Tulu Movie “ರಾಪಟ’ ತುಳು ಚಲನಚಿತ್ರ ತೆರೆಗೆ
Team Udayavani, Dec 1, 2023, 11:32 PM IST
ಮಂಗಳೂರು: ಬೊಳ್ಳಿ ಮೂವೀಸ್ ಹಾಗೂ ಅವಿಕಾ ಪ್ರೊಡಕ್ಷನ್ಸ್ ನಿರ್ಮಾಣದ ಡಾ| ದೇವದಾಸ್ ಕಾಪಿಕಾಡ್ ಕಥೆ, ಚಿತ್ರಕಥೆ, ಸಂಭಾಷಣೆ, ಸಾಹಿತ್ಯ ಬರೆದು, ಅರ್ಜುನ್ ಕಾಪಿಕಾಡ್ ನಿರ್ದೇಶನದ “ರಾಪಟ’ ತುಳು ಚಲನಚಿತ್ರ ಶುಕ್ರವಾರ ಕರಾಳಿಯಾದ್ಯಂತ ತೆರೆ ಕಂಡಿದೆ.
ಡಾ| ದೇವದಾಸ್ ಕಾಪಿಕಾಡ್ ಉದ್ಘಾಟಿಸಿ ಮಾತಾಡಿ, ತುಳುವರಿಗೆ ಒಂದು ಉತ್ತಮ ಗುಣಮಟ್ಟದ ಸಿನೆಮಾ ನೀಡಬೇಕು ಎಂಬ ಉದ್ದೇಶದಿಂದ “ರಾಪಟ’ ಚಲನಚಿತ್ರ ಮಾಡಿದ್ದೇವೆ. ಎಲ್ಲರೂ ಪ್ರೀತಿಯಿಟ್ಟು ಚಿತ್ರಮಂದಿರಕ್ಕೆ ಬಂದು ಚಲನಚಿತ್ರ ನೋಡಿದರೆ ನಮ್ಮ ಪ್ರಯತ್ನ ಸಾರ್ಥಕ. ತುಳು ಭಾಷೆಯಲ್ಲಿ ಬರುವ ಎಲ್ಲ ಸಿನೆಮಾಗಳನ್ನೂ ತುಳುವರು ಪ್ರೋತ್ಸಾಹಿಸಬೇಕು ಎಂದರು.
ಹರೀಶ್ ಶೇರಿಗಾರ್ ಮಾತನಾಡಿ, ಒಳ್ಳೆಯ ಸಿನೆಮಾಗಳನ್ನು ಖಂಡಿತಾ ತುಳುವರು ಪ್ರೋತ್ಸಾಹಿಸುತ್ತಾರೆ ಎಂದರು.
ಹಾಸ್ಯ ದಿಗ್ಗಜರ ಸಮಾಗಮ: ತುಳುನಾಡಿನ ಹಾಸ್ಯ ದಿಗ್ಗಜರು ರಾಪಟ ಚಿತ್ರದಲ್ಲಿ ನಟಿಸಿದ್ದು, ತಾಂತ್ರಿಕ ವಿಭಾಗದಲ್ಲೂ ಅನುಭವಿ ತಂಡ ಕೆಲಸ ಮಾಡಿದೆ. ಸಂಪೂರ್ಣ ಹಾಸ್ಯ, ಮನೋರಂಜನೆಯ “ರಾಪಟ’ದಲ್ಲಿ ಉತ್ತಮ ಕತೆ ಇದೆ. ಅನೂಪ್ ಸಾಗರ್ ನಾಯಕ ನಟನಾಗಿ ಹಾಗೂ ನಿರೀಕ್ಷಾ ಶೆಟ್ಟಿ ನಾಯಕಿಯ ಪಾತ್ರದಲ್ಲಿದ್ದಾರೆ. ದೇವದಾಸ್ ಕಾಪಿಕಾಡ್, ಅರವಿಂದ ಬೋಳಾರ್, ಭೋಜರಾಜ್ ವಾಮಂಜೂರು, ಸಾಯಿ ಕೃಷ್ಣ ಕುಡ್ಲ, ದೀಪಕ್ ರೈ ಪಾಣಾಜೆ, ರೂಪಶ್ರೀ ವರ್ಕಾಡಿ , ಪ್ರಕಾಶ್ ತೂಮಿನಾಡು, ವಿಕೀಶಾ, ರವಿರಾಮ ಕುಂಜ ಮುಂತಾದವರು ನಟಿದ್ದಾರೆ.
