ಮನೆ, ಅಂಗಡಿಗಳಿಗೆ ಕ್ಯೂಆರ್‌ ಕೋಡ್‌ ವ್ಯವಸ್ಥೆ

ಮಹಾನಗರ ಪಾಲಿಕೆ : ತ್ಯಾಜ್ಯ ಸಂಗ್ರಹದ ಮೇಲೆ ನಿಗಾ

Team Udayavani, Mar 12, 2021, 3:20 AM IST

ಮನೆ, ಅಂಗಡಿಗಳಿಗೆ ಕ್ಯೂಆರ್‌ ಕೋಡ್‌ ವ್ಯವಸ್ಥೆ

ಮಹಾನಗರ: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರತೀ ದಿನ ತ್ಯಾಜ್ಯ ಸಂಗ್ರಹ ಮಾಡಲಾಗುತ್ತಿದ್ದು, ಸಾರ್ವಜನಿಕರು ಮತ್ತು ಪಾಲಿಕೆಯ ನಡುವಣ ಸಮನ್ವಯ ಸಾಧಿಸುವ ಉದ್ದೇಶದಿಂದ ಎಲ್ಲ ವಾರ್ಡ್‌ ಗಳಲ್ಲಿನ ಮನೆ, ಅಂಗಡಿಗಳಿಗೆ ಕ್ಯೂಆರ್‌ ಕೋಡ್‌ ವ್ಯವಸ್ಥೆ ಅಳವಡಿಸಲು ನಿರ್ಧರಿಸಲಾಗಿದೆ.

ಪಾಲಿಕೆ ವ್ಯಾಪ್ತಿಯ ಮನೆ, ಅಪಾರ್ಟ್‌ ಮೆಂಟ್‌, ವಾಣಿಜ್ಯ ಸಂಕೀರ್ಣಗಳಲ್ಲಿ ತ್ಯಾಜ್ಯ ಸಂಗ್ರಹ ಕುರಿತು ನಿಗಾ ವಹಿಸಲು ಸ್ಮಾರ್ಟ್‌ಸಿಟಿ ಯೋಜನೆಯಡಿ ನೂತನ ವ್ಯವಸ್ಥೆಯನ್ನು ಜಾರಿಗೊಳಿಸಲಾಗುತ್ತಿದೆ. ಸದ್ಯ ನಗರದ ಸುಮಾರು 20,000 ಕಟ್ಟಡಗಳಿಗೆ ಕ್ಯೂ ಆರ್‌ ಕೋಡ್‌ ಅಳವಡಿಸಲಾಗಿದ್ದು,  ಇನ್ನೂ 80,000ದಷ್ಟು ಕಟ್ಟಡಕ್ಕೆ ಕ್ಯೂ ಆರ್‌ ಕೋಡ್‌ ಅಳವಡಿಸಲು ಬಾಕಿ ಇದೆ. ಕೆಲವೇ ದಿನಗಳಲ್ಲಿ ಈ ವ್ಯವಸ್ಥೆ ಅಂತಿಮಗೊಳ್ಳಲಿದೆ.

ನಗರದಲ್ಲಿನ ಕೆಲವು ವಾರ್ಡ್‌ ಗಳಲ್ಲಿ ಪ್ರತೀ ದಿನ ತ್ಯಾಜ್ಯ ಸಂಗ್ರಹಣ ವಾಹನಗಳು ಬರುವುದಿಲ್ಲ ಎಂದು ಸಾರ್ವಜನಿಕರು ಪಾಲಿಕೆಗೆ ದೂರು ನೀಡುತ್ತಿದ್ದರು. ಈ ಕುರಿತು ಪರಿಶೀಲನೆ ನಡೆಸಲು ಮತ್ತು ದೂರುಗಳಿಗೆ ತತ್‌ಕ್ಷಣ ಸ್ಪಂದಿಸುವ ಉದ್ದೇಶದಿಂದ ಈ ನೂತನ ತಂತ್ರಜ್ಞಾನವನ್ನು ಬಳಕೆ ಮಾಡಲಾಗುತ್ತಿದೆ.

ಕೆಲವು ತಿಂಗಳ ಹಿಂದೆ ಪ್ರಾಯೋಗಿಕವಾಗಿ ಕೆಲವೊಂದು ವಾರ್ಡ್‌ ಗಳಲ್ಲಿನ ಕಟ್ಟಡಗಳಿಗೆ ಕ್ಯೂ ಆರ್‌ ಕೋಡ್‌ ವ್ಯವಸ್ಥೆ   ಅಳವಡಿಸಲಾಗಿತ್ತು. ಅದು ಯಶಸ್ವಿ  ಯಾಗಿದ್ದು, ಇದೀಗ ಎಲ್ಲ ವಾರ್ಡ್‌ ಗಳಿಗೂ ವಿಸ್ತರಿಸಲು ಪಾಲಿಕೆ ನಿರ್ಧಾರ ಕೈಗೊಂಡಿದೆ.

