ಚರಂಡಿ ಹೂಳು ಶೀಘ್ರ ತೆರವು ಅಗತ್ಯ

ಬಂಟ್ವಾಳ ಪುರಸಭೆ ವ್ಯಾಪ್ತಿಯ ವಿವಿಧ ಭಾಗ

Team Udayavani, Mar 28, 2022, 9:25 AM IST

bantwal

ಬಂಟ್ವಾಳ: ಈ ಬಾರಿ ಮಳೆಗಾಲ ಬೇಗನೆ ಆರಂಭಗೊಳ್ಳುವ ಲಕ್ಷಣ ಕಂಡುಬರುತ್ತಿದೆ. ಹೀಗಾಗಿ ನಗರ ಸ್ಥಳೀಯಾಡಳಿತಗಳು ಶೀಘ್ರದಲ್ಲಿ ಸಿದ್ಧಗೊಳ್ಳಬೇಕಾದ ಅನಿವಾರ್ಯ ಎದುರಾಗಿದೆ. ಬಂಟ್ವಾಳ ನಗರದ ರಾಜಕಾಲುವೆಗಳಲ್ಲಿ ಹೂಳು ತೆಗೆಯುವ ಕಾಮಗಾರಿ ಆರಂಭಗೊಳ್ಳಬೇಕಿದ್ದು, ಪುರಸಭೆ ಕಾರ್ಯೋನ್ಮುಖವಾಗಬೇಕಿದೆ. ನಗರ ಭಾಗದಲ್ಲಿ ಹರಿಯುವ ನಾಲ್ಕೈದು ಬೃಹತ್‌ ತೋಡುಗಳಲ್ಲಿ ಹೂಳು ತುಂಬಿಕೊಂಡಿದ್ದು, ಪ್ರಸ್ತುತ ನೀರು ನಿಲ್ಲುತ್ತಿದೆ. ಅದು ಸರಾಗವಾಗಿ ಹರಿಯದೆ ಇದ್ದರೆ ಮಳೆಗಾಲದಲ್ಲಿ ಇನ್ನಷ್ಟು ತೊಂದರೆಯಾಗುವ ಆತಂಕವಿದೆ. ಜತೆಗೆ ಸಣ್ಣಪುಟ್ಟ ಚರಂಡಿಗಳು ಕೂಡ ಹದಗೆಟ್ಟಿದ್ದು, ಅವುಗಳ ಹೂಳು ತೆಗೆಯುವ ಕಾರ್ಯಗಳು ತುರ್ತಾಗಿ ನಡೆಯಬೇಕಾದ ಅಗತ್ಯ ಇದೆ.

ಪೊದೆಗಳ ತೆರವೂ ಅಗತ್ಯ

ಬಂಟ್ವಾಳ ಪೇಟೆ, ಭಂಡಾರಿ ಬೆಟ್ಟು, ಬಸ್ತಿಪಡು, ಮೆಲ್ಕಾರ್‌ ಮೊದಲಾದ ಭಾಗಗಳಲ್ಲಿ ತೋಡು ಗಳಲ್ಲಿ ಹೂಳಿನ ಜತೆಗೆ ಪೊದೆಗಳು ಕೂಡ ತುಂಬಿ ಹೋಗಿವೆ. ಹೀಗಾಗಿ ಅದರ ತೆರವು ಕೂಡ ನಡೆಯಬೇಕಿದೆ. ಹೂಳು ತೆಗೆದು ಪೊದೆಗಳನ್ನು ಹಾಗೇ ಬಿಟ್ಟಲ್ಲಿ ಮಳೆಗಾಲದಲ್ಲಿ ನೀರು ಸರಾಗವಾಗಿ ಹರಿಯಲು ತೊಂದರೆ ಎದುರಾಗಲಿದೆ. ಬಿ.ಸಿ.ರೋಡ್‌-ಜಕ್ರಿಬೆಟ್ಟು ಹೆದ್ದಾರಿಯ ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ. ಕಾಮಗಾರಿ ಪರಿಣಾಮ ಇಲ್ಲಿನ ಚರಂಡಿ ಅವ್ಯ ವಸ್ಥೆಯಿಂದ ಕೆಲವು ಮನೆಗಳ ಅಂಗಳಕ್ಕೆ ಕೆಸರು ನೀರು ನುಗ್ಗಿತ್ತು. ಹೀಗಾಗಿ ನೂತನವಾಗಿ ನಿರ್ಮಿಸಲಾದ ಚರಂಡಿಗಳಿಗೆ ಸಂಪರ್ಕ ಕಲ್ಪಿಸಲಾಗಿದೆಯೇ ಎಂಬುದನ್ನೂ ಖಚಿತಪಡಿಸಿಕೊಳ್ಳಬೇಕಿದೆ.

