ರಾ. ಹಿರಿಯರ ಆ್ಯತ್ಲೆಟಿಕ್ಸ್: ಮಹಾರಾಷ್ಟ್ರಕ್ಕೆ ಪ್ರಶಸ್ತಿ
Team Udayavani, Apr 16, 2018, 11:52 AM IST
ಮಂಗಳೂರು: ಭಾರತ ಕಿರಿಯರ ಆ್ಯತ್ಲೆಟಿಕ್ ಫೆಡರೇಶನ್ (ಇಂಡಿಯನ್ ಮಾಸ್ಟರ್ ಆ್ಯತ್ಲೆಟಿಕ್ಸ್)ನ
ಅನುಮೋದನೆಯೊಂದಿಗೆ ದ.ಕ. ಜಿಲ್ಲಾ ಹಿರಿಯರ ಆ್ಯತ್ಲೆಟಿಕ್ ಅಸೋಸಿಯೇಶನ್ ಮತ್ತು ಕರ್ನಾಟಕ ರಾಜ್ಯ
ಹಿರಿಯರ ಆ್ಯತ್ಲೆಟಿಕ್ ಅಸೋಸಿಯೇಶನ್ನ ಜಂಟಿ ಸಹಯೋಗದಲ್ಲಿ ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ನಡೆದ 38ನೇ ರಾಷ್ಟ್ರೀಯ ಹಿರಿಯರ ಆ್ಯತ್ಲೆಟಿಕ್ ಕ್ರೀಡಾಕೂಟದಲ್ಲಿ ಮಹಾರಾಷ್ಟ್ರ ಪ್ರಶಸ್ತಿ ಜಯಿಸಿದ್ದರೆ ಕರ್ನಾಟಕ ರನ್ನರ್ ಅಪ್ ಸ್ಥಾನ ಪಡೆದಿದೆ.
ನಾಲ್ಕು ದಿನಗಳ ಕಾಲ ನಡೆದ ಈ ಕ್ರೀಡಾಕೂಟದಲ್ಲಿ ಕರ್ನಾಟಕ ಸಹಿತ ವಿವಿಧ ರಾಜ್ಯಗಳ 1,600 ಹಿರಿಯ ಆ್ಯತ್ಲೀಟ್ಗಳು ಭಾಗವಹಿಸಿದ್ದರು. 400ಕ್ಕೂ ಹೆಚ್ಚು ವಿಭಾಗಗಳಲ್ಲಿ ಸ್ಪರ್ಧೆ ನಡೆದಿವೆ. ವಿಶೇಷ ಆಮಂತ್ರಿತರಾಗಿ ಶ್ರೀಲಂಕಾದ 47 ಆ್ಯತ್ಲೀಟ್ಗಳು ಭಾಗ ವಹಿಸಿದ್ದು ವಿಶೇಷವಾಗಿತ್ತು.
ಸಮಾರೋಪ ಸಮಾರಂಭದಲ್ಲಿ ಶ್ರೀದೇವಿ ಎಜುಕೇಶನ್ ಟ್ರಸ್ಟ್ ಚೇರ್ಮನ್ ಸದಾನಂದ ಶೆಟ್ಟಿ ಮಾತನಾಡಿ, ಈ ಬಾರಿಯ ಕ್ರೀಡಾಕೂಟ ಮಂಗಳೂರಿನಲ್ಲಿ ನಡೆದಿದ್ದು ಹೆಮ್ಮೆಯ ವಿಷಯ. ಇದರೊಂದಿಗೆ ಮಂಗಳೂರಿನಲ್ಲಿಯೂ ಸಮರ್ಥವಾಗಿ ಕ್ರೀಡಾಕೂಟಗಳನ್ನು ಆಯೋಜಿಸಬಹುದು ಎಂದು ಹೇಳಿದರು.
ಮುಖ್ಯ ಅತಿಥಿಗಳಾಗಿ ಇಂಡಿಯನ್ ಮಾಸ್ಟರ್ ಆ್ಯತ್ಲೆಟಿಕ್ನ ಚೇರ್ಮನ್ ಅಮರೇಂದ್ರ ರೆಡ್ಡಿ, ಐ.ಎಂ.ಎ. ಹಿರಿಯ ಉಪಾಧ್ಯಕ್ಷ ಧರ್ಮಪಾಲ ಶರ್ಮ, ಸಂಘಟನಾ ಸಮಿತಿಯ ಅಧ್ಯಕ್ಷ ಕೆ.ತೇಜೋಮಯ, ದ. ಕ. ಮಾಸ್ಟರ್ ಆ್ಯತ್ಲೆಟಿಕ್ ಅಸೋಸಿಯೇಶನ್ ಅಧ್ಯಕ್ಷ ಕೆ.ಎಸ್.ಕೋದಂಡ ರಾಮೇಗೌಡ, ಇಂಡಿಯಾ ಮಾಸ್ಟರ್ ಆ್ಯತ್ಲೆಟಿಕ್ನ ಕಾರ್ಯದರ್ಶಿ ಜೆರಾಲ್ಡ್ ಡಿ”ಸೋಜಾ, ಸಂಘಟನಾ ಕಾರ್ಯದರ್ಶಿ ರೈಮಂಡ್ ಡಿ”ಸೋಜಾ ಉಪಸ್ಥಿತರಿದ್ದರು.
ಏಷ್ಯನ್ ಆ್ಯತ್ಲೆಟಿಕ್ಸ್ಗೆ ಆಯ್ಕೆ
ಈ ಕ್ರೀಡಾಕೂಟದಲ್ಲಿ ವಿಜೇತರಾದ ಆ್ಯತ್ಲೀಟ್ಗಳು ಮುಂದಿನ ಆಗಸ್ಟ್ 18, 19ರಂದು ಶ್ರೀಲಂಕಾದಲ್ಲಿ ನಡೆಯಲಿರುವ ಏಷ್ಯನ್ ಮಾಸ್ಟರ್ ಆ್ಯತ್ಲೆಟಿಕ್ ಕ್ರೀಡಾಕೂಟದಲ್ಲಿ ಭಾಗವಹಿಸಲು ಅರ್ಹತೆ ಗಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ
Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ
Lok Sabha Polls: ಸ್ಟ್ರಾಂಗ್ ರೂಂಗಳಲ್ಲಿ ಮತಯಂತ್ರಗಳು ಸುಭದ್ರ
Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ
MUST WATCH
ಹೊಸ ಸೇರ್ಪಡೆ
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