ಹೆಬ್ಬಾವನ್ನು ಕೊಂದು ಬಾಗಿಲಿಗೆ ನೇತು ಹಾಕಿದ ಪ್ರಕರಣ : ಇಬ್ಬರ ಬಂಧನ
Team Udayavani, Jul 5, 2022, 11:23 PM IST
ಪುತ್ತೂರು : ಕೊಳ್ತಿಗೆ ಗ್ರಾಮದ ಪೆರ್ಲಂಪಾಡಿಯಲ್ಲಿ ಹೆಬ್ಟಾವನ್ನು ಕೊಂದು ಗ್ರಾಮ ಅರಣ್ಯ ಸಮಿತಿ ಕಟ್ಟಡದ ಬಾಗಿಲಿಗೆ ನೇತು ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಪುತ್ತೂರು ಅರಣ್ಯ ಇಲಾಖೆ ಸಿಬಂದಿ ಇಬ್ಬರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಕೊಳ್ತಿಗೆ ಗ್ರಾಮದ ಶೇಡಿಗುರಿ ನಿವಾಸಿ ಧನಂಜಯ ಮತ್ತು ಜಯ ಬಂಧಿತ ಆರೋಪಿಗಳು. ಅವರು ಮನೆ ಬಳಿ ಬಂದಿದ್ದ ಹೆಬ್ಟಾವನ್ನು ಹಿಡಿದು ಗ್ರಾಮ ಅರಣ್ಯ ಸಮಿತಿ ಕಟ್ಟಡದ ಬಾಗಿಲ ಬೀಗಕ್ಕೆ ನೇತು ಹಾಕಿದ್ದರು.
ಉಪ ಅರಣ್ಯ ಸಂರಕ್ಷಣಾಧಿಕಾರಿ ವೈ. ಕೆ. ದಿನೇಶ್ ಕುಮಾರ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ವಿ.ಪಿ. ಕಾರ್ಯಪ್ಪ ನಿರ್ದೇಶನದಂತೆ ವಲಯ ಅರಣ್ಯಾಧಿಕಾರಿಗಳಾದ ಕಿರಣ್ ಬಿ. ಎಂ., ಉಪವಲಯ ಅರಣ್ಯಾಧಿಕಾರಿಗಳಾದ ಲೋಕೇಶ್ ಎಸ್.ಎನ್., ಅರಣ್ಯ ರಕ್ಷಕರಾದ ದೀಪಕ, ನಿಂಗರಾಜ್ ಮತ್ತು ಇಲಾಖೆ ವಾಹನ ಚಾಲಕರಾದ ಜಗದೀಶ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ನ್ಯಾಯಾಲಯವು ಆರೋಪಿಗಳಿಗೆ ಜು.15 ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಇದನ್ನೂ ಓದಿ : ಮಂಗಳೂರು : ಉಡುಗೊರೆ ಆಮಿಷ ನೀಡಿ ವಿದ್ಯಾರ್ಥಿಗೆ 1.85 ಲ.ರೂ. ವಂಚನೆ