ಪುತ್ತೂರು: ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಹಲ್ಲೆ, ಜೀವ ಬೆದರಿಕೆ
ಒಂಬತ್ತು ಮಂದಿಯ ವಿರುದ್ಧ ಪ್ರಕರಣ ದಾಖಲು
Team Udayavani, Jan 31, 2023, 6:16 AM IST
ಪುತ್ತೂರು: ಪುತ್ತೂರಿನಲ್ಲಿ ಕಂಬಳ ವೀಕ್ಷಿಸಲು ಬಂದ ಮಂಗಳೂರು ಮೂಲದ ಯುವಕನೋರ್ವ ತನ್ನ ಪ್ರಿಯತಮೆ ಜತೆ ಮಾತನಾಡುತ್ತಿರುವ ಸಂದರ್ಭ ಆಕೆಯ ಮಾಜಿ ಪ್ರಿಯಕರ ತನ್ನ ಗೆಳೆಯರ ಜತೆ ಬಂದು ಬೆದರಿಕೆ ಒಡ್ಡಿ, ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಹಲ್ಲೆ ನಡೆಸಿರುವ ಕುರಿತು ಪುತ್ತೂರು ನಗರ ಠಾಣೆಗೆ ಯುವಕನೋರ್ವ ದೂರು ನೀಡಿದ್ದಾನೆ.
ಮಂಗಳೂರು ಕೋಡಿಕಲ್ ನಿವಾಸಿ ಸಾಗರ್ ದೂರು ನೀಡಿದಾತ. ಕೌಶಿಕ್, ಯಜ್ಞೆಶ್, ಕೇಶವ, ಸೃಜನ್, ವಿನೀತ್, ಲತೇಶ್, ಮನ್ವಿತ್, ಮೋಹಿತ್ ಹಾಗೂ ಹೇಮಂತ್ ವಿರುದ್ಧ ಪ್ರಕರಣ ದಾಖಲಾಗಿದೆ. ರವಿವಾರ ಮಧ್ಯಾಹ್ನ ತಾನು ಕಂಬಳ ಗದ್ದೆಯಲ್ಲಿ ಪ್ರೇಯಸಿಯ ಜತೆ ಮಾತನಾಡುತ್ತಿರುವ ಸಂದರ್ಭ ಕೌಶಿಕ್ ಎಂಬಾತ ಬಂದು ನೀನು ಯಾರು, ಎಲ್ಲಿಯವ, ನಿನಗೂ ಆಕೆಗೂ ಏನು ಸಂಬಂಧ ಎಂದು ಕೇಳಿದ್ದ. ತನ್ನ ಜತೆಗಿದ್ದ ದುರ್ಗಾಪ್ರಸಾದನನ್ನು ಪಕ್ಕಕ್ಕೆ ಕರೆದುಕೊಂಡು ಹೋಗಿ ತಾನು ಆಕೆಯ ಪ್ರಿಯತಮ ಎಂದು ಹೇಳಿದಾಗ ಆರೋಪಿಗಳು ಕಂಬಳ ಗದ್ದೆಯಿಂದ ನಿರ್ಜನ ಪ್ರದೇಶವೊಂದಕ್ಕೆ ಕರೆದುಕೊಂಡು ಹೋಗಿ ಅಲ್ಲಿ ತನಗೆ ಹಾಗೂ ದುರ್ಗಾಪ್ರಸಾದ್ ಅವರಿಗೆ ಹಲ್ಲೆ ನಡೆಸಿ ಆಕೆಯನ್ನು ಪ್ರೀತಿಸಬಾರದು ಎಂದು ಹೇಳಿ ಜೀವ ಬೆದರಿಕೆ ಒಡ್ಡಿದ್ದಾರೆ ಎಂದು ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
MUST WATCH
ಹೊಸ ಸೇರ್ಪಡೆ
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..
Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?
Election illegal: ನಿನ್ನೆ 2.31 ಕೋ. ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