ಗುಣಮಟ್ಟ ಕಡಿಮೆ ಮಾಡುವ ಕೀಟ ಪತ್ತೆ; ಅಡಿಕೆ ಬೆಳೆಗೆ ಮತ್ತೊಂದು ಸಂಕಷ್ಟ


Team Udayavani, Jan 11, 2022, 6:35 AM IST

ಗುಣಮಟ್ಟ ಕಡಿಮೆ ಮಾಡುವ ಕೀಟ ಪತ್ತೆ; ಅಡಿಕೆ ಬೆಳೆಗೆ ಮತ್ತೊಂದು ಸಂಕಷ್ಟ

ಗುತ್ತಿಗಾರು: ಹಳದಿ ರೋಗ, ಕೊಳೆರೋಗ, ಬೆಂಕಿರೋಗ ಇತ್ಯಾದಿಗಳಿಂದ ಬಸವಳಿದಿರುವ ಅಡಿಕೆ ಬೆಳೆಗಾರನನ್ನು ಮತ್ತಷ್ಟು ಹೈರಾಣಾಗಿಸಲು ಮತ್ತೊಂದು ಕೀಟ ಬಾಧೆ ಆರಂಭವಾಗಿದೆ.

ಅಡಿಕೆಯ ಗುಣಮಟ್ಟವನ್ನು ಕಡಿಮೆ ಮಾಡಬಲ್ಲ ಸಣ್ಣ ಗಾತ್ರದ ಜೀರುಂಡೆಯಂತಿರುವ ಕ್ಸಿಲೋಸಾಂಡ್ರಸ್‌ ಕ್ರಾಸಿಯಸ್ಕಾಲಸ್‌ (xylosandrus crasiyaskuls) ಪ್ರಭೇದದ ಕೀಟವೊಂದನ್ನು ಸಿಪಿಸಿಐಆರ್‌ ವಿಜ್ಞಾನಿಗಳು ಪತ್ತೆ ಮಾಡಿದ್ದಾರೆ. ವಾತಾವರಣದ ಏರುಪೇರು ಮತ್ತು ಹವಾಮಾನ ವೈಪರೀತ್ಯದಿಂದ ಭವಿಷ್ಯದಲ್ಲಿ ಗಂಭೀರ ಸಮಸ್ಯೆಯಾಗುವ ಆತಂಕ ಇದೆ.

ಎಳೆ ಅಡಿಕೆಯ ರಸ ಹೀರುವ ಪೆಂಟಾಟೊಮಿಡ್‌ ಬಗ್‌ ಮತ್ತು ಪೆರಿಯಾಂತ್‌ ಮೈಟ್‌ ಕೀಟಗಳ ಬಾಧೆ ಮಲೆನಾಡು ಹಾಗೂ ಬಯಲು ಸೀಮೆಯ ಹಲವು ಕಡೆಗಳಲ್ಲಿ ಈಗಾಗಲೇ ಇದೆ. ಇದರಿಂದ ಎಳೆ ಅಡಿಕೆಗಳು ಉದುರುತ್ತವೆ. ಈ ಹಿನ್ನೆಲೆಯಲ್ಲಿ ಪರಿಶೀಲನೆಗಾಗಿ ಸುಳ್ಯ ತಾಲೂಕಿನ ಮರ್ಕಂಜ ಮತ್ತು ಕಡಬ ತಾಲೂಕಿನ ಕಾಣಿಯೂರು ಗ್ರಾಮದ ತೋಟಗಳಿಗೆ ಭೇಟಿ ನೀಡಿದ ವಿಜ್ಞಾನಿಗಳ ತಂಡಕ್ಕೆ ಹೊಸ ಬಗೆಯ ಕೀಟ ಕಂಡುಬಂದಿದೆ.

ಜೀರುಂಡೆಯ ರೂಪ
ಹೊಸದಾಗಿ ಪತ್ತೆಯಾಗಿ ರುವ ಕೀಟವು 2.5ರಿಂದ 2.8 ಮಿ.ಮೀ. ಗಾತ್ರದ್ದಾಗಿದ್ದು, ಜೀರುಂಡೆಯ ರೂಪ ಹೊಂದಿದೆ. ವಯಸ್ಕ ಕೀಟವು 1.06ರಿಂದ 2.39 ಮಿ.ಮೀ. ಅಗಲದಲ್ಲಿ ಅಡಿಕೆಯನ್ನು ತೂತು ಮಾಡಿ ಪ್ರವೇಶಿಸುತ್ತದೆ. ಇದರೊಂದಿಗೆ ಆಂಬ್ರೋಸಿಯೆಲ್ಲಾ ರೋಪೆರಿ ಎಂಬ ಶಿಲೀಂಧ್ರ ಕೂಡ ಒಳಸೇರುತ್ತದೆ. ಒಳಗಡೆ ಕೀಟವು ಸಂತಾನೋತ್ಪತ್ತಿ ಮಾಡುತ್ತದೆ. ಶಿಲೀಂಧ್ರವು ಅದಕ್ಕೆ ಆಹಾರವಾಗಿರುತ್ತದೆ. ಇದರಿಂದ ಅಡಿಕೆಯ ಗುಣಮಟ್ಟ ಕಡಿಮೆಯಾಗುತ್ತದೆ. ರಂಧ್ರದಿಂದ ಹೊರಬರುವ ಪುಡಿ (ಹಿಕ್ಕೆ)ಯಿಂದ ಅಡಿಕೆ ಮೇಲೆ ಕೀಟ ದಾಳಿಯಾಗಿರುವುದನ್ನು ತಿಳಿಯಬಹುದಾಗಿದೆ. ಕೀಟ ಮತ್ತು ಶಿಲೀಂಧ್ರದ ಸಹಜೀವನ ಇಲ್ಲಿ ಪ್ರಮುಖವಾಗಿ ಕಂಡುಬರುತ್ತದೆ.

