ಮೂಡುಬಿದರೆ ಜವಳಿ ವರ್ತಕರ ಸಂಘದ ಅಧ್ಯಕ್ಷ ಆರ್. ರವೀಂದ್ರ ಪೈ ನಿಧನ


Team Udayavani, Jun 27, 2021, 1:20 PM IST

ಜವುಳಿ ವರ್ತಕರ ಸಂಘದ ಅಧ್ಯಕ್ಷ ಆರ್. ರವೀಂದ್ರ ಪೈ ನಿಧನ

ಮೂಡುಬಿದರೆ: ಮೂಡುಬಿದರೆ ಜವುಳಿ ವರ್ತಕರ ಸಂಘದ ಅಧ್ಯಕ್ಷ ಆರ್. ರವೀಂದ್ರ ಪೈ (59) ರವಿವಾರ ನಿಧನ ಹೊಂದಿದರು.

ಪತ್ನಿ , ಇಬ್ಬರು ಪುತ್ರಿಯರನ್ನು ಅವರು ಅಗಲಿದ್ದಾರೆ. ತೀವ್ರ ಹೃದಯಾಘಾತವೇ  ಕಾರಣವೆಂದು ತಿಳಿದುಬಂದಿದೆ.

ಶ್ರೀ ಮಹಾವೀರ ಕಾಲೇಜಿನಲ್ಲಿ ವಿಜ್ಞಾನ ಪದವಿ ಗಳಿಸಿ, ಅದಾಗಲೇ ಪಿತ ಆರ್. ಪಾಂಡುರಂಗ ಪೈ ಅವರು ಸ್ಥಾಪಿಸಿ ಮುನ್ನಡೆಸುತ್ತಿದ್ದ ‘ಭಾರತ್ ಟೆಕ್ಸ್ ಟೈಲ್ಲ್ಸ್ ‘ನಲ್ಲಿ ತಂದೆ ಹಾಗೂ ಅಣ್ಣ ರಾಮಚಂದ್ರ ಪೈ ಜತೆ ವ್ಯವಹಾರದಲ್ಲಿ ಅನುಭವ ಗಳಿಸಿ ಮುಂದೆ ಮೂಡುಬಿದಿರೆಯ ಜವುಳಿ ಅದರಲ್ಲೂ ಸಿದ್ಧ ಉಡುಪುಗಳಲ್ಲಿ ಹೊಸ ಟ್ರೆಂಡ್ ಸೆಟ್ ಮೂಡಿಸಿದ “ಸಿದ್ಧ” ಹೆಸರಿನ ಉಡುಪುಗಳ ಮಳಿಗೆ ಯನ್ನು ಸ್ಥಾಪಿಸಿದರು. ಸಿದ್ಧ ರೆಡಿಮೇಡ್ ಶರ್ಟ್ಗಳ ತಯಾರಿಕಾ ಘಟಕವನ್ನೂ ಮೂಡುಬಿದಿರೆ ಯಲ್ಲಿ ಮೊದಲ ಬಾರಿಗೆಂಬಂತೆ ಆರಂಭಿಸಿ ಮೂಡುಬಿದಿರೆ ಯ ಹೊರಗಿನ ಮಾರುಕಟ್ಟೆ ಗಳಿಗೂ ಪೂರೈಸತೊಡಗಿದರು. ಮುಂದೆ “ಸಿದ್ಧ” ಪೂರ್ಣ ಪ್ರಮಾಣದ , ವಿಸ್ತೃತ ಜವುಳಿ ಮಳಿಗೆಯಾಗಿ ರೂಪುಗೊಂಡಿತು. ಸಾಕಷ್ಟು ಮಂದಿಗೆ ಉದ್ಯೋಗ ಅವಕಾಶ ಲಭಿಸಿತು.

