ವಿದ್ಯಾರ್ಥಿನಿ ಮೇಲೆ ಅತ್ಯಾಚಾರದ ವೀಡಿಯೋ ವೈರಲ್: ಐವರ ಬಂಧನ
ಜಿಲ್ಲೆಯನ್ನೇ ತಲ್ಲಣಗೊಳಿಸಿದ ಹೇಯ ಕೃತ್ಯ
Team Udayavani, Jul 4, 2019, 5:00 AM IST
ಪುತ್ತೂರು: ಯುವತಿಯೊಬ್ಬಳ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಮಾಡುತ್ತಿರುವ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಇದರಲ್ಲಿ ಭಾಗಿಯಾಗಿದ್ದ ಆರೋಪಿದಲ್ಲಿ ಪುತ್ತೂರಿನ ಕಾಲೇಜೊಂದರ ಐವರು ವಿದ್ಯಾರ್ಥಿಗಳನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ.
ವೀಡಿಯೋ ವೈರಲ್ ಆದ ಬಳಿಕ ಪುತ್ತೂರಿನ ಕಾಲೇಜೊಂದರ ವಿದ್ಯಾರ್ಥಿನಿ ನೀಡಿದ ದೂರಿನಂತೆ ಪುತ್ತೂರು ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖ ಲಾಗಿದೆ. ಬಜತ್ತೂರು ಗಾಣದಮೂಲೆ ನಿವಾಸಿ ಗುರುನಂದನ್(19), ಪೆರ್ನೆ ನಿವಾಸಿ ಪ್ರಜ್ವಲ್ (19), ಪೆರ್ನೆ ಕಡಂಬು ನಿವಾಸಿ ಕಿಶನ್ (19), ಆರ್ಯಾಪು ಪಿಲಿಗುಂಡ ನಿವಾಸಿ ಸುನಿಲ್ (19) ಹಾಗೂ ಬರಿಮಾರು ಬಲ್ಯ ನಿವಾಸಿ ಪ್ರಖ್ಯಾತ್ (19) ಬಂಧಿತರು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ದ.ಕ. ಎಸ್ಪಿ ಬಿ.ಎಂ.ಲಕ್ಷ್ಮೀಪ್ರಸಾದ್ ಅವರು ಆರೋಪಿಗಳ ಪತ್ತೆಗಾಗಿ ವಿಶೇಷ ತಂಡ ರಚಿಸಿದ್ದರು.
ಪ್ರಕರಣದ ವಿವರ
ಘಟನೆಯ ಕುರಿತು ಸಂತ್ರಸ್ತೆಯು ಪೊಲೀಸರಿಗೆ ನೀಡಿರುವ ಮಾಹಿತಿ ಪ್ರಕಾರ, ಮಾರ್ಚ್ ತಿಂಗಳ ಕೊನೆಯ ವಾರದ ಒಂದು ದಿನ ಈ ಕೃತ್ಯ ನಡೆದಿದೆ.
ಅಂದು ಮಧ್ಯಾಹ್ನ 3ಕ್ಕೆ ಕಾಲೇಜಿನ ಸುನಿಲ್ ಎಂಬಾತನು ತನ್ನಲ್ಲಿ ಮಾತನಾಡಲಿಕ್ಕಿದೆ ಎಂದು ಕಾರಿನಲ್ಲಿ ಕುಳ್ಳಿರಿಸಿ, ಪ್ರಜ್ವಲ್ ಹಾಗೂ ಪ್ರಕೃತ್ರನ್ನು ಕೂಡಿಕೊಂಡು ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿದ್ದಾರೆ. ಅಲ್ಲಿ ನಾಲ್ಕೈದು ಮಂದಿ ಸಾಮೂಹಿಕವಾಗಿ ಅತ್ಯಾಚಾರ ನಡೆಸಿರುತ್ತಾರೆ. ಬಳಿಕ ಈ ವಿಚಾರವನ್ನು ಬಹಿರಂಗಪಡಿಸದಂತೆ ಬೆದರಿಕೆಯೊಡ್ಡಿದ್ದಾರೆ. ಈ ವಿಷಯವನ್ನು ಯಾರಿಗಾದರೂ ತಿಳಿಸಿದರೆ ವೀಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರ ಮಾಡುವುದಾಗಿ ಬೆದರಿಸಿದ್ದರು ಎಂದು ಸಂತ್ರಸ್ತೆಯು ದೂರಿನಲ್ಲಿ ತಿಳಿಸಿದ್ದಾರೆ.
