್ರೀ ಮಹಾಲಿಂಗೇಶ್ವರ ದೇವರ ವಾರ್ಷಿಕ ಜಾತ್ರೆ ಪ್ರತಿವರ್ಷ ಎ. 10ರಿಂದ 20ರ ತನಕ ನಡೆಯುತ್ತದೆ. ಜಾತ್ರೆಯ ಸಂದರ್ಭ ದೇವರು ದಶ ದಿಕ್ಕುಗಳಿಗೆ ಪೇಟೆ ಸವಾರಿ ಉತ್ಸವದಲ್ಲಿ ತೆರಳಿ ಭಕ್ತರ ಕಟ್ಟೆ ಪೂಜೆ ಸೇವೆಯನ್ನು ಸ್ವೀಕರಿಸುವುದು ಮತ್ತು ವರ್ಷ ಕಳೆದಂತೆ ಕಟ್ಟೆಪೂಜೆ ಸೇವೆಗಳು ಮತ್ತಷ್ಟು ವಿಜ್ರಂಭಣೆಯಿಂದ ನಡೆಯುತ್ತಿರುವುದು ಪುತ್ತೂರು ಜಾತ್ರೆಯ ವಿಶೇಷತೆಗಳಲ್ಲಿ ಒಂದು. 10 ದಿನಗಳ ಕಾಲ ಪೇಟೆ ಸವಾರಿ ನಡೆಯುವ ಜಾತ್ರೆ ದ. ಕ. ಜಿಲ್ಲೆಯ ಮಟ್ಟಿಗೆ ಧಾರ್ಮಿಕ ಚರಿತ್ರೆಯೂ ಹೌದು.

ಜಾತ್ರೆಯ ವಿಶೇಷ
ಎ. 10ರಂದು ಧ್ವಜಾರೋಹಣದೊಂದಿಗೆ ಜಾತ್ರೆಗೆ ಅಧಿಕೃತ ಚಾಲನೆ ನೀಡಲಾಗುತ್ತದೆ. ಎ. 14ರಂದು ಶ್ರೀ ದೇಗುಲದಲ್ಲಿ ವಿಷು ಕಣಿ ಉತ್ಸವ ವಿಶೇಷವಾಗಿ ನಡೆದು ಅಂದು ರಾತ್ರಿ ದೇಗುಲದಲ್ಲಿ ಚಂದ್ರಮಂಡಲ ರಥೋತ್ಸವ ನಡೆಯುತ್ತದೆ. ಎ. 16ರಂದು ದೇಗುಲದ ಹೊರಾಂಗಣದಲ್ಲಿ ಸಣ್ಣ ರಥೋತ್ಸವ, ಪಲ್ಲಕ್ಕಿ ಉತ್ಸವ, ಮುತ್ತು ಬೆಳೆದ ಪುತ್ತೂರಿನ ಕೆರೆಯಲ್ಲಿ ಶ್ರೀ ದೇವರ ಕೆರೆ ಅಯನ, ಎ. 17ರ ಬೆಳಗ್ಗೆ ಶ್ರೀ ದೇಗುಲದಲ್ಲಿ ದರ್ಶನ ಬಲಿ, ಬಟ್ಟಲು ಕಾಣಿಕೆ, ಸಂಜೆ ಶ್ರೀ ದೇವರ ಬ್ರಹ್ಮರಥೋತ್ಸವ ಮತ್ತು ಸುಡುಮದ್ದು ಪ್ರದರ್ಶನ ನಡೆಯುತ್ತದೆ. ಎ. 18ರಂದು ಸಂಜೆ ವೀರಮಂಗಲ ಕುಮಾರಧಾರಾ ನದಿಗೆ ಶ್ರೀ ದೇವರ ಅವಭೃಥ ಸವಾರಿ ತೆರಳುತ್ತದೆ. ಎ. 19ರಂದು ಅವಭೃಥ ಸವಾರಿ ಮುಗಿಸಿ ದೇವರು ದೇಗುಲಕ್ಕೆ ಬಂದ ಬಳಿಕ ಧ್ವಜಾವರೋಹಣ ನಡೆಯುತ್ತದೆ. ಎ. 19ರ ರಾತ್ರಿ ಮತ್ತು ಎ. 20ರ ರಾತ್ರಿ ಮಂತ್ರಾಕ್ಷತೆ, ಅಂಕುರ ಪ್ರಸಾದ ಮತ್ತು ದೈವಗಳ ನೇಮ ನಡೆಯುತ್ತದೆ.