ಇದನ್ನೂ ಓದಿ: ವದಂತಿಗಳಿಗೆ ಕಿವಿಗೊಡಬೇಡಿ, ಹಿಂಜರಿಕೆ ಬಿಟ್ಟು ಲಸಿಕೆ ಪಡೆಯಿರಿ: ಪ್ರಧಾನಿ ಮೋದಿ

ಯುವಕನಾಗಿದ್ದಾಗ ಕತೆ,ಕವನ ಬರೆಯುತ್ತಲಿದ್ದು, ಉದಯವಾಣಿ ಸಿನಿಮಾ ಪುಟಕ್ಕೆ ‘ಸೂರ್ಯ ಮೂಡುಬಿದಿರೆ’ ಹೆಸರಿನಲ್ಲಿ ನೂರಿಪ್ಪತ್ತಕ್ಕೂ ಅಧಿಕ ಸಿನಿ- ಲೇಖನಗಳನ್ನು ಬರೆದಿದ್ದರು.

ರಂಗಕರ್ಮಿ ಐ.ಕೆ. ಬೊಳುವಾರು ಸಂಚಾಲಿತ ಮೂಡುಬಿದಿರೆ ಯ  ಚದುರಂಗ ಸ್ವಾಧ್ಯಯನ ನಾಟಕ ಶಾಲೆಯ ನಾಟಕಗಳಲ್ಲೂ ಕಾಣಿಸಿಕೊಂಡಿದ್ದರು. ಅವಿಭಜಿತ ದ.ಕ.ಜಿಲ್ಲೆಯ ಕಾರ್ಕಳ ತಾಲೂಕಿನ (ಮೂಡುಬಿದಿರೆ ಸಹಿತ)ಕಾರ್ಯನಿರತ ಪತ್ರಕರ್ತರ ‌ಸಂಘ ಮೂಡುಬಿದಿರೆ  ಸಮಾಜಮಂದಿರದಲ್ಲಿ ಏರ್ಪಡಿಸಿದ್ದ ವಿಧಾನಸಭಾ ಅಭ್ಯರ್ಥಿಗಳ ಜತೆಗೆ ಮತದಾರರ ಮುಖಾಮುಖಿ ಎಂಬ ಯಶಸ್ವೀ ಕಾರ್ಯಕ್ರಮ ಸಂಯೋಜನೆ ಯಲ್ಲಿ  ಸಕ್ರಿಯ ಪಾತ್ರ ವಹಿಸಿದ್ದರು.  ಮೂಡುಬಿದಿರೆ ವೆಂಕಟರಮಣ ದೇವಳದಲ್ಲಿ ಮಹೋತ್ಸವ ನಿಮಿತ್ತ ನಡೆಯುತ್ತಿದ್ದ ಸಾಂಸ್ಕೃತಿಕ ವಿಶೇಷವಾಗಿ ರಸಪ್ರಶ್ನೆ ಕಾರ್ಯಕ್ರಮ ಸಂಯೋಜನೆ ಅವರ ಆಸಕ್ತಿಗಳಲ್ಲಿ ಒಂದಾಗಿತ್ತು.

ಶಾಸಕ ಉಮಾನಾಥ ಕೋಟ್ಯಾನ್, ಮಾಜಿ ಸಚಿವ ಅಭಯಚಂದ್ರ, ಮೂಡುಬಿದಿರೆ ಚೌಟರ ಅರಮನೆ ಕುಲದೀಪ ಎಂ., ಡಾ. ಎಂ. ಮೋಹನ ಆಳ್ವ, ವೆಂಕಟರಮಣ ಮತ್ತು ಹನುಮಂತ ದೇವಾಲಯ ಗಳ ಆಡಳಿತ ಮೊಕ್ತೇಸರ ಜಿ.ಉಮೇಶ ಪೈ,ಉದ್ಯಮಿ ಶ್ರೀಪತಿ ಭಟ್, ಅಬುಲಾಲ ಪುತ್ತಿಗೆ, ಜವುಳಿ ವರ್ತಕರ ಸಂಘದ ಗೌರವಾಧ್ಯಕ್ಷ ಪ್ರಭಾತ್ ಚಂದ್ರ ಜೈನ್, ಕಾರ್ಯದರ್ಶಿ ಎನ್. ಸದಾಶಿವರಾವ್ , ಮೂಡುಬಿದಿರೆ ಯ ವಿವಿಧ ರಂಗಗಳ ಪ್ರಮುಖರು, ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳು ಮೃತರ ಅಂತಿಮ ದರ್ಶನಗೈದು ಶ್ರದ್ಧಾಂಜಲಿ ಸಲ್ಲಿಸಿದರು.

ಟಾಪ್ ನ್ಯೂಸ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.