ಸಹ ನಿರ್ದೇಶಕರಾಗಿ ಶನಿಲ್ ಗುರು, ಸಿನೆಮಾಟೋಗ್ರಾಫರ್ ಅಗಿ ಸಚಿನ್ ಎಸ್. ಶೆಟ್ಟಿ, ಎಕ್ಸಿಕ್ಯೂಟಿವ್ ಪ್ರೊಡ್ನೂಸರ್ ಸಂದೀಪ್ ಶೆಟ್ಟಿ, ಎಡಿಟರ್ ಯಶ್ವಿನ್ ಕೆ. ಶೆಟ್ಟಿಗಾರ್, ಸಂಗೀತ ಪ್ರಸಾದ್ ಕೆ. ಶೆಟ್ಟಿ, ನಿರ್ಮಾಪಕರಾಗಿ ಸಂತೋಷ್ ಸುವರ್ಣ, ಸೂರ್ಯಕಾಂತ್ ಸುವರ್ಣ, ರಾಜನ್ ರಾಕೇಶ್ ಶೆಟ್ಟಿ, ಆಶಿಕಾ ಸುವರ್ಣ, ದೇವಿಕಾ ಆಚಾರ್ಯ, ಶೈಲರಾಜ್ ಪೂಜಾರಿ, ಅಭಿ ಶೆಟ್ಟಿ, ಮನೋಜ್ ಶೆಟ್ಟಿ, ಯಕ್ಷಿತ್ ಶೆಟ್ಟಿ, ಮಧು ಕುಮಾರ್ ಕಾರ್ಯನಿರ್ವಹಿಸಿದ್ದಾರೆ.
ವೇದಿಕೆಯಲ್ಲಿ ಶರ್ಮಿಳಾ ಕಾಪಿಕಾಡ್, ಚಿತ್ರ ನಿರ್ದೇಶಕ ಅರ್ಜುನ್ ಕಾಪಿಕಾಡ್, ಮನಪಾ ಸದಸ್ಯ ಕಿರಣ್ ಕೋಡಿಕಲ್, ಚಿತ್ರವಿತರಕ ಸಚಿನ್ ಎ.ಎಸ್. ಉಪ್ಪಿನಂಗಡಿ, ಕೆಮರಾಮನ್ ಸಚಿನ್ ಶೆಟ್ಟಿ, ಶನಿಲ್ ಗುರು, ಚಿತ್ರ ನಿರ್ಮಾಪಕ ಹರೀಶ್ ಶೇರಿಗಾರ್, ತುಳು ಚಲನ ಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಆರ್. ಧನರಾಜ್, ಭೋಜರಾಜ್ ವಾಮಂಜೂರ್, ಅನೂಪ್ ಸಾಗರ್, ನಿರೀಕ್ಷಾ ಶೆಟ್ಟಿ, ಕಾವ್ಯ ಅರ್ಜುನ್ ಕಾಪಿಕಾಡ್, ದಿವ್ಯಾ ಸಚಿನ್ ಶೆಟ್ಟಿ, ಅನಿಲ್ ರಾಜ್ ಉಪ್ಪಳ, ಯತೀಶ್ ಬೈಕಂಪಾಡಿ, ಪತ್ರಕರ್ತ ಬಾಳ ಜಗನ್ನಾಥ ಶೆಟ್ಟಿ, ಸಂತೋಷ್ ಸುವರ್ಣ, ನಿರ್ಮಾಪಕಿ ಆಶಿಕಾ ಸುವರ್ಣ, ದಿನೇಶ್ ಶೆಟ್ಟಿ, ಹರಿ, ಕಿಶೋರ್ ಕೊಟ್ಟಾರಿ, ಅಶ್ವಿಥ್ ಕೊಟ್ಟಾರಿ ಉಪಸ್ಥಿತರಿದ್ದರು.
ಲಕ್ಷ್ಮೀಶ ಸುವರ್ಣ ಕಾರ್ಯಕ್ರಮ ನಿರ್ವಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Hubli; ಅಂಜಲಿ ಅಂಬಿಗೇರ ಪ್ರಕರಣ ತನಿಖೆ ಸಿಐಡಿಗೆ ವಹಿಸಲಿ: ಸಂತೋಷ್ ಲಾಡ್
Smiling Buddha; ಬುದ್ಧ ನಕ್ಕ ಗಳಿಗೆಗೆ ಸ್ವರ್ಣ ಸಂಭ್ರಮ; ಮೊದಲ ಪರಮಾಣು ಪರೀಕ್ಷೆಗೆ 50 ವರ್ಷ
Crime: ಜಗಳ ವೇಳೆ ತಳ್ಳಿದಾಗ ವಿದ್ಯುತ್ ತಂತಿ ಮೇಲೆ ಬಿದ್ದ ಯುವಕ ಸಾವು: 2 ಆರೋಪಿಗಳ ಬಂಧನ
ಇನ್ಸ್ಪೆಕ್ಟರ್ ಹೆಸರಲ್ಲಿ ಸುಲಿಗೆ: ಬೆಸ್ಕಾಂ ಎಂಜಿನಿಯರ್ ಸೆರೆ
Bengaluru: 14 ಲಕ್ಷ ರೂ. ಒಡವೆ ಕದಿದ್ದ ಬಾಲಕ ವಶಕ್ಕೆ