ಮುಂಬೈಯಲ್ಲಿ ಮೃತಪಟ್ಟಿದ್ದ ಪುತ್ತೂರು ನಿವಾಸಿಯ ಗುರುತು ಪತ್ತೆ


Team Udayavani, Jul 30, 2021, 1:39 PM IST

Putturu Udayavani News

ಪುತ್ತೂರು : ಮುಂಬೈಯಲ್ಲಿ ಮೃತಪಟ್ಟಿದ್ದ ಪುತ್ತೂರು ನಿವಾಸಿಯ ಗುರುತು ಪತ್ತೆಯಾಗಿದೆ. ಬನ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಚಿಕ್ಕಮುಡ್ನೂರು ಗ್ರಾಮದ ಕೆಮ್ಮಾಯಿ ಮೂಡಾಯೂರು ಎಂಬಲ್ಲಿಯ ಶಶಿ ಪೂಜಾರಿ ಮುಂಬೈಯಲ್ಲಿ ಮೃತಪಟ್ಟವರು ಎಂದು ಗುರುತು ಪತ್ತೆ ಹಚ್ಚಲಾಗಿದೆ. ಮೃತದೇಹ ತರಲು ಇದೀಗ ಅವರ ಸಂಬಂಧಿಕರು ಮುಂಬೈಗೆ ತೆರಳಿದ್ದಾರೆ ಎಂದು ತಿಳಿದು ಬಂದಿದೆ.

‘ಮಹಾರಾಷ್ಟ್ರದ ಬಾಂದ್ರಾಪೂರ್ವದ ಎವರ್ ಗ್ರೀನ್ ಹೋಟೇಲ್ ಬಳಿ ಕಳೆದ 35 ವರ್ಷಗಳಿಂದ ಪಾನ್ ಬೀಡ ಅಂಗಡಿ ಹೊಂದಿದ್ದ ಶಶಿ ಪೂಜಾರಿ ಮೃತಪಟ್ಟಿದ್ದಾರೆ. ಇವರು ತಾನು ದಕ್ಷಿಣ ಕನ್ನಡದ ಪುತ್ತೂರಿನವರು ಎಂದು ನಮ್ಮಲ್ಲಿ ಹೇಳಿ ಕೊಳ್ಳುತ್ತಿದ್ದರು. ನನ್ನ ಸಹೋದರ, ಸಹೋದರಿ ಪುತ್ತೂರಿನಲ್ಲಿ ಇದ್ದಾರೆ ಎಂದು ತಿಳಿಸಿದ್ದರು.

ಇದನ್ನೂ ಓದಿ : ಶಾಸಕ ಮತ್ತಿಮಡುಗೆ ಸಚಿವ ಸ್ಥಾನ ನೀಡಲು ಒತ್ತಾಯಿಸಿ ಮೆರವಣಿಗೆ, ದೀರ್ಘದಂಡ ನಮಸ್ಕಾರ

ಇವರ ವಾರಿಸುದಾರರು ಯಾರಾದರು ಇದ್ದರೆ ಕೂಡಲೇ ನಮ್ಮನ್ನು ಸಂಪರ್ಕಿಸಿ’ ಎಂದು ಕೆಲವು ದಿನಗಳಿಂದ ಮೃತರ ಭಾವಚಿತ್ರ ಹಾಗೂ ಮುಂಬೈಯಲ್ಲಿರುವ ಕೆಲವರ ಮೊಬೈಲ್ ಫೋನ್ ನಂಬರ್ ಸಹಿತ ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ಪ್ರಸಾರವಾಗುತ್ತಿತ್ತು.‌

ಮುಂಬೈಯಲ್ಲಿ ಮೃತರಾಗಿರುವ ಪುತ್ತೂರಿನವರು ಯಾರಾಗಿರಬಹುದು ಎಂದು ವ್ಯಾಪಕ ಕುತೂಹಲ ಸೃಷ್ಠಿಸಿತ್ತು. ಇದೀಗ ಅವರ ಗುರುತು ಪತ್ತೆಯಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಭಾವಚಿತ್ರದ ಆಧಾರದಲ್ಲಿ ಅವರನ್ನು ಅವರ ಮನೆಯವರು ಗುರುತು ಪತ್ತೆ ಹಚ್ಚಿದ್ದಾರೆ.

ಮೂಡಾಯೂರಿನ ಲಕ್ಷ್ಮಿ ಮತ್ತು ನಾಗಪ್ಪ ಪೂಜಾರಿಯವರ ಪುತ್ರ ಶಶಿಪೂಜಾರಿ ಯಾನೆ ಶಿವಪ್ಪ ಪೂಜಾರಿ(55ವ)ಯವರೇ ಮುಂಬೈಯಲ್ಲಿ ಮೃತಪಟ್ಟ ವ್ಯಕ್ತಿ ಎಂಬುದು ಇದೀಗ ಗೊತ್ತಾಗಿದೆ.‌ 35 ವರ್ಷಗಳ ಹಿಂದೆ ಉದ್ಯೋಗ ಅರಸಿ ಇವರು ಮುಂಬೈಗೆ ಹೋಗಿದ್ದವರು ಮತ್ತೆ ಇತ್ತ ಬಂದಿರಲಿಲ್ಲ, ಮನೆಯವರ ಜತೆ ಸಂಪರ್ಕವೂ ಹೊಂದಿರಲಿಲ್ಲ.

ಪ್ರಾರಂಭದಲ್ಲಿ ಅವರಿಗಾಗಿ ಹುಡುಕಾಟ ನಡೆಸಿದ್ದ ಮನೆಯವರು ಬಳಿಕ ಅವರನ್ನು ಪತ್ತೆ ಹಚ್ಚಲು ಸಾಧ್ಯವಾಗದೆ ಮೌನಕ್ಕೆ ಶರಣಾಗಿದ್ದರು. ಅವಿವಾಹಿತರಾಗಿದ್ದ ಇವರು ತಾನು ಮುಂಬೈಯಲ್ಲಿ ಹೊಂದಿದ್ದ ಪಾನ್‌ಬೀಡ ಅಂಗಡಿಯ ಬಳಿ ರೂಮೊಂದರಲ್ಲಿ ವಾಸವಾಗಿದ್ದರು ಎಂದು ತಿಳಿದು ಬಂದಿದೆ.

ಮೃತ ಶಶಿ ಪೂಜಾರಿಯವರ ಸಹೋದರ, ಬನ್ನೂರು ಗ್ರಾಮ ಪಂಚಾಯತ್ ಸದಸ್ಯರೂ, ನಾಟಕ ಕಲಾವಿದರೂ ಆಗಿರುವ ಮೂಡಾಯೂರು ತಿಮ್ಮಪ್ಪ ಪೂಜಾರಿ ಮತ್ತು ಅವರ ಆಪ್ತರು ಮುಂಬೈಗೆ ತೆರಳಿದ್ದಾರೆ.

ಇದನ್ನೂ ಓದಿ : ಉತ್ತರಕನ್ನಡದಲ್ಲಿರೋ ಈ ಅಪರೂಪದ ರಮಣೀಯ ಜಲಪಾತಕ್ಕೆ ಭೇಟಿ ನೀಡಿದ್ದೀರಾ?

ಟಾಪ್ ನ್ಯೂಸ್

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.