ಕೃತಕ ನೆರೆ ಭೀತಿ

ಬಂಟ್ವಾಳ ಪುರಸಭೆ ವ್ಯಾಪ್ತಿಯ ಬಿ.ಸಿ.ರೋಡ್‌, ಪಾಣೆಮಂಗಳೂರು , ಮೆಲ್ಕಾರ್‌ ಭಾಗದಲ್ಲಿ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗಾಗಿ ತಗ್ಗು ಪ್ರದೇಶಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಮಣ್ಣು ತುಂಬಿಸಲಾಗಿದೆ. ಈ ಎಲ್ಲ ಪ್ರದೇಶಗಳಲ್ಲಿ ಮಳೆಗಾಲದಲ್ಲಿ ನೀರು ನಿಲ್ಲುತ್ತಿದ್ದು, ಈ ಬಾರಿ ಇತರ ಕಡೆಗಳಿಗೆ ನೀರು ನುಗ್ಗಿ ಕೃತಕ ನೆರೆಯ ಭೀತಿಯೂ ಇದೆ. ಇವೆಲ್ಲ ನೇತ್ರಾವತಿ ನದಿ ಹಾಗೂ ತೋಡುಗಳ ಕಿನಾರೆ ಪ್ರದೇಶಗಳಾಗಿದ್ದು, ಸಾಕಷ್ಟು ಕಡೆಗಳ ನೀರು ತಗ್ಗು ಪ್ರದೇಶಕ್ಕೆ ಹರಿದು ಬಳಿಕ ನದಿ ಸೇರುತ್ತಿದ್ದವು. ಆದರೆ ಈಗ ಮಣ್ಣು ಹಾಕಿರುವುದರಿಂದ ನೀರು ಸರಾಗವಾಗಿ ಹರಿಯುವುದಕ್ಕೂ ತೊಂದರೆ ಎದುರಾಗಬಹುದು. ಹೆದ್ದಾರಿಗಾಗಿ ಮಣ್ಣು ತುಂಬಿರುವ ಜತೆಗೆ ಕೆಲವೆಡೆ ಖಾಸಗಿ ವ್ಯಕ್ತಿಗಳು ಜಮೀನಿನ ತಗ್ಗು ಪ್ರದೇಶಗಳಿಗೆ ಮಣ್ಣು ತುಂಬಿದ್ದಾರೆ. ಇದರಿಂದಲೂ ಕೃತಕ ನೆರೆ ಸೃಷ್ಟಿಯ ಆತಂಕವಿದೆ.

ಟೆಂಡರ್‌ ಕರೆದು ಕಾಮಗಾರಿ

ಮಳೆಗಾಲ ಸಿದ್ಧತೆಯ ಹಿನ್ನೆಲೆಯಲ್ಲಿ ಚರಂಡಿಯ ಹೂಳು ತೆಗೆಯುವುದು ಸೇರಿ ಇತರ ಕಾಮಗಾರಿಗಳಿಗೆ ಶೀಘ್ರದಲ್ಲಿ ಟೆಂಡರ್‌ ಕರೆದು ಕಾಮಗಾರಿ ಆರಂಭಿಸುತ್ತೇವೆ. ಪ್ರಸ್ತುತ ಟೆಂಡರ್‌ ಆಗದೆ ಕಾಮಗಾರಿ ನಡೆದಿಲ್ಲ ಎಂದು ಬಂಟ್ವಾಳ ಪುರಸಭೆ ಮುಖ್ಯಾಧಿಕಾರಿ ಲೀನಾ ಬ್ರಿಟ್ಟೋ ತಿಳಿಸಿದ್ದಾರೆ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.