ಶಿಲೀಂಧ್ರವು ಅಡಿಕೆಯ ಒಳಗೆ ಕಪ್ಪು ಕಲೆಗಳನ್ನು ಉಂಟುಮಾಡುತ್ತದೆ. ಇದರಿಂದ ಅಡಿಕೆಯ ತೂಕ ಕಡಿಮೆಯಾಗುವುದಲ್ಲದೆ ಗುಣಮಟ್ಟದ ಕುಸಿಯುತ್ತದೆ. ಸದ್ಯ ಕೀಟದ ಹಾವಳಿಯ ಪ್ರಾಥಮಿಕ ಪ್ರಕರಣಗಳು ವರದಿಯಾಗಿವೆ, ಗಂಭೀರ ಪರಿಣಾಮ ಬೀರಿಲ್ಲ. ಕೀಟಗಳ ನಿರ್ವಹಣೆ ಕ್ರಮಗಳನ್ನು ಬಗ್ಗೆ ಅಭಿವೃದ್ಧಿಪಡಿಸುತ್ತಿದ್ದೇವೆ ಎಂದು ವಿಟ್ಲದ ಸಿಪಿಸಿಐಆರ್‌ಯ ಯುವ ವಿಜ್ಞಾನಿಗಳಾದ ಡಾ| ಶಿವಾಜಿ ತುಬೆ ಮತ್ತು ಡಾ| ಭವಿಷ್ಯ ಹೇಳಿದ್ದಾರೆ.

ಇದನ್ನೂ ಓದಿ:ದೇವರಿಗೇ ಪೊಲೀಸ್‌ ಸಮವಸ್ತ್ರ! ಕಾಶಿಯ ಕೊತ್ವಾಲ ಬಾಬಾ ಕಾಲ ಭೈರವನಿಗೆ ಖಾಕಿ ಸಮವಸ್ತ್ರ

ನಮ್ಮ ವಿಜ್ಞಾನಿಗಳು ಅಡಿಕೆಯನ್ನು ಮುತ್ತಿಕೊಂಡಿರುವ ಹೊಸಕೀಟವನ್ನು ಗುರುತಿಸಿ ವರದಿ ಮಾಡಿದ್ದಾರೆ. ಪರಿಸರ ಸ್ನೇಹಿ ಕಾರ್ಯತಂತ್ರಗಳ ಮೂಲಕ ಅದರ ಚಟುವಟಿಕೆಯ ಅಧ್ಯಯನ ಮಾಡಲಾಗುತ್ತಿದೆ.
-ಡಾ| ಅನಿತಾ ಕರುಣ್‌,
ಸಿಪಿಸಿಐಆರ್‌ ನಿರ್ದೇಶಕಿ, ವಿಟ್ಲ

 

ಟಾಪ್ ನ್ಯೂಸ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Venur: ನಾಯಿಯನ್ನು ಹೊತ್ತೊಯ್ದ ಚಿರತೆ! ವೈರಲ್ ಆಯ್ತು ಸಿಸಿಟಿವಿ ದೃಶ್ಯ

Venur: ನಾಯಿಯನ್ನು ಹೊತ್ತೊಯ್ದ ಚಿರತೆ! ವೈರಲ್ ಆಯ್ತು ಸಿಸಿಟಿವಿ ದೃಶ್ಯ

Uppinangady ಬೆಲೆಬಾಳುವ ಮರ ಕಡಿದು ಸಾಗಾಟ

Uppinangady ಬೆಲೆಬಾಳುವ ಮರ ಕಡಿದು ಸಾಗಾಟ

Padmaraj ಅವರಿಂದ ಕೋಮು ಸಾಮರಸ್ಯ ಮರು ಸ್ಥಾಪನೆ: ರಮಾನಾಥ ರೈ ವಿಶ್ವಾಸ

Padmaraj ಅವರಿಂದ ಕೋಮು ಸಾಮರಸ್ಯ ಮರು ಸ್ಥಾಪನೆ: ರಮಾನಾಥ ರೈ ವಿಶ್ವಾಸ

Belthangady ಲಾರಿ-ಆಮ್ನಿ ನಡುವೆ ಅಪಘಾತ: ಚಾಲಕನಿಗೆ ಗಾಯ

Belthangady ಲಾರಿ-ಆಮ್ನಿ ನಡುವೆ ಅಪಘಾತ: ಚಾಲಕನಿಗೆ ಗಾಯ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.