ಕ್ಯೂಆರ್‌ ಕೋಡ್‌ ಕಾರ್ಯನಿರ್ವಹಣೆ ಹೇಗೆ? :

ಹಣಕಾಸಿನ ವ್ಯವಹಾರಗಳಿಗೆ ಆನ್‌ಲೈನ್‌ ಪೇಮೆಂಟ್‌ಗೆ ಬಳಸುವ ಕ್ಯೂ ಆರ್‌ ಕೋಡ್‌ ಮಾದರಿಯಲ್ಲಿ ಈ ಕೋಡ್‌ ಸಿದ್ಧಪಡಿಸಲಾಗಿದೆ. ತ್ಯಾಜ್ಯ ಉತ್ಪಾದನೆ ಕೇಂದ್ರಗಳಾದ ಮನೆ, ಹೊಟೇಲ್‌, ಅಪಾರ್ಟ್‌ಮೆಂಟ್‌, ಕಾಂಪ್ಲೆಕ್ಸ್‌, ಮಳಿಗೆಗಳು, ವಿವಿಧ ಉದ್ಯಮಗಳ ಕಾಂಪೌಂಡ್‌ಗಳಿಗೆ ಕ್ಯೂ-ಆರ್‌ ಕೋಡ್‌ ಅಂಟಿಸಲಾಗುತ್ತದೆ.

ಕಸ ಸಂಗ್ರಹಿಸುವ ಪೌರ ಕಾರ್ಮಿಕರಿಗೆ ಕ್ಯೂ ಆರ್‌ ಕೋಡ್‌ ಸ್ಕ್ಯಾನ್‌ಮಾಡಲು ಪ್ರತ್ಯೇಕ ಯಂತ್ರ ನೀಡಲಾಗುತ್ತದೆ. ಅವರು ಸ್ಕ್ಯಾನ್‌ ಮಾಡಿ ಆ ಮನೆಯಿಂದ ತ್ಯಾಜ್ಯ ಸಂಗ್ರಹಿಸುತ್ತಾರೆ. ಸ್ಮಾರ್ಟ್‌ ಸಿಟಿ ಯೋಜನೆಯಡಿ ಕಾರ್ಯ ನಿರ್ವಹಿಸುತ್ತಿರುವ ಇಂಟಿಗ್ರೇಟೆಡ್‌ ಕಮಾಂಡ್‌ ಕಂಟ್ರೋಲ್‌ ಸೆಂಟರ್‌ಗೆ

ಈ ಸಂದೇಶ ರವಾನೆಯಾಗುತ್ತದೆ. ಸೆಂಟರ್‌ನಲ್ಲಿರುವ ಅಧಿಕಾರಿ/ಸಿಬಂದಿ ಇದನ್ನು ಗಮನಿಸುತ್ತಾರೆ. ಒಂದು ವೇಳೆ ಕ್ಯೂಆರ್‌ ಕೋಡ್‌ ಸ್ಕ್ಯಾನ್‌ ಮಾಡದೇ ಇದ್ದರೆ ಆ ಮನೆಯಿಂದ ಕಸ ಸಂಗ್ರಹಿಸಿಲ್ಲವೆಂದು ಪಾಲಿಕೆ ಅಧಿಕಾರಿಗಳಿಗೆ ಮಾಹಿತಿ ನೀಡಲಾಗುತ್ತದೆ ಎಂದು ಸ್ಮಾರ್ಟ್‌ಸಿಟಿ ಅಧಿಕಾರಿಗಳು “ಉದಯವಾಣಿ ಸುದಿನ’ಕ್ಕೆ ತಿಳಿಸಿದ್ದಾರೆ.

ಪಾಲಿಕೆ ವ್ಯಾಪ್ತಿಯಲ್ಲಿ ತ್ಯಾಜ್ಯಸಂಗ್ರಹದ ಮೇಲೆ ನಿಗಾ ವಹಿಸುವ ಉದ್ದೇಶದಿಂದ ಈಗಾಗಲೇ ಪ್ರಾಯೋಗಿಕವಾಗಿ ಕ್ಯೂ ಆರ್‌ ಕೋಡ್‌ ವ್ಯವಸ್ಥೆ ಅಳವಡಿಸಲಾಗಿದೆ. ಇದೀಗ ಎಲ್ಲ ವಾರ್ಡ್‌ಗಳಿಗೂ ಈ ವ್ಯವಸ್ಥೆಯನ್ನು ಪರಿಚಯಿಸಲಾಗುತ್ತಿದೆ. ಈಗಾಗಲೇ ಮನೆಗಳಿಗೆ ಕ್ಯೂ ಆರ್‌ ಕೋಡ್‌ ಅಳವಡಿಸುವ ಕೆಲಸ ಪ್ರಗತಿಯಲ್ಲಿದೆ. -ಪ್ರೇಮಾನಂದ ಶೆಟ್ಟಿ,  ಮನಪಾ ಮೇಯರ್‌

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.