ದೇಗುಲದ ಧ್ವಜಸ್ಥಂಭಕ್ಕೆ ಕಟ್ಟಲು ಸೀಮೆಯ ಭಕ್ತರು ಅಡಿಕೆ, ಸೀಯಾಳ, ಬಾಳೆಗೊನೆ, ಕಬ್ಬಿನ ಜಲ್ಲೆ, ಮಾವಿನ ಕಾಯಿಯ ಗೊಂಚಲು, ಹಲಸಿನ ಕಾಯಿ, ಹಿಂಗಾರ ಮೊದಲಾದ ಸುವಸ್ತುಗಳನ್ನು ಎ. 10ರಂದು ದೇಗುಲಕ್ಕೆ ತಂದು ಒಪ್ಪಿಸುತ್ತಾರೆ. ಧ್ವಜಾರೋಹಣದ ಬಳಿಕ ಸುವಸ್ತುಗಳನ್ನು ಧ್ವಜಸ್ಥಂಭದ ಕಟ್ಟೆಗೆ ಕಟ್ಟಲಾಗುತ್ತದೆ.

ಪೇಟೆ ಸವಾರಿ ಆರಂಭ
ರಾತ್ರಿ ಅಂಕುರಾರ್ಪಣೆಯ ಬಳಿಕ ಶ್ರೀ ದೇವರ ಬಲಿ ಉತ್ಸವ ಹೊರಡುತ್ತದೆ. ಬಳಿಕ ಪೇಟೆ ಸವಾರಿಯು ಬೊಳುವಾರು, ಶ್ರೀರಾಮ ಪೇಟೆ, ಕಾರ್ಜಾಲು, ರಕ್ತೇಶ್ವರಿ ದೇವಸ್ಥಾನ, ಕಲ್ಲೇಗ, ಕರ್ಮಲ ತನಕ ತೆರಳಿ ತಡರಾತ್ರಿ ದೇವಾಲಯಕ್ಕೆ ತಲುಪಲಿದೆ.

ನಲ್ಕುರಿ ಸಂಪ್ರದಾಯ
ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೆ ತುಳು ಪಂಚಾಂಗದಂತೆ ಹಿಂದಿನಿಂದಲೂ ನಿಗದಿತ ದಿನಗಳಂದೇ ನಡೆಯುತ್ತದೆ. ತುಳು ಧಾರ್ಮಿಕ ಸಂದರ್ಭ ಇದನ್ನು ನಲ್ಕುರಿ ಸಂಪ್ರದಾಯ ಎಂದು ಕರೆಯಲಾಗುತ್ತದೆ. ನಿಗದಿತ ದಿನಗಳಂದೇ ಧಾರ್ಮಿಕ ಉತ್ಸವಗಳು ನಡೆಯುವುದೇ ನಲ್ಕುರಿ ಸಂಪ್ರದಾಯ.

ಟಾಪ್ ನ್ಯೂಸ್

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

1-modi

Varanasi; 25000 ಮಹಿಳೆಯರ ಜತೆ ಸ್ವಕ್ಷೇತ್ರದಲ್ಲಿ ಪಿಎಂ ಸಂವಾದ

ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Mangaluru ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

MOdi (3)

Odisha ರಾಜ್ಯ ಸರಕಾರವು ಭ್ರಷ್ಟರ ಹಿಡಿತಕ್ಕೆ ಸಿಲುಕಿದೆ: ಪಿಎಂ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MLC Election: ನೈಋತ್ಯ ಕ್ಷೇತ್ರದಲ್ಲಿ ಗೆಲುವು ನಿಶ್ಚಿತ: ಕೋಟ

MLC Election: ನೈಋತ್ಯ ಕ್ಷೇತ್ರದಲ್ಲಿ ಗೆಲುವು ನಿಶ್ಚಿತ: ಕೋಟ

Belthangady ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವ ವ್ಯವಸ್ಥೆ ಆತಂಕದಲ್ಲಿ: ಕೋಟ

Belthangady ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವ ವ್ಯವಸ್ಥೆ ಆತಂಕದಲ್ಲಿ: ಕೋಟ

Belthangady ವಿದ್ಯುತ್‌ ತಂತಿ ಮೇಲೆ ಬಿದ್ದ ಮರ; ವ್ಯಕ್ತಿಗೆ ಗಾಯ

Belthangady ವಿದ್ಯುತ್‌ ತಂತಿ ಮೇಲೆ ಬಿದ್ದ ಮರ; ವ್ಯಕ್ತಿಗೆ ಗಾಯ

1-asdsad

Bantwal; ರಿಕ್ಷಾ ಪಲ್ಟಿಯಾಗಿ ರಸ್ತೆಗೆ ಎಸೆಯಲ್ಪಟ್ಟ ಯುವಕ ಮೃತ್ಯು

1wewqewq

Bantwal; ಮಂಚಿಯಲ್ಲಿ ಹಿಟ್ ಆ್ಯಂಡ್ ರನ್: ಸ್ಕೂಟರ್ ಸವಾರ ಮೃತ್ಯು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

police USA

China ಶಾಲೆಯಲ್ಲಿ ಚಾಕು ಇರಿತ: 5 ಮಂದಿಗೆ ಗಾಯ

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.