ಪ್ರಕರಣದ ಕುರಿತು ಪುತ್ತೂರು ಮಹಿಳಾ ಠಾಣೆಯಲ್ಲಿ ಕಲಂ 341, 376(ಡಿ) ಆರ್/ಡಬ್ಲ್ಯು 34 ಐಪಿಸಿ ಮತ್ತು ಎಸ್ಸಿ/ಎಸಿ ಕಾಯ್ದೆ ಹಾಗೂ 66ಇ, 67ಎ ಐಟಿ ಆ್ಯಕ್ಟ್ನಂತೆ ಪ್ರಕರಣ ದಾಖಲಾಗಿರುತ್ತದೆ.
ಕಠಿನ ಕ್ರಮಕ್ಕೆ ಮಾಜಿ ಶಾಸಕರ ಆಗ್ರಹ
ಪ್ರಕರಣವನ್ನು ಪೊಲೀಸ್ ಇಲಾಖೆಯು ಗಂಭೀರವಾಗಿ ಪರಿಗಣಿಸಿ ಆರೋಪಿಗಳ ವಿರುದ್ಧ ಕಠಿನ ಕ್ರಮ ಜರಗಿಸಬೇಕು. ಯಾವುದೇ ತಾರತಮ್ಯ ಮಾಡದೆ ಆರೋಪಿಗಳನ್ನು ಬಂಧಿಸಬೇಕು ಎಂದು ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ ಆಗ್ರಹಿಸಿದ್ದಾರೆ.
ಈ ಕುರಿತು ಸೂಕ್ತ ತನಿಖೆ ನಡೆಸುವಂತೆ ಎಸ್ಪಿಗೆ ಮನವಿ ಮಾಡಿದ್ದೇವೆ. ವಿದ್ಯಾರ್ಥಿ ಸಮುದಾಯದ ಹಿತದೃಷ್ಟಿಯಿಂದ ಇಂತಹ ವೀಡಿಯೋಗಳನ್ನು ವೈರಲ್ ಮಾಡದಂತೆ ಶಕುಂತಳಾ ಶೆಟ್ಟಿ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ಇಂತಹ ಕೃತ್ಯಗಳಿಂದ ತಮ್ಮ ಮಕ್ಕಳನ್ನು ಕಾಲೇಜಿಗೆ ಕಳುಹಿಸಲು ಪೋಷಕರು ಹೆದರುವ ಸ್ಥಿತಿ ಇದೆ. ಹೀಗಾಗಿ ಪೊಲೀಸರು ಕಠಿನ ಕ್ರಮ ಜರಗಿಸಿ ಪೋಷಕರಲ್ಲಿ ಧೈರ್ಯ ತುಂಬುವ ಕೆಲಸ ಮಾಡಬೇಕು ಎಂದು ಜಿಲ್ಲಾ ಪಂಚಾಯತ್ ಶಿಕ್ಷಣ ಸ್ಥಾಯೀ ಸಮಿತಿ ಅಧ್ಯಕ್ಷೆ ಅನಿತಾ ಹೇಮನಾಥ ಶೆಟ್ಟಿ ಅವರು ಆಗ್ರಹಿಸಿದ್ದಾರೆ.
ಎಬಿವಿಪಿ ಆಗ್ರಹ
ಪ್ರಕರಣವನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿ, ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರನ್ನು ಕಠಿನ ಶಿಕ್ಷೆಗೆ ಒಳಪಡಿಸಬೇಕು ಎಂದು ಪುತ್ತೂರಿನ ಎಬಿವಿಪಿ ಘಟಕ ಆಗ್ರ ಹಿಸಿದೆ. ಮಾದಕ ವ್ಯಸನಗಳಿಂದ ಯುವಜನತೆಯನ್ನು ರಕ್ಷಿಸ ಬೇಕು ಎಂದು ಸುಳ್ಯ ವಿಹಿಂಪ-ಬಜರಂಗ ದಳ ಘಟಕ ಆಗ್ರಹಿಸಿದೆ.
ಯುವ ಕಾಂಗ್ರೆಸ್ ಆಗ್ರಹ
ಇಂತಹ ಕೃತ್ಯಗಳು ಸಾಮಾಜದ ಸ್ವಾಸ್ಥ್ಯ ಕೆಡಿಸುತ್ತದೆ. ಪೊಲೀಸ್ ಇಲಾಖೆ ಇದನ್ನು ಗಂಭೀರವಾಗಿ ಪರಿಗಣಿಸಿ ಎಷ್ಟೇ ಪ್ರಭಾವಿ ವ್ಯಕ್ತಿಗಳಾದರೂ ಅವರ ವಿರುದ್ಧ ಸೂಕ್ತ ಕ್ರಮ ಜರಗಿಸಬೇಕು ಎಂದು ಪುತ್ತೂರು ಯುವ ಕಾಂಗ್ರೆಸ್ ಅಧ್ಯಕ್ಷ ಯು.ಟಿ. ತೌಸೀಫ್ ಅವರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap;ಅರಂತೋಡು: ಕಾರು – ಬೈಕ್ ಢಿಕ್ಕಿ: ಸವಾರ ಸಾವು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು